ಬೆಂಗಳೂರು | ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ ಆರಂಭ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ (ಎಸ್ಒಎಸ್) ಬೂತ್‌ಗಳನ್ನು ಪೊಲೀಸರು ತೆರೆದಿದ್ದಾರೆ. ನಗರದ ಪ್ರಮುಖ 30 ಸ್ಥಳಗಳಲ್ಲಿ ಎಸ್ಒಎಸ್ ಬೂತ್‌ಗಳನ್ನು ನಿರ್ಮಾಣ ಮಾಡಿದ್ದಾರೆ.

ಮೊದಲ ಹಂತದಲ್ಲಿ ಬಿಬಿಎಂಪಿ ನೆರವಿನೊಂದಿಗೆ 30 ಬೂತ್ ಗಳನ್ನು ತೆರೆಯಲಾಗಿದೆ. ಇದಕ್ಕಾಗಿ ನಿರ್ಭಯಾ ಫಂಡ್ಅನ್ನು ಬಳಸಲಾಗಿದೆ. ಎರಡನೇ ಹಂತದಲ್ಲಿ ಸ್ಲಂ ಪ್ರದೇಶಗಳು, ಮಾಲ್ ಗಳು ಹಾಗೂ ಐಟಿ ಕಂಪನಿಗಳಿರುವ ಪ್ರದೇಶದಲ್ಲಿ ಎಸ್ಒಎಸ್ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಸ್ಯೆ ಸಮಯದಲ್ಲಿ ಎಸ್ಒಎಸ್ ಬೂತ್ ಬಳಿ ಬಂದು ಎಮರ್ಜೆನ್ಸಿ ಬಟನ್ ಒತ್ತಬಹುದು ಅಥವಾ ಕರೆ ಮಾಡಬಹುದು. ಕೂಡಲೇ ಮಹಿಳಾ ಪೊಲೀಸ್ ಕಂಟ್ರೋಲ್ ರೂಮ್ ಕರೆ ಸ್ವೀಕರಿಸುತ್ತದೆ. ಕರೆ ಸ್ವೀಕರಿಸಿದ ಹತ್ತೇ ನಿಮಿಷದಲ್ಲಿ ಪೊಲೀಸರು ಸ್ಥಳಕ್ಕೆ ಹಾಜರಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಬೂತ್ ಬಳಿ ಸಿಸಿ ಕ್ಯಾಮೆರಾಗಳೂ ಇದ್ದು, ಅವು ಬಟನ್ ಒತ್ತಿದ ಕೂಡ ಬೂತ್ ನ ಸುತ್ತಲ ಪ್ರದೇಶವನ್ನು ಸೆರೆಹಿಡಿಯಲಾರಂಭಿಸುತ್ತವೆ. ಆ ಸಿಸಿ ಕ್ಯಾಮೆರಾಗಳ ಮೂಲಕ ಮೂಲಕ ಕರೆ ಮಾಡಿದವರನ್ನು ಪೊಲೀಸರು ಗಮಿಸುತ್ತಾರೆ ಮತ್ತು ಸ್ಥಳಕ್ಕೆ ಧಾವಿಸಿ ಮಹಿಳೆಯರಿಗೆ ನೆರವು ನೀಡುತ್ತಾರೆ. ಜೊತೆಗೆ, ಕ್ಯಾಮೆರಾವು ರಿಂಗಣಿಸಲು ಪ್ರಾರಂಭಿಸುವ ಸೈರನ್ ಅನ್ನು ಸಹ ಹೊಂದಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲೊಂದು ತಾರತಮ್ಯ, ಅಸ್ಪೃಶ್ಯತೆ ಆಚರಣೆಯ ಪೋಸ್ಟರ್: ಜಾಲತಾಣದಲ್ಲಿ ವೈರಲ್

“ಕರೆ ಬಂದ ತಕ್ಷಣ ಎಷ್ಟು ಸಾಧ್ಯವೋ ಅಷ್ಟು ಬೇಗ ಸ್ಥಳಕ್ಕೆ ಧಾವಿಸುತ್ತೇವೆ. ಕ್ಯಾಮೆರಾ ಮೂಲಕ ಸ್ಥಳದಲ್ಲಿ ಏನಾಗುತ್ತಿದೆ ಎಂಬುದನ್ನು ಕಂಟ್ರೋಲ್ ರೂಮ್ ಗಮನಿಸುತ್ತಿರುತ್ತದೆ. ಮಹಿಳೆಯರಿಗೆ ತುರ್ತು ನೆರವು ನೀಡಲು ಗಸ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...