ಬೆಂ. ಗ್ರಾಮಾಂತರ | ಪಡಿತರಕ್ಕೆ ಸಮಯ ನಿಗದಿ; ತಿಂಗಳು ಪೂರ್ತಿ ವಿತರಣೆ ಮಾಡದೇ ಬಡವರ ಅನ್ನಕ್ಕೆ ಕನ್ನ

Date:

ರಾಜ್ಯಾದ್ಯಂತ ಸರ್ಕಾರ ಪಡಿತರ ಖಾತರಿ ಯೋಜನೆಯಡಿ ಪಡಿತರ ವಿತರಣೆ ಕಾರ್ಯ ನಿರ್ವಹಿಸುತ್ತಿರುವ ನ್ಯಾಯ ಬೆಲೆ ಅಂಗಡಿಗಳು ಪೂರ್ಣ ಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ನಿಯಮ ಮೀರಿ ಪಡಿತರ ವಿತರಣೆಗೆ ಮುಂದಾಗಿರುವ ನ್ಯಾಯ ಬೆಲೆ ಅಂಗಡಿಗಳು ತಡವಾಗಿ ಬಂದವರಿಗೆ ಪಡಿತರ ವಿತರಣೆ ಮಾಡದೆ, ಬಡವರ ಅನ್ನಕ್ಕೆ ಕನ್ನ ಹಾಕುತ್ತಿವೆ. ಹೀಗಾಗಿ ಬಡವರು, ಕೂಲಿ ಕಾರ್ಮಿಕರು ಬಿಸಿಲನ್ನು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತು ಪಡಿತರ ಪಡೆಯುವ ದುಸ್ಥಿತಿ ಎದುರಿಸುತ್ತಿದ್ದಾರೆ.

ಹೌದು, ನಿಯಮದ ಪ್ರಕಾರ ನ್ಯಾಯ ಬೆಲೆ ಅಂಗಡಿಗಳು ವಾರದಲ್ಲಿ ಮಂಗಳವಾರ ಮತ್ತು ಸರ್ಕಾರಿ ರಜೆ ದಿನವನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಬೆಳಗ್ಗೆ 7 ರಿಂದ 12ಗಂಟೆ ಮತ್ತು ಮದ್ಯಾಹ್ನ 4 ರಿಂದ 8 ಗಂಟೆವರೆಗೂ ಪಡಿತರ ವಿತರಣೆ ಮಾಡಬೇಕು. ಆದರೆ, ಈ ನಿಯಮವನ್ನು ಉಲ್ಲಂಘಿಸುತ್ತಿರುವ ಪಡಿತರ ವಿತರಣಾ ಕೇಂದ್ರಗಳು (ನ್ಯಾಯ ಬೆಲೆ ಅಂಗಡಿಗಳು) ಬೇಕಾಬಿಟ್ಟಿ ವಿತರಣೆಗೆ ಮುಂದಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯ ಬೆಲೆ ಅಂಗಡಿಗಳು ಈ ಸಮಯದ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ವಂಚಿಸುತ್ತಿವೆ. ನ್ಯಾಯ ಬೆಲೆ ಅಂಗಡಿ ಮಾಲೀಕರು, ವಿತರಕರು ಅವರಿಗೆ ಬೇಕಾದ ಸಮಯದಲ್ಲಿ (ತಿಂಗಳಿಗೆ ಎರಡು ಅಥವಾ ಮೂರು ದಿನಗಳು) ಮಾತ್ರ ಪಡಿತರ ವಿತರಣೆ ಮಾಡುತ್ತಿದ್ದಾರೆ.

ತಡವಾಗಿ ಬಂದವರಿಗೆ ಪಡಿತರ ಕಟ್

ಅನಿವಾರ್ಯ ಕಾರಣ ಯಾರಾದರೂ ತಡವಾಗಿ ಬಂದರೆ ಅಂತವರಿಗೆ ಆ ತಿಂಗಳ ಪಡಿತರ ಇಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಬಡ ವರ್ಗದ ರೈತರು, ಕೂಲಿ ಕಾರ್ಮಿಕರು ಪಡಿತರ ವಂಚಿತರಾಗುತ್ತಿದ್ದು, ನ್ಯಾಯ ಬೆಲೆ ಅಂಗಡಿಗಳು ಪಡಿತರ ವಿತರಣೆಯಲ್ಲಿ ದೋಖಾ ಮಾಡುತ್ತಿವೆ. ಬಡವರ ಅನ್ನಕ್ಕೆ ಕನ್ನ ಹಾಕಲು ಮುಂದಾಗಿವೆ.

ನ್ಯಾಯ ಬೆಲೆ ಅಂಗಡಿಗಳು ಸರಕಾರದ ನಿಯಮದಂತೆ ಕರ್ತವ್ಯ ನಿರ್ವಹಿಸುತ್ತಿಲ್ಲ. ರೈತರು, ಬಡವರು ಮತ್ತು ಕೂಲಿ ಕಾರ್ಮಿಕರು ಸರದಿ ಸಾಲಿನಲ್ಲಿ ನಿಂತು ಪರದಾಡುವ ಸ್ಥಿತಿ ತಂದೊಡ್ಡಿದ್ದಾರೆ. ತಡವಾಗಿ ಬಂದವರಿಗೆ ಅಕ್ಕಿ ಕೊಡದೆ ಇಲ್ಲ ಎಂದು ಹೇಳಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸರಕಾರ, ಇಲಾಖೆ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಯುವ ಸಂಚಲನ ರಾಜ್ಯಾಧ್ಯಕ್ಷ ಚಿದಾನಂದ್ ಆಗ್ರಹಿಸಿದ್ದಾರೆ.

ಕೇವಲ ಒಂದು ದಿನ ಮಾತ್ರ ಅಕ್ಕಿ ಕೊಡ್ತಾರೆ. ಬೆಳಗ್ಗೆ 7 ಗಂಟೆಯಿಂದ ಸಾಲಿನಲ್ಲಿ ನಿಂತರೆ  ಮಧ್ಯಾಹ್ನ 3 ಗಂಟೆಗೆ ಪಡಿತರ ಸಿಗುತ್ತದೆ. ತಡವಾದರೆ ಸರ್ವರ್ ಸಮಸ್ಯೆ, ಅಕ್ಕಿ ಮುಗಿದಿದೆ ಎಂದು ಇಲ್ಲಸಲ್ಲದ ಸಬೂಬು ಹೇಳಿ ಜನರನ್ನು ಮನೆಗೆ ಕಳಿಸುತ್ತಾರೆ ಎನ್ನುತ್ತಾರೆ ದೊಡ್ಡಬಳ್ಳಾಪುರದ ನಿವಾಸಿ ಶಭಾನ.

ಒಟ್ಟಾರೆಯಾಗಿ ಪಡಿತರ ವಿತರಣೆ ಸಮಯದಲ್ಲಿ ನಿಯಮ ಉಲ್ಲಘನೆಯಾಗುತ್ತಿರುವುದು ಒಂದೆಡೆಯಾದರೆ, ತಡವಾಗಿ ಬಂದವರಿಗೆ ಪಡಿತರ ವಿತರಣೆ ಮಾಡದೇ ಖಾಲಿ ಎಂದು ನೆಪ ಹೇಳಿ ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವುದು ಮತ್ತೊಂದೆಡೆಗಿನ ಗಂಭೀರ ಸಮಸ್ಯೆ. ಈ ಬಗ್ಗೆ ಇಲಾಖೆ ಶೀಘ್ರವೇ ಎಚ್ಚೆತ್ತು ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ ಎಂಬುದು ಪ್ರಜ್ಞಾವಂತ ಸಮಾಜದ ಆಗ್ರಹವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...