ಬೆಂಗಳೂರು | ಕನ್ನಡ ಸಾರಸ್ವತ ಭೂಮಿ ಸಂಶೋಧನೆಯ ಕನ್ನೆ ನೆಲ: ನಾಡೋಜ ಪ್ರೊ. ಹಂಪ ನಾಗರಾಜಯ್ಯ

Date:

ನಮ್ಮ ಕನ್ನಡ ಸಾರಸ್ವತ ಭೂಮಿ ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ನಗರದ ಕೆ ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ವಿಭಾಗದಿಂದ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಕನ್ನಡ ಸಂಶೋಧನೆಯ ಹೊಸ ಸಾಧ್ಯತೆಗಳು” ಕುರಿತ 5 ದಿನಗಳ ರಾಷ್ಟ್ರಮಟ್ಟದ ‘ಸಂಶೋಧನಾ ಕಾರ್ಯಾಗಾರ’ವನ್ನು ಅಂತರ್ಜಾಲದ ಜ಼ೂಮ್ ವೇದಿಕೆಯ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಸಂಶೋಧನೆ ಎಂದರೆ ಹುಡುಗಾಟವಲ್ಲ. ಅದು ನಿರಂತರವಾಗಿ ನಡೆಸಬೇಕಾದ ಹುಡುಕಾಟ. ಸಂಶೋಧನೆಗಿರುವುದು ಬೆವರಿನ ದಾರಿಯೇ ಹೊರತು ಯಾವುದೇ ಅಡ್ಡದಾರಿಗಳಿಲ್ಲ. ಶಿಸ್ತುಬದ್ಧವಾದ ಪೂರ್ವ ತಯಾರಿ, ಸತತ ಅಭ್ಯಾಸ, ವ್ಯಾಪಕವಾದ ಅಧ್ಯಯನವು ಸಂಶೋಧನೆಗೆ ಅತ್ಯವಶ್ಯಕ. ಭಾಷಾವಿಜ್ಞಾನದ ಅರಿವಿನೊಂದಿಗೆ ಸ್ವಭಾಷಾ ಜ್ಞಾನವೂ ಇರಬೇಕು. ಆಯ್ಕೆ ಮಾಡಿಕೊಳ್ಳುವ ವಸ್ತುವನ್ನು ಕುರಿತು ಈಗಾಗಲೇ ನಡೆದಿರುವ ಸಂಶೋಧನೆಯನ್ನು ಪರಾಮರ್ಶೆ ಮಾಡುವುದು ಔಚಿತ್ಯಪೂರ್ಣವಾದುದು. ಪೂರ್ವಸೂರಿಗಳ ಮಾರ್ಗದಲ್ಲಿ ನಾಲ್ಕು ಹೆಜ್ಜೆ ಮುನ್ನಡೆದು ಸ್ವೋಪಜ್ಞತೆಯಿಂದ ಹೊಸತಾದ ಸಂಶೋಧನೆಯನ್ನು ಕೈಗೊಳ್ಳಬೇಕು. ಹೇಳಿದ್ದನ್ನೇ ಹೇಳಿದರೆ ಸಂಶೋಧನೆಯಾಗದು. ಹಳೇ ಮಾತಿಗೆ ಹೊಸಮಾತನ್ನು ಕೂಡಿಸಿದರೆ ಕರಿಮೋಡಕ್ಕೆ ಬಿಳಿಚೌಕಟ್ಟು ಕಟ್ಟಿದಂತಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಯುವಸಮುದಾಯವು ಸೃಜನಶೀಲ ಕ್ಷೇತ್ರದಲ್ಲಿ ಮಾಡುವಷ್ಟು ಕೆಲಸವನ್ನು ಸಂಶೋಧನಾ ಕ್ಷೇತ್ರದಲ್ಲೂ ಮಾಡಲು ಸಾಧ್ಯವಿದೆ. ಕನ್ನಡ ಸಂಶೋಧನಾ ಕ್ಷೇತ್ರಕ್ಕೆ ಇಂದು ದೊಡ್ಡ ದೊಡ್ಡ ವಿದ್ವಾಂಸರ ಬರಗಾಲ ಬಂದಿದೆ ಎಂದುಕೊಳ್ಳಬಾರದು. ಈಗಿನ ಹೊಸ ತಲೆಮಾರಿನ ಸಂಶೋಧಕರೇ ದೊಡ್ಡ ವಿದ್ವಾಂಸರಾಗಿ ರೂಪುಗೊಳ್ಳಬೇಕು. ಹಿಂದಿನ ಅನೇಕ ವಿದ್ವಾಂಸರ ಮಾದರಿಗಳು ನಮ್ಮ ಮುಂದಿವೆ. ಅವುಗಳನ್ನು ಅನುಸರಿಸಿ ಪುನರವಲೋಕನ ಮಾಡುವ ಮೂಲಕ ಮುಂದೆ ಸಾಗಬೇಕು” ಎಂದು ಕಿವಿಮಾತು ಹೇಳಿದರು.

“ಕನ್ನಡದ ಆದಿಕವಿ ಪಂಪನು ಸಂಸ್ಕೃತ ಮೂಲದ ಮಹಾಭಾರತವನ್ನು ಮೊಟ್ಟಮೊದಲ ಬಾರಿಗೆ ತರುವಾದ ಪ್ರಾದೇಶಿಕ ಭಾಷೆಗಳಲ್ಲಿ ಒಂದಾದ ಕನ್ನಡಕ್ಕೆ ತಕ್ಕುದಾಗಿ ಪುನರ್ ಸೃಷ್ಠಿ ಮಾಡಿದನೇ ಹೊರತು ಯಥಾವತ್ತು ಅನುಸೃಷ್ಠಿ ಮಾಡಲಿಲ್ಲ. ಪಂಪನ ಸೃಜನಶೀಲ ಪ್ರತಿಭಾ ವ್ಯಕ್ತಿತ್ವದಿಂದ ಮೂಡಿಬಂದ ಪಂಪಭಾರತವು ತದನಂತರ ಇತರ ಪ್ರಾದೇಶಿಕ ಭಾಷೆಗಳಲ್ಲೂ ಮಹಾಭಾರತಗಳ ಸೃಷ್ಟಿಗೆ ಪ್ರೇರಣೆಯಾಯ್ತು. ತೆಲುಗಿನಲ್ಲಿ ನನ್ನಯ, ಎರ್ರನ, ತಿಕ್ಕನರ ಭಾರತಗಳು ಮೂಡಿಬಂದವು. ಪಂಪನು ಕನ್ನಡದ ಆದಿಕವಿಯಾದಂತೆ, ಆತನ ತಮ್ಮನಾದ ಜಿನವಲ್ಲಭನು ತೆಲುಗಿನ ಆದಿಕವಿಯೇ ಆಗಿದ್ದಾನೆ. ಯಾಕೆಂದರೆ ತಾಯಿ ಭಾಷೆಯಾದ ಕನ್ನಡದಲ್ಲಿ ಪಂಪ ಬರೆದರೆ, ತಂದೆ ಭಾಷೆಯಾದ ತೆಲುಗಿನಲ್ಲಿ ಜಿನವಲ್ಲಭನು ಕಾವ್ಯ ನೀಡುವ ಮೂಲಕ ಕನ್ನಡ ಹಾಗೂ ತೆಲುಗಿಗೆ ತಮ್ಮದೇ ಆದ ಅಮೂಲ್ಯ ಕಾಣಿಕೆ ನೀಡಿದ್ದಾರೆ. ಪಂಪನ ಮಹಾಕಾವ್ಯಗಳನ್ನು ಇತರ ಪ್ರಾದೇಶಿಕ ಹಾಗೂ ಜಾಗತಿಕ ಮಹಾಕಾವ್ಯಗಳೊಂದಿಗೆ ತೌಲನಿಕವಾಗಿ ಅಧ್ಯಯನ ನಡೆಸಲು ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟರು.‌

ಈ ಸುದ್ದಿ ಓದಿದ್ದೀರಾ? ತುಮಕೂರು | ಕೇಂದ್ರ ಒಬಿಸಿ ಪಟ್ಟಿಗೆ ಕುಂಚಿಟಿಗರನ್ನು ಸೇರಿಸುವ ಶಿಫಾರಸ್ಸು ಜಾರಿಗಾಗಿ ಎಚ್‌ಡಿಡಿಗೆ ಮನವಿ

ಕಾಲೇಜಿನ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥರು ಹಾಗೂ ಮಾನವ ಸಂಪನ್ಮೂಲ ಕೇಂದ್ರದ ನಿರ್ದೇಶಕರೂ ಆದ ಫಾ. ಡಾ ಜೋಶಿ ಮ್ಯಾಥ್ಯೂ ಮಾತನಾಡಿ, “ಸಂಶೋಧನೆ ಎಂಬುದು ನಿರಂತರ ಹುಡುಕಾಟದ ಮೂಲಕ ನಿಚ್ಚಂಪೊಸತಾಗಿ ಮೂಡುವ ಲೋಕದ ಬೆಳಗು. ಕನ್ನಡ ಸಂಶೋಧನಾ ಚರಿತ್ರೆಯಲ್ಲಿ ವಿದ್ವನ್ಮಣಿಗಳಾಗಿ ಬೆಳಗಿದ ಹಿಂದಿನ ಸಂಶೋಧಕ ದೀಪಗಳನ್ನು ಇಂದಿನ ಸಂಶೋಧಕರು ತಮ್ಮೊಳಗೆ ಅಂತಃಸ್ಥ ಮಾಡಿಕೊಂಡು ಸಾಗಬೇಕಿದೆ” ಎಂದರು.

ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರೂ ಪ್ರಾಧ್ಯಾಪಕರೂ ಆದ ಪ್ರೊ. ಎನ್ ಕೆ ಲೋಲಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾನವಿಕ ವಿಭಾಗದ ಡೀನ್‌ ಡಾ. ಎ ವಿ ಗೋಪಕುಮಾರ್, ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ ಸೈಯದ್ ಮುಯಿನ್, ಡಾ ರವಿಶಂಕರ್ ಎ ಕೆ, ಡಾ ಪ್ರೇಮಕುಮಾರ್ ಕೆ, ಡಾ ಕಿರಣಕುಮಾರ್ ಎಚ್ ಜಿ ಸೇರಿದಂತೆ ಸುಮಾರು 300 ಜನ ಸಂಶೋಧಕರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...