ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಶುಕ್ರವಾರ ಸಂಜೆ ನಡೆದ ಅಗ್ನಿ ಅವಘಡ ಪ್ರಕರಣವನ್ನು ಪೊಲೀಸ್‌ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ, ಪ್ರಕರಣದ ಕುರಿತು ಪೊಲೀಸ್‌ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ”ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದೆ. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ತಿಳಿಸಲಾಗಿದೆ. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...