ಬೆಂಗಳೂರು | ವಿಭೂತಿಪುರ ಕೆರೆಯ ಸುತ್ತ ಸಿಸಿಟಿವಿ ಮತ್ತು ಬ್ಯಾರಿಕೇಡ್ ಅಳವಡಿಸಲು ನಿವಾಸಿಗಳ ಒತ್ತಾಯ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಎಚ್‌ಎಎಲ್‌ ಬಳಿ ಇರುವ ವಿಭೂತಿಪುರ ಕೆರೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ.

ಈ ಹಿಂದೆ ವಿಭೂತಿಪುರ ಕೆರೆಯಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ಮುಳುಗಿ ಸಾವನ್ನಪ್ಪಿದರು. ಈ ಘಟನೆಯ ಬಳಿಕ ಕೆರೆಯ ಸುತ್ತಮುತ್ತ ಸಿಸಿಟಿವಿ ಮತ್ತು ಬ್ಯಾರಿಕೇಡ್ ಹಾಕುವಂತೆ ತಲಕಾವೇರಿ ಲೇಔಟ್, ಬೃಂದಾವನ ಲೇಔಟ್, ವೀರಭದ್ರ ಲೇಔಟ್, ಅನ್ನಸಂದ್ಯಾಪಾಳ್ಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಐದು ವರ್ಷಗಳಲ್ಲಿ ಇಬ್ಬರು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 45 ಎಕರೆ ಪ್ರದೇಶದಲ್ಲಿರುವ ಈ ಕೆರೆಯ ಸುತ್ತ ಹೆಚ್ಚುವರಿ ಭದ್ರತೆ ಸಿಬ್ಬಂದಿ ನೇಮಕ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಭೂತಿಪುರ ಕೆರೆಸಂರಕ್ಷಣಾ ಸಮಿತಿಯ ಸದಸ್ಯೆ ಸತ್ಯವಾಣಿ ಶ್ರೀಧರ್ ಮಾತನಾಡಿ, “ಕೆರೆಯ ಅಭಿವೃದ್ಧಿಗೆ ಈ ಹಿಂದೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದ್ದರೂ, ಸುರಕ್ಷತೆಯ ಬಗ್ಗೆ ಕಾಳಜಿ ಇಲ್ಲದಂತಾಗಿದೆ. ಕೆರೆಯ ಸುತ್ತಮುತ್ತ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಕೆರೆಯ ಸುತ್ತ ಹಾಕಲಾಗಿದ್ದ ಬೇಲಿ ಮುರಿದು ಹೋದ ಕಾರಣ ಜಾನುವಾರುಗಳು ಕೆರೆಗೆ ಸುಲಭವಾಗಿ ಹೋಗುವಂತಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎನ್‌ಸಿಇಆರ್‌ಟಿ: ಶಿಕ್ಷಣತಜ್ಞ ನಿರಂಜನಾರಾಧ್ಯ ಆರೋಪ

“ಈ ಹಿಂದೆ ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆಗಳು ವರದಿಯಾಗುತ್ತಿದ್ದವು. ಇದೀಗ ಮತ್ತೊಂದು ಘಟನೆ ವರದಿಯಾಗಿದೆ. ಹುಡುಗರು ಮತ್ತು ಮಾದಕ ವ್ಯಸನಿಗಳು ಕೆರೆ ಪ್ರದೇಶದಲ್ಲಿ ಸ್ವಚ್ಛಂದವಾಗಿ ಓಡಾಡುತ್ತಾರೆ. ಕೆರೆಯ ಅಧಿಕಾರಿಗಳು ಮತ್ತು ಪೊಲೀಸರು ನಿಯಮಿತವಾಗಿ ಕ್ರಮಕೈಗೊಳ್ಳಬೇಕೇ ಹೊರತು ಘಟನೆ ಸಂಭವಿಸಿದಾಗ ಅಥವಾ ಯಾರಾದರೂ ದೂರು ನೀಡಿದಾಗಲ್ಲ” ಎಂದು ಹೇಳಿದರು.

“ಇದಲ್ಲದೇ ಮಾಂತ್ರಿಕರು ಅಥವಾ ಶಾಸ್ತ್ರಗಳನ್ನು ನೆರವೇರಿಸಿ ಕೆರೆಯ ಬಳಿಗೆ ಬಂದು ಹೂವು, ತೆಂಗಿನಕಾಯಿ, ವೀಳ್ಯದೆಲೆ ಎಸೆದ ಘಟನೆಗಳೂ ನಡೆದಿವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...