ಬೆಂಗಳೂರು | ಜೈಲಿನೊಳಗೆ ಕದ್ದು ಮೊಬೈಲ್‌ ಬಳಸುತ್ತಿದ್ದ ಕೈದಿಗಳ ತಂತ್ರಕ್ಕೆ ಬ್ರೇಕ್

Date:

ಪರಪ್ಪನ ಆಗ್ರಹಾರ ಜೈಲಿನಲ್ಲಿ ಮೊಬೈಲ್‌ ಇಟ್ಟುಕೊಂಡು ಹೊರಗಡೆ ಸಂಪರ್ಕ ಸಾಧಿಸುವ ಕೈದಿಗಳ ಆಟವನ್ನು ನಿಲ್ಲಿಸಲು ಬೆಂಗಳೂರು ಕಮೀಷನರ್ ಮುಂದಾಗಿದ್ದಾರೆ. ಇಲ್ಲಿ ಹೈ ಫ್ರೀಕ್ವೆನ್ಸಿ ಮೋಡ್ ಟವರ್ ನಿರ್ಮಿಸಲಾಗುತ್ತಿದ್ದು, ಇನ್ನು ಮುಂದೆ ಜೈಲಿನೊಳಗಿಂದಲೇ ನಡೆಯುವ ರೌಡಿ ಚಟುವಟಿಕೆಗಳಿಗೆ ಬ್ರೇಕ್‌ ಬೀಳಲಿದೆ.

ಕೆಲವು ಪ್ರಭಾವಿ ರೌಡಿಗಳು ಈವರೆಗೆ ಲಂಚ ನೀಡಿಯೋ, ಕದ್ದು ತರಿಸಿಯೋ ಜೈಲಿನೊಳಗೆ ಮೊಬೈಲ್‌ ಇಟ್ಟುಕೊಳ್ಳುತ್ತಿದ್ದರು. ಇಲ್ಲಿಂದಲೇ ಹೊರಗಿನ ಡೀಲಿಂಗ್‌ಗಳನ್ನು ನಡೆಸುತ್ತಿದ್ದರು. ಆದರೆ, ಇನ್ನು ಮುಂದೆ ಅಂತಹ ಸಾಹಸ ಮಾಡಿ ಮೊಬೈಲ್ ಇಟ್ಟುಕೊಂಡರೂ ಪ್ರಯೋಜನವಿಲ್ಲ. ಜೈಲಿನಿಂದ ಡೀಲ್ ಮಾಡುವ ರೌಡಿಗಳಿಗೆ ಕಮೀಷನರ್ ದಯಾನಂದ್ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ.

ಜೈಲಿನ ಕರೆಗಳನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡುವ ಹೈ ಫ್ರೀಕ್ವೆನ್ಸಿ ಮೋಡ್ ಟವರ್ ಇನ್‌ಸ್ಟಾಲ್‌ ಮಾಡಲಾಗುತ್ತಿದ್ದು, ಹೊಸ ತಂತ್ರಜ್ಞಾನದಿಂದಾಗಿ ಹೊರ ಹೋಗುವ ಮತ್ತು ಒಳಬರುವ ಕರೆಗಳು ಕೂಡ ನಿರ್ಬಂಧಕ್ಕೊಳಗಾಗಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಅಧಿಕಾರಿಗಳ ಜೊತೆ ಕಮೀಷನರ್ ಚರ್ಚೆ ನಡೆಸಿದ್ದು, ಕಾರಾಗೃಹ ಇಲಾಖೆ ಅಧಿಕಾರಿಗಳು ರೂಪುರೇಷೆ ರಚಿಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಂಜಾ ಮಾರಾಟ ಆರೋಪ ; ಮೂವರು ಮಹಿಳೆಯರ ಬಂಧನ

ಜೈಲಿನಿಂದ ಮೊಬೈಲ್ ಬಳಸಿ ಹಲವು ರೌಡಿಗಳು ಹೊರಗಡೆ ಡೀಲಿಂಗ್ ನಡೆಸುವ, ಜೈಲಿನಿಂದಲೇ ಸುಪಾರಿ ನೀಡಿ ದುಷ್ಕೃತ್ಯಗಳಲ್ಲಿ ಭಾಗಿ‌ಯಾಗುತ್ತಿರುವ ಹಿನ್ನೆಲೆ, ಜೈಲಿನ ಎಲ್ಲ ಅಕ್ರಮಗಳಿಗೂ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮುಂದಾಗಿದ್ದಾರೆ. ಜೈಲಿನಲ್ಲಿ ಡ್ರಗ್ಸ್ ಸರಬರಾಜು, ಮಾಫಿಯಾ ಯಾವುದೂ ಇರಬಾರದು ಎಂದು ಸೂಚನೆ ನೀಡಲಾಗಿದ್ದು, ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...