ಬೆಂಗಳೂರು | ಗಣರಾಜ್ಯೋತ್ಸವದಲ್ಲಿ ಜೈಶ್ರೀರಾಮ್‌ ಘೋಷಣೆ; ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಭಾವಚಿತ್ರ ಇಡದೆ ಅವಮಾನ

Date:

ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿಡದೆ ಅವಮಾನ ಮಾಡಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆ ಕೂಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಬೆಂಗಳೂರು ನಗರದ ಯಲಹಂಕದ ನ್ಯಾಯಾಂಗ ಬಡಾವಣೆಯ ವಾಚನಾಲಯದಲ್ಲಿ ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅವಮಾನಿಸಿದ್ದಾರೆ.

ನ್ಯಾಯಮೂರ್ತಿ ಮತ್ತು ನ್ಯಾಯಾಧೀಶರನ್ನೊಳಗೊಡಂತೆ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಡಾ.ಅಂಬೇಡ್ಕರ್ ಅವರ ಹೆಸರನ್ನೂ ಪ್ರಸ್ಥಾಪಿಸದೆ ಸಂವಿಧಾನಕ್ಕೂ ಅವಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಜಂಟಿ ನಿರ್ದೇಶಕರು, ಭೂದಾಖಲೆ ಇಲಾಖೆ ಮತ್ತು ಕರ್ನಾಟಕದ ಉಚ್ಚ ನ್ಯಾಲಯದ ವಕೀಲರಾದ ಮುದ್ದು ರಂಗಪ್ಪ ಅವರು, ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “‌ಜನವರಿ 26ರ ಇಂದು ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿ ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅವಮಾನಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಅಂಬೇಡ್ಕರ್‌ ಅವರು ಭಾರತಕ್ಕೆ ನೀಡಿದ ಸಂವಿಧಾನದ ಭಿಕ್ಷೆಯಿಂದ ನ್ಯಾಯಾಂಗದ ಉನ್ನತ ಹುದ್ದೆಯನ್ನು ಅಲಂಕರಿಸಿದ ನ್ಯಾಯಾಧೀಶರುಗಳಾದ ಡಿ. ಕೃಷ್ಣಪ್ಪ ಮತ್ತು ಮಂಜುಳಾ ಚೆಲ್ಲೂರು ಅವರಿಂದಲೇ ಡಾ.ಅಂಬೇಡ್ಕರ್ ಅವರಿಗೆ ಅವಮಾನವಾಗಿದೆ. ಅಲ್ಲದೆ ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ” ಎಂದರು.

ಗಣರಾಜ್ಯೋತ್ಸವ 1

“ಜನಸಾಮಾನ್ಯರು‌, ಅಂಬೇಡ್ಕರ್ ಬಗ್ಗೆ ಅರಿಯದವರು ಅವರನ್ನು ಕೇವಲ ಒಂದು ಸಮುದಾಯದ ಐಕಾನ್‌ ಆಗಿ ಗುರುತಿಸುತ್ತಾರೆ. ಆದರೆ, ಅಂಬೇಡ್ಕರ್‌ ನೀಡಿರುವ ಸಂವಿಧಾನದ ಭಿಕ್ಷೆಯಿಂದ ಇಂದು ಅಧಿಕಾರ, ಹೆಸರು, ಹಣ ಶ್ರೀಮಂತಿಕೆ ಎಲ್ಲವನ್ನೂ ಪಡೆಯುತ್ತಿರುವ ನ್ಯಾಯಮೂರ್ತಿಗಳೇ ಈ ರೀತಿ ಅನ್ಯಾಯ ಎಸಗುತ್ತಿದ್ದು, ದ್ರೋಹ ಮಾಡುತ್ತಿದ್ದಾರೆ. ಸರಿತಪ್ಪುಗಳನ್ನು ಗುರುತಿಸಿ ನ್ಯಾಯ ನೀಡಬೇಕಾದ ನ್ಯಾಯಧೀಶರಿಗೆ ಗಣರಾಜ್ಯದ ಅರ್ಥ ತಿಳಿದಿಲ್ಲವೆಂದರೆ, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಸಾಗಲು ಎಲ್ಲಿಂದ ಸಾಧ್ಯವಾದೀತು?” ಎಂದು ಕಳವಳ ವ್ಯಕ್ತಪಡಿಸಿದರು.

“ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶಕ್ಕೆ ಶ್ರೇಷ್ಠ ಸಂವಿಧಾನ ಕೊಟ್ಟಿದ್ದು ಇತಿಹಾಸ. ಎಲ್ಲ ವರ್ಗದ ಮಹಿಳೆಯರ ಬೆಳವಣಿಗೆ ಹಾಗೂ ಅವರ ಅನುಕೂಲಕ್ಕಾಗಿಯೇ ರಚಿಸಿದ ಹಿಂದೂ ಕೋಡ್‍ ಬಿಲ್‍ಗೆ ಸಂಬಂಧಿಸಿ ಭಿನ್ನಾಭಿಪ್ರಾಯ ಉಂಟಾದಾಗ ನೆಹರೂ ನೇತೃತ್ವದ ಮಧ್ಯಂತರ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಅಂಬೇಡ್ಕರ್ ಅವರು 1951ರಲ್ಲಿ ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಸಲ್ಲಿಸಿ, ಕಾರ್ಮಿಕ ಪಕ್ಷ ಕಟ್ಟಿದರು” ಎಂದು ತಿಳಿಸಿದರು.

“ಸಂವಿಧಾನದ ರಥವನ್ನು ಸಾಧ್ಯವಾದರೆ ಮುಂದಕ್ಕೆ ಕೊಂಡೊಯ್ಯಿರಿ, ಆದರೆ ಹಿಂದಕ್ಕೆ ಎಳೆಯಬೇಡಿ ಎಂದು ಅಂಬೇಡ್ಕರ್‌ ಈ ಮೊದಲೇ ಹೇಳಿದ್ದರು. ಅಂತೆಯೇ ಪ್ರಸ್ತುತ ದಿನಮಾನಗಳ ದೇಶ, ರಾಜ್ಯಗಳ ಆಡಳಿತ ನೋಡಿದರೆ, ಪ್ರಜಾಪ್ರಭುತ್ವದ ಹಾನಿಗೆ ಎರಡೇ ದಾಪಿರುವಂತೆ ಭಾಸವಾಗುತ್ತದೆ. ಶೋಷಿತ, ದಮನಿತರ ಬದುಕನ್ನು ನುಂಗುವ ಬೆಂಕಿಯ ಕೆನ್ನಾಲಿಗೆಯಂತೆ ಉರಿಯುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣರಾಜ್ಯ ದಿನಾಚರಣೆಯಲ್ಲಿ ಎಡವಟ್ಟು; ಎರಡು ಬಾರಿ ಹಾರಿದ ಧ್ವಜ

“ಅಂಬೇಡ್ಕರ್‌ ಅವರನ್ನು ಬೇರೆ ದಿನಗಳಲ್ಲಿ ನೆನಪಿಸಿಕೊಳ್ಳುವ ಯೋಗ್ಯತೆ ಯಾರಲ್ಲಿಯೂ ಇಲ್ಲ. ಆದರೆ, ಇಡೀ ದೇಶದ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ, ಆಡಳಿತ ಎಲ್ಲವನ್ನೂ ನೀಡಿರುವಂತಹ ದಿನದ ನೆನಪಿನ ಇಂದಿನ ದಿನ ಗಣರಾಜ್ಯೋತ್ಸವ ಸಮಾರಂಭದಲ್ಲಿಯಾದರೂ ಅಂಬೇಡ್ಕರ್‌ ಹೆಸರು ಎತ್ತಲಿಲ್ಲ. ಅವರ ಭಾವಚಿತ್ರವನ್ನೂ ಇಟ್ಟು ಗೌರವ, ಕೃತಜ್ಞತೆ ಸಲ್ಲಿಸಲಿಲ್ಲ. ಸಂವಿಧಾನದ ಮಹತ್ವಗಳನ್ನೂ ತಿಳಿಸಲಿಲ್ಲ, ಸಂವಿಧಾನ ಪದದ ಬಳಕೆಯೇ ಆಗಲಿಲ್ಲ. ರಾಜ್ಯದ ವ್ಯವಸ್ಥೆಯ ನ್ಯಾಯದ ಸಾಲಿನಲ್ಲಿರುವ ಅಧಿಕಾರಿಗಳೇ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುವುದು ದುರಂತ” ಎಂದು ಕರ್ನಾಟಕದ ಉಚ್ಚ ನ್ಯಾಲಯದ ವಕೀಲರಾದ ಮುದ್ದು ರಂಗಪ್ಪ ಹಾಗೂ ನಿವೃತ್ತ ಸಹಾಯಕ ನಿಯಂತ್ರಕರು ಕಾನೂನು ಮಾಪನ ಶಾಸ್ತ್ರ ಇಲಾಖೆ ಜಿ ಎನ್ ನರಸಿಂಹಮೂರ್ತಿ ಖಂಡಿಸಿದರು.

ರಾಯಚೂರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ 2022ರ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ಮಲ್ಲಿಕಾರ್ಜುನ ಗೌಡ ಎಂಬ‌ ನ್ಯಾಯಾಧೀಶ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿದ್ದು, ಬಳಿಕ ಧ್ವಜಾರೋಹಣ ನೆರವೇರಿಸಲಾಗಿತ್ತು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿ ವಿಕೃತ ಮನಸ್ಥಿತಿ ಮೆರೆದಿದ್ದೂ ಅಲ್ಲದೆ ಅಂಬೇಡ್ಕರ್ ಅವರ ಭಾವಚಿತ್ರವಿದ್ದರೆ ಧ್ವಜಾರೋಹಣ ಮಾಡುವುದಿಲ್ಲವೆಂದು ಉಡಾಫೆಯಿಂದ ಮಾತನಾಡಿದ್ದ ಘಟನೆ ನಡೆದಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಭಿನ್ನವಾಗಿ ಮರುಕಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...