ಬೆಂಗಳೂರು | ಗುತ್ತಿಗೆ ಧೋರಣೆ ಕೈಬಿಟ್ಟು ಸಿಎಚ್‌ಒ ನೌಕರರನ್ನು ಖಾಯಂ ಮಾಡಿ: ಆರ್ ಮಾನಸಯ್ಯ

Date:

ಆರೋಗ್ಯ ನೌಕರರ ಬಗ್ಗೆ ಇರುವ ಗುತ್ತಿಗೆ ಧೋರಣೆಯನ್ನು ಕೈಬಿಟ್ಟು ಸಿಎಚ್‌ಒ ನೌಕರರನ್ನು ಖಾಯಂ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಟಿಯುಸಿಐನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸಮುದಾಯ ಆರೋಗ್ಯ ನೌಕರರ ಮುಷ್ಕರ ನಡೆಯಿತು.

ಪ್ರಧಾನ ಕಾರ್ಯದರ್ಶಿ ಹಾಗೂ ನೌಕರರ ಸಂಘದ ಗೌರವಾಧ್ಯಕ್ಷ ಆರ್ ಮಾನಸಯ್ಯ ಮಾತನಾಡಿ, “ರಾಜ್ಯ ಸರ್ಕಾರ ಸಂಧಾನ ಧೋರಣೆ ಕೈಬಿಟ್ಟು 6,192 ಸಿಎಚ್‌ಒ ನೌಕರರನ್ನು ಖಾಯಂಗೊಳಿಸಬೇಕು” ಎಂದು ಒತ್ತಾಯಿಸಿದರು.

ಸಿಎಚ್‌ಒ ಮುಷ್ಕರ 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಗ್ಯ ಇಲಾಖೆ ಇತರೆ ಸಿಬ್ಬಂದಿಗೆ ಚಿಕ್ಕ ವೇತನ ಹೆಚ್ಚಳ ಸಿಎಚ್ಒಗಳಿಗೆ ಸಿಗದಾಗಿದೆ. ಶೇ.15ರಷ್ಟು ವೇತನ ಹೆಚ್ಚಳ ಮಾಡಬೇಕು. ಸುಪ್ರೀಂ ಕೋರ್ಟ್ ತೀರ್ಮಾನ ಉಲ್ಲಂಘಿಸಿ ಗುತ್ತಿಗೆ ಪದ್ಧತಿಯನ್ನು ಸರ್ಕಾರವೇ ಮುಂದುವರಿಸಿರುವುದು ಘೋರ ಅನ್ಯಾಯ.‌ ಜೀವರಕ್ಷಣೆ ಕರ್ತವ್ಯದಲ್ಲಿರುವ ನಮ್ಮ ನೌಕರರ ಜೀವನದ ಬಗ್ಗೆ ಕನಿಷ್ಟ ಕಾಳಜಿ ತೋರದ ಸರ್ಕಾರಕ್ಕೆ ಧಿಕ್ಕಾರ”‌ ಎಂದರು.

ಸಿಎಚ್‌ಒ ಮುಷ್ಕರ 2

“ಸರಣಿ ಸಂಧಾನಗಳು ವಿಫಲಗೊಂಡ ಪರಿಣಾಮವಾಗಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕ ಕಾಯ್ದೆ ಪ್ರಕಾರ ಮುಂಗಡ ನೋಟಿಸ್ ನೀಡಿಯೇ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿರುವುದರಿಂದ ರಾಜ್ಯದ 6,192 ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳು ಸ್ಥಗಿತಗೊಂಡಿವೆ. ಮುಖ್ಯವಾದ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಮುಷ್ಕರ ಮುಂದುವರಿಸುವ ನಿರ್ಧಾರ ಮೊಳಗಿಸಲಾಗಿದೆ. ಇಲಾಖೆಯಲ್ಲಿ ನೌಕರರ ಮೇಲೆ ನಡೆಯುತ್ತಿರುವ ಚಿತ್ರ ಹಿಂಸೆ ಕಿರುಕುಳ ಲಂಚಗುಳಿತನ ಮುಂತಾದ ವಿಷಯಗಳು ಮುಷ್ಕರದಲ್ಲಿ ಪ್ರಸ್ತಾಪವಾಗಿವೆ. ಈ ಮುಷ್ಕರ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳದಿದ್ದರೆ ನಾಳೆಯೂ ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸರ್ಕಾರದಲ್ಲಿ 190 ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ

ಟಿಯುಸಿಐ ರಾಜ್ಯ ಉಪಾಧ್ಯಕ್ಷ ಎಂ ಗಂಗಾಧರ, ಸಂಘದ ಅಧ್ಯಕ್ಷ ಮಮಿತ್ ಗಾಯಕ್ವಾಡ, ಉಪಾಧ್ಯಕ್ಷ ಬಸವಾನಂದ, ಪ್ರಧಾನ ಕಾರ್ಯದರ್ಶಿ ಚೆನ್ನಪ್ಪ ನಾಯಕ, ರಾಜ್ಯ ಮುಖಂಡ ಸಂಜೀವ್ ಗಾಂಧಿ, 28 ಜಿಲ್ಲೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...