ಬೆಂಗಳೂರು | ಬನಶಂಕರಿ ತ್ಯಾಜ್ಯ ಸಂಸ್ಕಾರಣಾ ಘಟಕದಿಂದ ಸಮಸ್ಯೆ; ಸ್ಥಳೀಯರ ಆರೋಪ

Date:

ಬನಶಂಕರಿ 6ನೇ ಹಂತದ ಬಡಾವಣೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಆರಂಭವಾದಾಗಿನಿಂದಲೂ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡಾವಣೆಯ ಹೃದಯ ಭಾಗದಲ್ಲಿರುವ ಲಿಂಗದಗೀರನಹಳ್ಳಿಯಲ್ಲಿ ಗಿಡಗಳು ಬೆಳೆದುಕೊಂಡಿದ್ದು, ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಅವರು ಯಾವುದೇ ರೀತಿ ಸ್ಪಂದಿಸಿಲ್ಲ. ಇಲ್ಲಿಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಬನಶಂಕರಿ 6 ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಮನವಿ ಮಾಡಿದೆ.

ಎನ್ಜಿಟಿ ನಿಯಮಗಳನ್ನು ಅನುಸರಿಸುತ್ತಿಲ್ಲ. ಸ್ಥಾವರಕ್ಕೆ ಸುರಿಯುವ ತ್ಯಾಜ್ಯದ ಕೊಳಚೆ ನೀರು ಸಮೀಪದ ಸೋಂಪುರ ಕೆರೆಗೆ ಸೇರುತ್ತಿದೆ ಎಂದು ಸಂಘ ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“10 ದಿನಗಳ ಹಿಂದೆ ಕೆಎಸ್ಪಿಸಿಬಿಗೆ ಈ ಬಗ್ಗೆ ದೂರು ನೀಡಿದ್ದೇವೆ. ಮಂಡಳಿಯ ಅಧಿಕಾರಿಗಳು ಲೇಔಟ್ಗೆ ಭೇಟಿ ನೀಡಿ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸ್ಥಾವರದ ವಿರುದ್ಧ ಹಲವು ಬಾರಿ ಆಕ್ಷೇಪಣೆ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಸಂಘದ ಅಧ್ಯಕ್ಷ ಟಿ.ಎಸ್.ಮಹೇಶ್ ಆರೋಪಿಸಿದರು.

“ಬಡಾವಣೆಯಲ್ಲಿ 14 ಬ್ಲಾಕ್ಗಳಿದ್ದು, 4ನೇ ಬ್ಲಾಕ್ನ ಮಧ್ಯಭಾಗದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವಿದೆ. ಬಡಾವಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮನೆಗಳಿವೆ. ಘಟಕವು ಪ್ರತಿದಿನ ಸುಮಾರು 150 ಟನ್ ಹಸಿ ತ್ಯಾಜ್ಯವನ್ನು ನಿರ್ವಹಿಸುತ್ತದೆ. ಸ್ಥಾವರದ ಸಿಬ್ಬಂದಿಗಳು ವೈಜ್ಞಾನಿಕ ರೀತಿಯಲ್ಲಿ ಹಸಿ ತ್ಯಾಜ್ಯವನ್ನು ನಿರ್ವಹಣೆ ಮಾಡದೇ ಇರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ” ಎಂದು ನಿವಾಸಿಗಳು ಆರೋಪಿಸಿದ್ದಾರೆ.

“ಬಡಾವಣೆಯಲ್ಲಿ ಘಟಕ ನಿರ್ಮಾಣ ಮಾಡಬಾರದಿತ್ತು. ಇದನ್ನು ಸ್ಥಳಾಂತರ ಮಾಡಬೇಕು. ದುರ್ವಾಸನೆ ಕಡಿಮೆ ಮಾಡಲು ಗಿಡದಲ್ಲಿ ಬಳಸಿರುವ ರಾಸಾಯನಿಕಗಳಿಂದ ಅನೇಕರು ದದ್ದು, ತುರಿಕೆ, ಉರಿ ಮತ್ತಿತರ ಅಲರ್ಜಿಯಿಂದ ಬಳಲುತ್ತಿದ್ದಾರೆ. ಘಟಕವನ್ನು ಮೇಲ್ವಿಚಾರಣೆ ಮಾಡಲು ಕೆಎಸ್ಪಿಸಿಬಿಗೆ ಕೇಳಲಾಗಿದೆ. ಆದರೆ, ಯಾರೂ ಸ್ಪಂದಿಸಿಲ್ಲ” ಎಂದು ಸ್ಥಳೀಯ ನಿವಾಸಿ ಕೃಷ್ಣಮೂರ್ತಿ ಹೇಳಿದ್ದಾರೆ.

“ಸ್ಥಾವರದ ವಿರುದ್ಧ ಪ್ರತಿಭಟನೆ ನಡೆಸದಂತೆ ಕೆಲವು ನಿವಾಸಿಗಳಿಗೆ ಬೆದರಿಕೆ ಹಾಕಲಾಗಿದೆ. ನನ್ನ ಮನೆಯು ತ್ಯಾಜ್ಯ ಸಂಸ್ಕರಣಾ ಘಟಕದಿಂದ 500 ಮೀಟರ್ ದೂರದಲ್ಲಿದೆ. ನಿಯಮಗಳ ಪ್ರಕಾರ ಯಾವುದೇ ಬಫರ್ ವಲಯವನ್ನು ಗುರುತಿಸಲಾಗಿಲ್ಲ. 2015ರಲ್ಲಿ ಸ್ಥಾವರ ಬೆಳೆದ ಜಾಗದಲ್ಲಿ ಕಾಲೇಜು ನಿರ್ಮಿಸಲು ಮೂಲ ಯೋಜನೆ ರೂಪಿಸಲಾಗಿತ್ತು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...