ಬೆಂಗಳೂರು | ವೈದ್ಯಕೀಯ ಕಾಲೇಜು ನಡೆಸಲಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ: ಡಾ ಮಧುಸೂದನ ಕಾರಿಗನೂರು ಪ್ರಶ್ನೆ

Date:

ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ನಡೆಸಲು ಹಣವಿಲ್ಲವೆಂದು ಸರ್ಕಾರ ವಾದ ಮಾಡುತ್ತಿದೆ. ಆದರೆ ವೈದ್ಯಕೀಯ ಕಾಲೇಜು ನಡೆಸಲಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ ಎಂದು ಐಎಂಎ ಕೆಪಿಪಿಎಸ್ ಅಧ್ಯಕ್ಷರು ಹಾಗೂ ಐಎಂಎ ಕರ್ನಾಟಕ ಘಟಕದ ಮಾಜಿ ಅಧ್ಯಕ್ಷ ಡಾ. ಮಧುಸೂದನ್ ಕಾರಿಗನೂರ ಪ್ರಶ್ನಿಸಿದರು.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶೇ.15ರಷ್ಟು NRI ಕೋಟಾ ಹಿಂಪಡೆಯುವಂತೆ ಆಗ್ರಹಿಸಿ ಭಾನುವಾರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು.

“ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು NRI ಕೋಟಾ ಜಾರಿಗೊಳಿಸುವ ಮೂಲಕ, ಪ್ರತಿ ವೈದ್ಯಕೀಯ ಸೀಟನ್ನು 25 ಲಕ್ಷ ರೂಪಾಯಿಗಳಿಗೆ ನಿಗದಿ ಮಾಡುತ್ತ, ಸೇವೆಯಾದ ವೈದ್ಯಕೀಯ ಶಿಕ್ಷಣವನ್ನು ಸಂಪೂರ್ಣವಾಗಿ ವ್ಯಾಪಾರೀಕರಣಗೊಳಿಸುವ ಈ ನೀತಿಯನ್ನು ಕೂಡಲೇ ರಾಜ್ಯ ಸರ್ಕಾರ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವೈದ್ಯಕೀಯ ಕಾಲೇಜು ನಡೆಸುವಂತೆ ಆಗ್ರಹ

“ಹಿಂದೆ ವೈದ್ಯಕೀಯವು ಒಂದು ಸೇವಾ ಕ್ಷೇತ್ರವಾಗಿತ್ತು. ಆದರೆ ವೈದ್ಯಕೀಯ ಶಿಕ್ಷಣದ ಖಾಸಗೀಕರಣದ ಪರಿಣಾಮವಾಗಿ ಇಂದು ವೈದ್ಯರು ಮತ್ತು ರೋಗಿಗಳ ನಡುವಿನ ಸಂಬಂಧ ವ್ಯಾಪಾರ ಸಂಬಂಧವಾಗಿ ಬದಲಾಗುತ್ತಿದೆ. ಇಂದು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶೇ.15 NRI ಕೋಟಾ ತರುವುದರ ಮೂಲಕ ವೈದ್ಯಕೀಯ ಶಿಕ್ಷಣವನ್ನು ಸೂಪರ್ ಪ್ರೈವೆಟೈಸ್ ಮಾಡುವುದು ಸರ್ಕಾರದ ಹುನ್ನಾರವಾಗಿದೆ. NRI ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಮುಂದೆ ವೈದ್ಯರಾದಾಗ ಅವರಿಂದ ಸೇವೆಯನ್ನು ಬಯಸಲು ಸಾಧ್ಯವಿಲ್ಲ. ತತ್ಪರಿಣಾಮ ಇದು ಬಡವರಿಂದ ವೈದ್ಯಕೀಯ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಅಪಾಯ ಹೊಂದಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ನಗರದ ಖ್ಯಾತ ಮನೋವೈದ್ಯ ಶಶಿಧರ್ ಬಿಳಗಿ ಮಾತನಾಡಿ, “ಲಕ್ಷಾಂತ ರೂಪಾಯಿ ಹಣ ಪಾವತಿಸಿ ವೈದ್ಯರಾಗುತ್ತಿರುವ ವಿದ್ಯಾರ್ಥಿಗಳು ಸಮಾಜಕ್ಕೆ ಸೇವೆ ಸಲ್ಲಿಸುವ ಬದಲಾಗಿ ಸಾಮಾನ್ಯ ಜನರಿಂದ ಹಣ ಸುಲಿಗೆ ಮಾಡುವ ದಾರಿ ನೋಡುತ್ತಾರೆ. ಆದರೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು NRI ಕೋಟಾ ತರುವ ಮೂಲಕ ಸಮಾಜಕ್ಕೆ ನಿಜವಾಗಲೂ ಸೇವೆ ಸಲ್ಲಿಸಲು ಆಸಕ್ತರಾಗಿರುವ, ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಸೀಟುಗಳನ್ನು ಕಸಿದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ವೈದ್ಯಕೀಯ ಕಾಲೇಜು ನಡೆಸುವಂತೆ ಆಗ್ರಹ 1

ಎಐಡಿಎಸ್ಓನ ಅಖಿಲ ಭಾರತ ಉಪಾಧ್ಯಕ್ಷ ಮೃದುಲ್ ಸರ್ಕಾರ್ ಮಾತನಾಡಿ, “ದೇಶದಲ್ಲಿ ಪ್ರಥಮ ಬಾರಿಗೆ ಎನ್‌ಆರ್‌ಐ ಕೋಟಾವನ್ನು ಪಶ್ಚಿಮ ಬಂಗಾಳದಲ್ಲಿ ನೀತಿಯನ್ನು ಜಾರಿಗೊಳಿಸಿದಾಗ, ಎಐಡಿಎಸ್ಓ ನೇತೃತ್ವದಲ್ಲಿ ನಡೆದ ಹೋರಾಟದ ಪರಿಣಾಮ ಈ ನೀತಿಯನ್ನು ಹಿಂಪಡೆಯಬೇಕಾಯಿತು. ಅದೇ, ರೀತಿ ಕರ್ನಾಟಕದಲ್ಲಿ 2019ರಂದು ಈ ನೀತಿ ಜಾರಿಗೊಂಡಾಗ ವಿದ್ಯಾರ್ಥಿಗಳ ಹೋರಾಟದಿಂದಾಗಿ ಈ ನೀತಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಹಣದ ಅಭಾವ ಇರುವ ಕಾರಣ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್‌ಐ ಕೋಟಾ ತಂದಿರುವುದಾಗಿ ಹೇಳುವ ಸರ್ಕಾರ, ಎಲ್ಲ ಸಚಿವರು ಮತ್ತು ಶಾಸಕರು ತಮ್ಮ ಸಂಬಳವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದು, ಅವರ ದೋರಣೆಯನ್ನು ತೋರಿಸುತ್ತದೆ” ಎಂದು ದೂರಿದರು.

“ಒಂದೆಡೆ ಭ್ರಷ್ಟಾಚಾರ ಮತ್ತು ದುಂದುವೆಚ್ಚದಲ್ಲಿ ನಿರತರಾಗಿರುವ ಸರ್ಕಾರಗಳು ಇನ್ನೊಂದೆಡೆ ದೇಶದ ಕಾರ್ಪೊರೇಟ್ ಮನೆತಗಳ ತೆರಿಗೆ ಮನ್ನಾ ಮಾಡುತ್ತಿವೆ. ನೀಟ್‌ನಂತಹ ಪರೀಕ್ಷೆಗಳಿಂದ ಕೋಂಚಿಂಗ್‌ ಕಡ್ಡಾಯವಾಗಿದೆ. ಕೋಚಿಂಗಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡದೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಿಸುವುದು ಅಸಾಧ್ಯ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಎನ್‌ಇಪಿ-2020 ಮತ್ತು ಎನ್ಎಂಸಿ ನೀತಿಗಳು ವೈದ್ಯಕೀಯ ಶಿಕ್ಷಣದಲ್ಲಿ ವ್ಯಾಪಾರೀಕರಣವನ್ನು ಉತ್ತೇಜಿಸುತ್ತವೆ. ವೈದ್ಯಕೀಯ ಕ್ಷೇತ್ರವು ಅನೇಕ ಮಹನೀಯರ ತ್ಯಾಗ ಬಲಿದಾನದ ಮೇಲೆ ಬೆಳೆದಿದೆ. ಮಾನವನ ಏಳಿಗೆಗಾಗಿ ಮೀಸಲಿಡಬೇಕಾದ ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಾರೀಕರಣವನ್ನು ಎತ್ತಿ ಹಿಡಿಯುವ ಈ ನೀತಿಯ ವಿರುದ್ಧ ಹೋರಾಟವನ್ನು ಬಲಪಡಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿರಾ | ಮಕ್ಕಳಿಗಾದರೂ ಮಾಲಿನ್ಯಮುಕ್ತ ಪರಿಸರವನ್ನು ಉಳಿಸಿ : ಮಂಜುನಾಥ್ ಅಮಲಗೊಂದಿ

ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬಿ ಜೆ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಎಐಡಿಎಸ್ಓನ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರುಗಳಾದ ಅಭಯಾ ದಿವಾಕರ್, ಚಂದ್ರಕಲಾ, ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯ್ ಚಂದ್ರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಇದ್ದರು.

ವರದಿ : ಎಐಡಿಎಸ್ಓ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...