ಬೆಂಗಳೂರು | ಪ್ರಾಣಿಗಳ ಅಪಘಾತ ಪ್ರಕರಣಗಳ ಹೆಚ್ಚಳ; ಎನ್‌ಜಿಒಗಳ ಆತಂಕ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕುಪ್ರಾಣಿಗಳ (ಪ್ರಮುಖವಾಗಿ ನಾಯಿ) ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಸಮಯದಲ್ಲಿ, ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳುವವರ ಸಂಖ್ಯೆಯಲ್ಲಿ ಕ್ರಮೇಣ ಕಡಿಮೆಯಾಗುತ್ತಿವೆ ಎಂದು ಹಲವಾರು ಎನ್‌ಜಿಒಗಳು ದೂರಿವೆ.

ಶನಿವಾರ (ಆಗಸ್ಟ್‌ 26) ಅಂತಾರಾಷ್ಟ್ರೀಯ ಶ್ವಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವಾರು ಎನ್‌ಜಿಒಗಳು ನಗರದಲ್ಲಿ ನಾಯಿಗಳ ಸಮಸ್ಯೆಗಳ ಕುರಿತು ಮಾತನಾಡಿವೆ.

“ರಾತ್ರಿಯ ವೇಳೆ ಬೀದಿನಾಯಿಗಳಿಗೆ ಹೆಚ್ಚಾಗಿ ವಿಷ ಹಾಕಲಾಗುತ್ತಿದೆ. ಇದನ್ನು ತಿಂದು ಸಾವನ್ನಪ್ಪಿದ ನಾಯಿಗಳ ದೇಹ 12 ಗಂಟೆಗಳಲ್ಲಿ ಕೊಳೆಯಲು ಪ್ರಾರಂಭವಾಗುತ್ತದೆ. ಅಪರಾಧಿಗಳನ್ನು ಹಿಡಿಯಬೇಕಾದರೆ, ಅವುಗಳು ಕೊಳೆಯದಂತೆ ಇಟ್ಟುಕೊಳ್ಳಬೇಕು. ಅದಕ್ಕಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಮತ್ತು ತುರ್ತು ಪ್ರತಿಕ್ರಿಯೆ ತಂಡದ ಅಗತ್ಯವಿದೆ” ಎಂದು ಹೆವೆನ್ ಅನಿಮಲ್ ವೆಲ್ಫೇರ್ ಟ್ರಸ್ಟ್‌ನ ಸಂಸ್ಥಾಪಕ ಟೋನಿ ಫ್ರೀರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸರ್ಕಾರಿ ಪಶು ಆಸ್ಪತ್ರೆಗಳನ್ನು 24 X 7 ತೆರೆದಿರಬೇಕು. ಆಗ ಯಾವುದೇ ಬೀದಿನಾಯಿ ವಿಷ ಸೇವಿಸಿದ್ದರೆ, ಮರಣೋತ್ತರ ಪರೀಕ್ಷೆಯ ಮೂಲಕ ತಕ್ಷಣ ಗುರುತಿಸಬಹುದು” ಎಂದು ಪ್ರಾಣಿ ಕಾರ್ಯಕರ್ತರು ಹೇಳಿದ್ದಾರೆ.

“ಸಾಕುನಾಯಿಗಳ ಮೇಲಿನ ಅಪಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ನಗರದಲ್ಲಿ ಬೀದಿ ನಾಯಿಗಳನ್ನು ರಕ್ಷಿಸಲು ಸರ್ಕಾರದಿಂದ ಉತ್ತಮ ಬೆಂಬಲ ದೊರೆಯುತ್ತಿಲ್ಲ. ಪ್ರಾಣಿಗಳ ಅಪಘಾತ ಪ್ರಕರಣಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಇದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ನಿರ್ದಿಷ್ಟ ವ್ಯಕ್ತಿಗಳನ್ನು ನೇಮಕ ಮಾಡಬೇಕು. ನಾಯಿಗಳಿಗೆ ವಿಷ ಹಾಕಲಾಗಿದೆಯೇ ಅಥವಾ ಮತ್ತಿತರ ಸಮಸ್ಯೆಗಳಿಂದ ಅವು ಸಾವನ್ನಪ್ಪಿವೆಯೇ ಎಂಬುದನ್ನು ವರದಿ ಮಾಡಬೇಕು. ಪ್ರಾಣಿ ರಕ್ಷಣೆಗೆ ಟೋಲ್ ಫ್ರೀ ಸಂಖ್ಯೆ ಆರಂಭಿಸಬೇಕು” ಎಂದಿದ್ದಾರೆ. 

“ನಗರದಲ್ಲಿ ಶ್ವಾನ ರಕ್ಷಕರೊಬ್ಬರು ಇತ್ತೀಚೆಗೆ 15 ನಾಯಿಗಳನ್ನು ತಮ್ಮ ಶೆಲ್ಟರ್‌ನಿಂದ ಹೊರಗಟ್ಟಿದ್ದಾರೆ. ಅವುಗಳಲ್ಲಿ ಕೆಲವು ನಾಯಿಗಳನ್ನು ಕಂಬಗಳಿಗೆ ಕಟ್ಟಿದ್ದಾರೆ. ಇನ್ನೂ ಕೆಲವನ್ನು ರಸ್ತೆಗಳಲ್ಲಿ ಬಿಟ್ಟಿದ್ದಾರೆ. ಈ ನಡುವೆ, ಎನ್ಜಿಒಗಳು ಮತ್ತು ಶೆಲ್ಟರ್‌ಗಳನ್ನು ನಡೆಸುತ್ತಿರುವ ವ್ಯಕ್ತಿಗಳು ಸಾಕುಪ್ರಾಣಿಗಳನ್ನು ಆಶ್ರಯ ಮನೆಗಳಿಗೆ ಸೇರಿಸುವುದನ್ನು ನಿಲ್ಲಿಸಿದ್ದಾರೆ. ಏಕೆಂದರೆ, ಆಶ್ರಯ ಶೆಲ್ಟರ್‌ಗಳಲ್ಲೂ ಹಣಕಾಸಿನ ಕೊರತೆ ಇದೆ” ಎಂದು ಹೇಳಿದ್ದಾರೆ.

“ಪ್ರತಿದಿನ ಸುಮಾರು 15-20 ಪ್ರಕರಣ ನೋಡುತ್ತಿದ್ದೇವೆ. ಬೀದಿ ಪಾಲಾದ ನಾಯಿಗಳನ್ನು ರಕ್ಷಿಸಲು ಬಯಸುತ್ತೇವೆ. ಆದರೆ, ನಾವು ಕ್ರೌಡ್ ಫಂಡಿಂಗ್ ಮೇಲೆ ಅವಲಂಬಿತರಾಗಿದ್ದೇವೆ. ಪ್ರಸ್ತುತವಾಗಿ ನಾವು ಆರ್ಥಿಕ ಮುಗ್ಗಟ್ಟಿನಲ್ಲಿದ್ದೇವೆ. ಲಕ್ಷಾಂತರ ರೂಪಾಯಿ ಆಸ್ಪತ್ರೆಯ ಬಿಲ್ ಬಾಕಿ ಉಳಿದಿದೆ” ಎಂದು ಪೆಟ್ ಅಡಾಪ್ಷನ್ ಟ್ರಸ್ಟ್‌ನ ಲಕ್ಷ್ಮಿ ಗೌಡ ಹೇಳಿದ್ದಾರೆ.

“ಸ್ಥಳದ ಕೊರತೆಯಿಂದಾಗಿ ಆರೋಗ್ಯಕರವಾಗಿರುವ ಯಾವುದೇ ಸಾಕುಪ್ರಾಣಿಗಳನ್ನು ಬೆಳೆಸಲು ನಮಗೆ ಸಾಧ್ಯವಾಗುತ್ತಿಲ್ಲ. ನಾವು ಅಪಘಾತ ಪ್ರಕರಣಗಳಲ್ಲಿ ಗಾಯಗೊಂಡ ಪ್ರಾಣಿಗಳಿಗೆ ತಕ್ಷಣದ ಚಿಕಿತ್ಸೆಯನ್ನು ಮಾತ್ರ ನೀಡುತ್ತಿದ್ದೇವೆ” ಎಂದು ಚಾರ್ಲಿಸ್ ಅನಿಮಲ್ ರೆಸ್ಕ್ಯೂ ಸೆಂಟರ್ (ಕೇರ್) ವ್ಯವಸ್ಥಾಪಕ ಕೀರ್ತನ್ ಆರ್ಪಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...