ಬೆಂಗಳೂರು | ಉದ್ದೇಶಪೂರ್ವಕವಾಗಿ ವ್ಯಕ್ತಿಯ ಮೇಲೆ ಸ್ಕಾರ್ಪಿಯೊ ಹತ್ತಿಸಿ ಹತ್ಯೆ: ಏನಿದು ಘಟನೆ?

Date:

ವಾಹನ ಸವಾರರೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆದು ಬೀಳಿಸಿ, ಉದ್ದೇಶಪೂರ್ವಕವಾಗಿ ಅವರ ಮೇಲೆ ವಾಹನ ಚಲಾಯಿಸಿ ಕೊಲೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ನಡೆದಿದೆ.

ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಹತ್ಯೆಯ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಕಾರ್ಪಿಯೋ ವಾಹನ ಚಾಲಕ ದ್ವಿಚಕ್ರ ವಾಹನ ಸವಾರನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ದೃಶ್ಯಾವಳಿಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆಯಾದ ವ್ಯಕ್ತಿಯನ್ನು ಅಸ್ಗರ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪ್ರಾಥಮಿಕ ಶಂಕಿತನನ್ನು ಅಮರೀನ್ ಎಂದು ಗುರುತಿಸಲಾಗಿದೆ.

ಕೊಲೆಯಾದ ವ್ಯಕ್ತಿ ಅಸ್ಗರ್ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದನು. ಅಸ್ಗರ್ ಅವರಿಂದ ಆರೋಪಿ ಅಮರೀನ್ ವಾಹನ ಪಡೆದಿದ್ದನು. ಅಸ್ಗರ್ ಮತ್ತು ಅಮರೀನ್ ನಡುವೆ ₹4 ಲಕ್ಷ ಹಣಕಾಸಿನ ವಿವಾದವಿತ್ತು. ಈ ಹಣಕಾಸಿನ ವಿವಾದ ಇದೀಗ ಹಿಂಸಾತ್ಮಕ ರೂಪಕ್ಕೆ ತಿರುಗಿ ಅಮರೀನ್, ಅಸ್ಗರ್ ಅವರ ಜೀವವನ್ನು ಬಲಿ ತೆಗೆದುಕೊಂಡಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರೀನ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಾಧಿಕಾರ ರಚನೆಯಾಗಬೇಕು: ನಿರಂಜನಾರಾಧ್ಯ.ವಿ.ಪಿ

ಘಟನೆ ದಿನ

ಅಕ್ಟೋಬರ್ 18ರ ಮಧ್ಯರಾತ್ರಿ 12:30ರ ಸುಮಾರಿಗೆ ಆರೋಪಿ ಅಮರೀನ್ ಎಸ್‌ಯುವಿ ವಾಹನದ ಮೂಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಸ್ಗರ್ ಅವರನ್ನು ಹಿಂಬಾಲಿಸುತ್ತಾ ಬಂದಿದ್ದಾನೆ. ಈ ವೇಳೆ, ಡಿಕ್ಕಿ ಹೊಡೆದು ಉರುಳಿಸಿದ್ದಾನೆ. ಕೆಳಗೆ ಬಿದ್ದ ಅಸ್ಗರ್ ಅವರು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ರಸ್ತೆಯ ಉದ್ದಗಲಕ್ಕೂ ಓಡಾಡಿದ್ದಾರೆ. ಆದರೂ ಬಿಡದ ಆರೋಪಿ ಅಮರೀನ್ ತನ್ನ ಎಸ್‌ಯುವಿ ಕಾರನ್ನು ಉದ್ದೇಶಪೂರ್ವಕವಾಗಿ ಅಸ್ಗರ್ ಮೇಲೆ ಹರಿಸಿದ್ದಾನೆ. ನಡು ರಸ್ತೆಯಲ್ಲಿ ರಾತ್ರಿಯ ಕಗತ್ತಲಲ್ಲಿ ದಾರುಣವಾಗಿ ಹತ್ಯೆ ಮಾಡಿದ್ದಾನೆ.

ಈ ಘಟನೆ ಸಂದರ್ಭದಲ್ಲಿ ಅಸ್ಗರ್ ಅವರ ಸಹಾಯಕ್ಕೆ ಯಾರು ತೆರಳಿಲ್ಲ ಎಂಬುದು ಸಾರ್ವಜನಿಕರು ಮಾಡಿದ ವಿಡಿಯೋ ಮೂಲಕ ತಿಳಿದು ಬರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...