ಬೆಂಗಳೂರು | ನಿದ್ದೆಯಲ್ಲಿದ್ದಾಗ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ; ಸಹಜ ಸಾವೆಂದು ಕಥೆ ಕಟ್ಟಿದ್ದವ ಅರೆಸ್ಟ್

Date:

ಹೆಂಡತಿಗೆ ನಿದ್ರೆ ಮಾತ್ರೆ ನೀಡಿ ಆಕೆ ಗಾಢ ನಿದ್ದೆಯಲ್ಲಿದ್ದಾಗಲೇ ಪತಿಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿ ನಡೆದಿದೆ. ತಾನೇ ಕೊಂದು ಸಹಜ ಸಾವೆಂದು ಕಥೆ ಕಟ್ಟಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೇತನಾ (42) ಕೊಲೆಯಾದ ದುರ್ದೈವಿ. ಆರೋಪಿ ಪತಿ ಶರತ್ ಉತ್ತಂಗಿ (43) ಎಂಬವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೃತಳ ಸಂಬಂಧಿ ಅಕ್ಷಯ್ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಮೂಲದ ಶರತ್, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಒಂದು ಹೆಣ್ಣು ಮಗುವಿದೆ. ಆಗಾಗ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಫೆ.3ರಂದು ದಂಪತಿ ನಡುವೆ ಮತ್ತೆ ಗಲಾಟೆಯಾಗಿದೆ. ಜ್ವರದ ಮಾತ್ರೆಯ ಸೋಗಿನಲ್ಲಿ ಪತ್ನಿಗೆ ನಿದ್ರೆ ಮಾತ್ರೆ ನೀಡಿದ್ದ. ಬಳಿಕ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕತ್ತುಹಿಸುಕಿ ಪತಿ ಸಾಯಿಸಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ; ಜಲಮಂಡಳಿ ವಿರುದ್ಧ ಆಕ್ರೋಶ

“ತಲೆ ಸುತ್ತು ಬಂದಿದೆ ಎಂದು ಪತ್ನಿ ಚೇತನಾ ತನ್ನ ಬಳಿ ಹೇಳಿಕೊಂಡಿದ್ದಳು. ಹೀಗಾಗಿ ಜ್ವರದ ಮಾತ್ರೆ ನೀಡಿದೆ. ರಾತ್ರಿ ಎಂದಿನಂತೆ ಮಲಗಿದ್ದಳು. ಮಧ್ಯರಾತ್ರಿ 2.30ಕ್ಕೆ ಮಂಚದಿಂದ ಕೆಳಗೆ ಬಿದ್ದಿದ್ದಳು. ಕೂಡಲೇ ನೆಲಮಹಡಿಯಲ್ಲಿ ವಾಸವಿದ್ದವರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಮಾರ್ಗಮಧ್ಯೆದಲ್ಲಿ ಪತ್ನಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದರೆಂದು ಸಂಬಂಧಿಕರ ಮುಂದೆ ಸುಳ್ಳು ಕಥೆ ಕಟ್ಟಿದ್ದ. ಮೃತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಹಾಗೂ ಕೆನ್ನೆಯಲ್ಲಿ ತರಚಿದ ಗಾಯವಿರುವುದನ್ನು ಗಮನಿಸಿ ಹತ್ಯೆಯ ಶಂಕೆಯ ಮೇಲೆ ಸಂಬಂಧಿಕರು ದೂರು ನೀಡಿದ್ದರು. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...