ಬೆಂಗಳೂರು | ಕೇರಳ ಪ್ರವಾಸೋದ್ಯಮ; ಅಖಿಲ ಭಾರತ ಅಭಿಯಾನಕ್ಕೆ ಚಾಲನೆ

Date:

“ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶಾಲಾ ರಜಾದಿನಗಳ ಸಂದರ್ಭದಲ್ಲಿ ಕುಟುಂಬಗಳಿಗಾಗಿ ಹೊಸ ಯೋಜನೆಗಳನ್ನು ಆರಂಭಿಸಿದ್ದೇವೆ” ಎಂದು ಕೇರಳ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಶ್ರೀಮತಿ ಸಿಖಾ ಸುರೇಂದ್ರನ್ ಹೇಳಿದರು.

ಕೇರಳಕ್ಕೆ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಕೇರಳ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಅಖಿಲ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಈಗ ಆರಂಭಿಸಲಾಗಿರುವ ಅಭಿಯಾನವು ನಿರ್ದಿಷ್ಟವಾಗಿ ಉತ್ತರ ಕೇರಳಕ್ಕೆ ಮುಖ್ಯವಾಗಿ ಬೇಕಲ್, ವಯನಾಡ್ ಮತ್ತು ಕೋಝಿಕ್ಕೋಡ್‌ ಪ್ರದೇಶಗಳಿಗೆ ಆದ್ಯತೆ ನೀಡಿದ್ದು ಇದಲ್ಲದೆ ಅಪಾರ ಸುಧಾರಿಸಿದ ಮೂಲ ಸೌಕರ್ಯಗಳ ಕಡಿಮೆ ಅರಿವಿನ ತಾಣಗಳನ್ನೂ ಸೇರ್ಪಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಭಿಯಾನವು ಕೇರಳವನ್ನು ತನ್ನ ಅಸಂಖ್ಯ ಛಾಯೆಗಳಲ್ಲಿ ಪ್ರದರ್ಶಿಸಲಿದ್ದು, ಇದು ಈ ತಾಣಗಳಿಗೆ ಮತ್ತು ರಾಜ್ಯವು ಒದಗಿಸುವ ವಿಶಿಷ್ಟ ಪ್ರವಾಸೋದ್ಯಮ ಉತ್ಪನ್ನಗಳಿಗ ವಿಸಿಬಿಲಿಟಿ ಹೆಚ್ಚಿಸುವ ಆವಿಷ್ಕಾರಕ ಉತ್ತೇಜನ ಕಾರ್ಯತಂತ್ರವಾಗಿದೆ. ಅಲ್ಲದೆ, ಪ್ರಮುಖ ಮೂಲ ನಗರಗಳಿಂದ ಸಂಭವನೀಯ ಸಂದರ್ಶಕರನ್ನು ನೇರವಾಗಿ ಸಂಪರ್ಕಿಸುತ್ತದೆ ಎಂದು ಹೇಳಿದರು.

ಹೆಲಿ-ಟೂರಿಸಂ

ಪ್ರವಾಸಿಗರನ್ನು ಸೆಳೆಯುವ ಹೊಸ ಆಕರ್ಷಣೆಗಳ ಪೈಕಿ ಹೆಲಿ-ಟೂರಿಸಂ ಮತ್ತು ಸಮುದ್ರದ ವಿಮಾನದ ಉಪಕ್ರಮಗಳಿದ್ದು, ಅವು ರಾಜ್ಯದಲ್ಲಿನ ತಾಣಗಳನ್ನು ಸಂಪರ್ಕಿತ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತವೆ ಎಂದು ಸಿಖಾ ಸುರೇಂದ್ರನ್ ಹೇಳಿದರು.

WhatsApp Image 2025 01 23 at 4.57.01 PM 1

ಹೊಸ ಉತ್ಪನ್ನಗಳೊಂದಿಗೆ ರಾಜ್ಯದ ಪ್ರಮುಖ ಸಂಪತ್ತುಗಳಾದ ಕಡಲತೀರಗಳು, ಗಿರಿಧಾಮಗಳು, ದೋಣಿಮನೆಗಳು ಮತ್ತು ಹಿನ್ನೀರಿನ ವಲಯವು ಸಂದರ್ಶಕರ ಅನುಭವದ ಪೂರ್ಣತೆಯನ್ನು ಎತ್ತರಿಸಲಿದೆ. ತನ್ನ ಪ್ರಶಾಂತ ನೈಸರ್ಗಿಕ ಸೌಂದರ್ಯ, ಉಜ್ವಲ ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಗೆ ಖ್ಯಾತಿ ಪಡೆದಿರುವ ಕೇರಳ ತನ್ನ ಸಂದರ್ಶಕರಿಗೆ ಸಾಂಸ್ಕೃತಿಕ ಸಂತೋಷ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳ ಮೂಲಕ ರಂಜಿಸುತ್ತದೆ. ರಾಜಧಾನಿ ನಗರವು ಫೆಬ್ರವರಿ 15ರಿಂದ 21ರವರೆಗೆ ಕನಕಕ್ಕುನ್ನು ಪ್ಯಾಲೇಸ್‌ನಲ್ಲಿ ನಿಶಾಗಂಧಿ ನೃತ್ಯೋತ್ಸವ ಆಯೋಜಿಸಿದ್ದು, ಅದರಲ್ಲಿ ಭಾರತದ ಮೂಲೆಮೂಲೆಯ ಖ್ಯಾತ ನೃತ್ಯಗಾರರು ಮೋಹಿನಿಯಾಟ್ಟಂ, ಕಥಕ್, ಕೂಚಿಪುಡಿ, ಭರತನಾಟ್ಯ ಮತ್ತು ಮಣಿಪುರಿ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಹೇಳಿದರು.

ಕೇರಳ ಲಿಟರೇಚರ್ ಫೆಸ್ಟಿವಲ್ (ಕೆ.ಎಲ್.ಎಫ್.) ಗಮನಾರ್ಹ ವಾರ್ಷಿಕ ಕಾರ್ಯಕ್ರಮವಾಗಿದ್ದು ಜನವರಿ 23-26ರವರೆಗೆ ಕೋಳಿಕ್ಕೋಡ್ ಸಮುದ್ರತೀರದಲ್ಲಿ ನಡೆಯುತ್ತದೆ. ಈ ಉತ್ಸವವು ಸಮಾಜದ ವೈವಿಧ್ಯಮಯ ಹಿನ್ನೆಲೆಯ ವಿಸ್ತಾರ ಶ್ರೇಣಿಯ ಲೇಖಕರು, ಕಲಾವಿದರು, ನಟರು, ಸೆಲೆಬ್ರಿಟಿಗಳು, ಚಿಂತಕರು ಮತ್ತು ಹೋರಾಟಗಾರರನ್ನು ಒಗ್ಗೂಡಿಸಲಿದ್ದು, ಓದುಗರು ಮತ್ತು ಲೇಖಕರ ನಡುವೆ ಸಂಪರ್ಕ ವೃದ್ಧಿಸಲಿದೆ. ಕೆ.ಎಲ್.ಎಫ್. 12ಕ್ಕೂ ಹೆಚ್ಚು ದೇಶಗಳ 400ಕ್ಕೂ ಹೆಚ್ಚು ಭಾಷಣಕಾರರನ್ನು ಹೊಂದಿದ್ದು ಕೋಝಿಕ್ಕೋಡ್ ನಗರದ ಐದು ಸ್ಥಳಗಳಲ್ಲಿ 200 ಅಧಿವೇಶನಗಳನ್ನು ನಡೆಯುತ್ತವೆ ಎಂದು ತಿಳಿಸಿದರು.

ಐಷಾರಾಮ ಮತ್ತು ವಿರಾಮವನ್ನು ಸಂಯೋಜಿಸುವ ಕೇರಳವು ಡೆಸ್ಟಿನೇಷನ್ ವೆಡ್ಡಿಂಗ್ ಮತ್ತು ಎಂಐಸಿಇ (ಮೀಟಿಂಗ್ಸ್, ಇನ್ಸೆಂಟಿವ್ಸ್, ಕಾನ್ಫರೆನ್ಸಸ್ ಅಂಡ್ ಎಕ್ಸಿಬಿಷನ್ಸ್) ಕಾರ್ಯಕ್ರಮಗಳ ಆದ್ಯತೆಯ ಕೇಂದ್ರವಾಗುತ್ತಿದೆ. ದಾಖಲೆಗಳ ಪ್ರಕಾರ ಹೆಚ್ಚು ಹೆಚ್ಚು ಭಾರತೀಯರು ಮತ್ತು ವಿದೇಶಿಯರು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ತನ್ನ ಅತ್ಯಾಕರ್ಷಕ ಪ್ರದೇಶಗಳು, ವಿಶ್ವಮಟ್ಟದ ಸೌಲಭ್ಯಗಳು ಮತ್ತು ಸಂಪ್ರದಾಯ ಹಾಗೂ ಆಧುನಿಕತೆಯ ಸರಿಸಾಟಿ ಇರದ ಸಂಯೋಜನೆಯಿಂದ ಈ ರಾಜ್ಯವು ವಿಶಿಷ್ಟ ಅನುಭವ ನಿರೀಕ್ಷಿಸುವ ಈವೆಂಟ್ ಪ್ಲಾನರ್‌ಗಳು, ದಂಪತಿಗಳು ಮತ್ತು ಕಾರ್ಪೊರೇಟ್ ಗ್ರಾಹಕರನ್ನು ಸೆಳೆಯುತ್ತಿದೆ ಎಂದು ಕೇರಳ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಖಾ ಸುರೇಂದ್ರನ್ ಹೇಳಿದರು.

WhatsApp Image 2025 01 23 at 4.57.17 PM

ಕೇರಳದಲ್ಲಿ ದೋಣಿಮನೆ, ಕಾರವಾನ್ ವಸತಿ, ಪ್ಲಾಂಟೇಷನ್ ಭೇಟಿಗಳು, ಜಂಗಲ್ ರೆಸಾರ್ಟ್‌ಗಳು, ಹೋಮ್ ಸ್ಟೇಗಳು, ಆಯುರ್ವೇದ ಆಧರಿತ ವೆಲ್ ನೆಸ್ ಪರಿಹಾರಗಳು, ಸಾಹಸ ಚಟುವಟಿಕೆಗಳು ಮತ್ತು ಚಾರಣ ಒಳಗೊಂಡು ಗ್ರಾಮೀಣ ಪ್ರದೇಶದ ನಡೆದಾಟಗಳಿಗೆ ಖ್ಯಾತಿ ಪಡೆದಿದೆ. ಕೇರಳವು ಸ್ಥಳೀಯ ಪ್ರವಾಸಿಗರ ಆಗಮನಗಳಲ್ಲಿ ತೀವ್ರ ಏರುಗತಿ ಕಾಣುತ್ತಿದ್ದು, 2022ರಲ್ಲಿ ಸಾಂಕ್ರಾಮಿಕ ಪೂರ್ವದ ಮಟ್ಟವನ್ನು ಮೀರುತ್ತಿದ್ದು 2023ರಲ್ಲಿ ದಾಖಲೆ ಸಂಖ್ಯೆಯ ಪ್ರವಾಸಿಗರು ಕೇರಳಕ್ಕೆ ಆಗಮಿಸಿದ್ದರು ಎಂದು ಮಾಹಿತಿ ನೀಡಿದರು.

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವು 2024ರಲ್ಲಿ ಮುಂದುವರಿದಿದ್ದು ಮೊದಲ ಸೆಮಿಸ್ಟರ್ ನಲ್ಲಿ (ಜನವರಿ-ಜೂನ್) ಒಟ್ಟು 1,08,57,181 ಪ್ರವಾಸಿಗರು ಭೇಟಿ ನೀಡಿದ್ದು ಈ ವರ್ಷ ಕೋವಿಡ್ ಪೂರ್ವ ಮಟ್ಟಕ್ಕೆ ಏರಿಕೆಯಾಗುವ ನಿರೀಕ್ಷೆ ಇದ್ದು ಅದು ರಜಾಋತುವಿನಲ್ಲಿ ಪ್ರಸ್ತುತ ನಡೆಯುತ್ತಿರುವ ಬುಕ್ಕಿಂಗ್‌ಗಳಿಂದ ಸಾಬೀತಾಗಿದೆ. ಬೇಸಿಗೆಯ ರಜಾದಿನದಲ್ಲಿ ಸ್ಥಳೀಯ ಪ್ರವಾಸಿಗರ ಸಂಖ್ಯೆಯಲ್ಲಿನ ಹೆಚ್ಚಳದಿಂದ ಕೇರಳ ಟೂರಿಸಂ ಪ್ರವಾಸದ ವ್ಯಾಪಾರ ಜಾಲ ನಿರ್ಮಾಣದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಬಿ2ಬಿ ರೋಡ್ ಶೋಗಳಿಂದ ವಿಸ್ತಾರ ಗ್ರಾಹಕರಿಗೆ ಹೊಸ ಯೋಜನೆಗಳನ್ನು ಬಿಡುಗಡೆ ಮಾಡುವುದನ್ನು ಒಳಗೊಂಡಿದ್ದು ಇದಲ್ಲದೆ ಪ್ರಮುಖ ವ್ಯಾಪಾರ ಮೇಳಗಳಲ್ಲಿ ಭಾಗವಹಿಸಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಶ್ರೀಮತಿ ಸಿಖಾ ಸುರೇಂದ್ರನ್ ಹೇಳಿದರು.

ಇದನ್ನು ಓದಿದ್ದೀರಾ? ಮಂಗಳೂರು | ಸೆಲೂನ್‌ಗೆ ನುಗ್ಗಿ ದಾಂಧಲೆ ಪ್ರಕರಣ: ರಾಮಸೇನೆಯ ಪ್ರಸಾದ್ ಅತ್ತಾವರ ಬಂಧನ

ಜನವರಿ 21ರಂದು ಹೈದರಾಬಾದ್‌ನಲ್ಲಿ ಬಿ2ಬಿ ಟ್ರಾವೆಲ್ ಮೀಟ್ ಪ್ರಾರಂಭಿಸಿದ್ದು ಈ ಅಭಿಯಾನವು ಜನವರಿ- ಮಾರ್ಚ್ ಅವಧಿಯಲ್ಲಿ ಅಹಮದಾಬಾದ್, ಚಂಡೀಗಢ, ದೆಹಲಿ, ಜೈಪುರ, ಚೆನ್ನೈ ಮತ್ತು ಕೊಲ್ಕತಾಗಳಲ್ಲಿ ಬಿ2ಬಿ ಸಭೆಗಳ ಸರಣಿ ಕಾಣಲಿದ್ದು ಹಲವಾರು ಪರಿವರ್ತನೀಯ ಉಪಕ್ರಮಗಳು ಮತ್ತು ಜನಪ್ರಿಯ ತಾಣಗಳನ್ನು ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದ ಮುಂಚೂಣಿಯ ಪಾಲುದಾರರ ಮುಂದೆ ಪ್ರದರ್ಶಿಸಲಿದೆ ಎಂದು ಮಾಹಿತಿ ನೀಡಿದರು.

WhatsApp Image 2025 01 23 at 4.56.57 PM
WhatsApp Image 2025 01 23 at 4.57.39 PM 1
WhatsApp Image 2025 01 23 at 4.57.05 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...