ಬೆಂಗಳೂರು | ಕನ್ನಡೇತರರಿಗಾಗಿ ಉಚಿತ ಕನ್ನಡ ಕಲಿಕಾ ಕೇಂದ್ರ ಆರಂಭ

Date:

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಗಿದೆ.

ಕೇಂದ್ರವು 3 ತಿಂಗಳ ಕೋರ್ಸ್‌ನಲ್ಲಿ ಒಟ್ಟು 36 ಗಂಟೆಗಳ ಅವಧಿಯ ಕಲಿಕಾ ತರಗತಿಗಳನ್ನು ನಡೆಸಿ, ಭಾಗವಹಿಸುವವರಲ್ಲಿ ಕನ್ನಡದಲ್ಲಿ ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಕಲಿಯುವವರ ಅನುಕೂಲಕ್ಕೆ ಅನುಗುಣವಾಗಿ ತರಗತಿ ಸಮಯವನ್ನು ನಿಗದಿಪಡಿಸಲಾಗಿದೆ. ವಾರಕ್ಕೆ ಮೂರು ಗಂಟೆಗಳ ಕಾಲ ತರಗತಿ ನಿಗದಿಪಡಿಸಲಾಗಿದ್ದು, ಅಗತ್ಯವಿದ್ದರೆ ಅವಧಿಯನ್ನು ವಿಸ್ತರಿಸಬಹುದು. ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಸರ್ಕಾರ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಮಾಣಪತ್ರ ದೊರೆಯುತ್ತದೆ. ಒಂದು ತರಗತಿಯಲ್ಲಿ 30 ಜನರನ್ನು ಮಾತ್ರ ನಿಗದಿಪಡಿಸಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಹೊಸ ತರಗತಿಯು ಪ್ರಾರಂಭವಾಗುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 21 at 11.07.26 AM

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರೊ. ನಿರಂಜನರಾಧ್ಯ ವಿ ಪಿ ಕನ್ನಡ ಕಲಿಕಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಮಾತೃಭಾಷೆಯ ಮೂಲಕವೇ ಎರಡನೇ ಭಾಷೆಯನ್ನು ಕಲಿಯಬೇಕು. ಭಾಷೆಯ ಬಗ್ಗೆ ಅಭಿಮಾನವಿರಲಿ, ಆದರೆ ದುರಭಿಮಾನ ಬೇಡ. ಭಾಷೆಯನ್ನು ಸಹಕಾರ ಸಾಮರಸ್ಯದ ಮೂಲಕ ಕಲಿಯಬೇಕೇ ಹೊರತು ಸಂಘರ್ಷ ಅಥವಾ ಭಯದಿಂದಲ್ಲ. ಕನ್ನಡದ ನೆಲದಲ್ಲಿ ಎಲ್ಲವನ್ನೂ ಪಡೆವ ಕನ್ನಡೇತರರು, ಕನ್ನಡ ಕಲಿತು ಕನ್ನಡಿಗರ ಜೊತೆ ಶಾಂತಿಯುತ ಸಹಬಾಳ್ವೆ ನಡೆಸಲು ಹಿಂದೇಟು ಹಾಕಬಾರದು. ಕನ್ನಡಿಗರ ಶಾಂತಿ ಸಂಯಮವನ್ನು ಅರಿತು ನಡೆಯಬೇಕು” ಎಂದರು.

ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಲಯಾಳಂ ಮಿಷನ್ ಕರ್ನಾಟಕದ ಅಧ್ಯಕ್ಷ ಕೆ. ದಾಮೋದರನ್, ಟಾಮಿ ಜೆ. ಅಲುಂಕಲ್, ನ್ಯಾಯವಾದಿ ಬುಶ್ರ ವಲಪ್ಪಿಲ್, ಆರ್ಟ್ ಆಫ್ ಲಿವಿಂಗ್‌ನ ಆರ್ ಶ್ರೀನಿವಾಸ್, ಪ್ರವಾಸಿ ಮಲಯಾಳಿ ಅಸೋಸಿಯೇಷನ್ ​​ವೈಟ್‌ಫೀಲ್ಡ್ ಅಧ್ಯಕ್ಷ ರಮೇಶ್ ಕುಮಾರ್ ವಿ, ಕಾರ್ಯದರ್ಶಿ ರಾಗೇಶ್ ಪಿ, ಸಂತೋಷ್ ಕುಮಾರ್, ಕೇರಳ ಸಮಾಜ ವೈಟ್‌ಫೀಲ್ಡ್ ಜೋನ್ ಸಂಚಾಲಕ ಸುರೇಶ್ ಕುಮಾರ್ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಮಧ್ಯರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಕರ್ನಾಟಕ ಸರ್ಕಾರದಿಂದ ವಿಶೇಷ ತರಬೇತಿ ಪಡೆದಿರುವ ಡಾ. ಸುಷ್ಮಾ ಶಂಕರ್ ತರಗತಿಗಳನ್ನು ಮುನ್ನಡೆಸಲಿದ್ದಾರೆ.
ತರಬೇತಿ ಪಡೆದ ಪ್ರೊ. ರಾಕೇಶ್ ವಿ.ಎಸ್ ಮತ್ತು ರೆಬಿನ್ ರವೀಂದ್ರನ್ ತರಗತಿಗಳನ್ನು ನಡೆಸಲಿದ್ದಾರೆ ಎಂದು ಕಲಿಕಾ ಕೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...