ಬೆಂಗಳೂರು | ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.

ಏಕಕಾಲದಲ್ಲಿ ಆರ್‌ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಆತ್ಮಾನಂದ ಕಾಲೋನಿಯ ಫ್ಲಾಟ್‌ವೊಂದರ ಕೊಠಡಿಯ ಮಂಚದಡಿ ಕಂತೆ ಕಂತೆ ನೋಟುಗಳನ್ನು ಬಚ್ಚಿಡಲಾಗಿತ್ತು. ಕಾರಿನಲ್ಲಿ ಹಣ ಸಾಗಾಟ ಮಾಡುವ ಸುಳಿವು ಪಡೆದ ಐಟಿ ಅಧಿಕಾರಿಗಳು ಗುರುವಾರ ಸಾಯಂಕಾಲ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ದಾಳಿ ನಡೆಸಿದ್ದಾರೆ.

ಈ ವೇಳೆ, ಆತ್ಮಾನಂದ ಕಾಲೋನಿಯ ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಚದ ಕೆಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಆದರೆ, ಪತ್ತೆಯಾದ ನೋಟಿನ ರಾಶಿಯ ಬಾಕ್ಸ್‌ಗಳು ಯಾರಿಗೆ ಸೇರಿದ್ದು ಎಂದು ತಿಳಿದುಬಂದಿಲ್ಲ. ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಟಾಕಿ ದುರಂತ | ಗಾಯಾಳು ಚಿಕಿತ್ಸೆಗೆ ಹಣ ಪಡೆದ ಸೇಂಟ್‌ ಜಾನ್ಸ್‌ ಆಸ್ಪತ್ರೆ ವಿರುದ್ಧ ಎಫ್‌ಐಆರ್‌

ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಗಣೇಶ ಬ್ಲಾಕ್​ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...