ಬೆಂಗಳೂರು | ಒಳಮೀಸಲಾತಿ ತ್ವರಿತ ಜಾರಿಗೆ ಮಾದಿಗ ದಂಡೋರ ಒತ್ತಾಯ

Date:

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಸ್ವಾಗತಿಸಿ ಮತ್ತು ತ್ವರಿತವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್‌ನಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರ ಎಲ್ಲ ಮುಂಬಡ್ತಿ ಮತ್ತು ನೇಮಕಾತಿಗಳನ್ನು ಕೂಡಲೇ ಸ್ಥಗಿತಗೊಳಿಸಿ, ಒಳಮೀಸಲಾತಿ ಪ್ರಮಾಣದ ಅನ್ವಯ ನೇಮಕಾತಿ ಮಾಡುವಂತೆ ಒತ್ತಾಯಿಸಿದರು.

ಉತ್ತರ ಕರ್ನಾಟಕ ವಿಭಾಗೀಯ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಮಾತನಾಡಿ, “ಒಳಮೀಸಲಾತಿ ತೀರ್ಪಿನ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಪರಿಶಿಷ್ಟರ ಮೀಸಲಾತಿಯು ಅವರ ಆರ್ಥಿಕ ಸ್ಥಿತಿಗತಿಯ ಮೇಲಲ್ಲದೆ, ಶತಮಾನಗಳಿಂದ ಅವರ ಮೇಲೆ ನಡೆದಿರುವ ದೌರ್ಜನ್ಯ ಮತ್ತು ಶೋಷಣೆಯ ತಳಹದಿಯ ಮೇಲೆ ನೀಡಲಾಗಿದೆ. ಈ ಬಗ್ಗೆ 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಒಂಭತ್ತು ಸದಸ್ಯರ ನ್ಯಾಯಪೀಠದಿಂದ ನೀಡಲಾಗಿದ್ದ ತೀರ್ಪಿನಲ್ಲಿ ವಿಶೇಷವಾಗಿ ಇದನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಸ್ತುತ ತೀರ್ಪಿನಲ್ಲಿ ʼಕೆನೆಪದರʼದ ಉಲ್ಲೇಖವಾಗಿರುವುದು ತೀರ್ಪಿನ ಭಾಗವಾಗಿ ಅಲ್ಲ, ಅದನ್ನು ಕೋರ್ಟ್ ಭಾಷೆಯಲ್ಲಿ ಒಬಿಟರ್ ಡಿಕ್ಟಮ್ ಅಂದರೆ ಕೇವಲ ಉಲ್ಲೇಖಪೂರ್ಣ ಅಭಿಪ್ರಾಯ ಎಂಬುದನ್ನು ತಿಳಿದೂ ಕೂಡಾ ಸರ್ಕಾರದ ಕೆಲವು ಸಚಿವರು/ಉನ್ನತ ಅಧಿಕಾರಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡುತ್ತ ಶೋಷಿತ ಸಮುದಾಯಗಳಲ್ಲಿ ಆತಂಕ ಸೃಷ್ಟಿಸುತ್ತಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಮಾತನಾಡಿ, “ಒಂದು ವೇಳೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರುವುದಕ್ಕೆ ಕುಂಟುನೆಪಗಳನ್ನು ಹೇಳುತ್ತ ಕಾಲಹರಣ ಮಾಡಿದರೆ, ಬೀದರ್‌ನಿಂದ ಬೆಂಗಳೂರಿನವರೆಗೆ ಮಾದಿಗ ದಂಡೋರ ವತಿಯಿಂದ ಕಾಲ್ನಡಿಗೆ ಯಾತ್ರೆ ಹಮ್ಮಿಕೊಂಡು ಬೃಹತ್ ಜನಾಂದೋಲನ ಆರಂಭಿಸಲಾಗುವುದು” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ಮಾತನಾಡಿ, “ಒಳಮೀಸಲಾತಿ ಹೋರಾಟದಲ್ಲಿ ಮಂದಕೃಷ್ಣ ಮಾದಿಗ ಅವರ ಸುದೀರ್ಘ 30 ವರ್ಷದ ಹೋರಾಟದ ಹಾದಿಯನ್ನು ನೆನೆಯುತ್ತ, ಕಳೆದ ವರ್ಷ ಹೈದರಾಬಾದ್‌ನಲ್ಲಿ ನಡೆದ ಮಾದಿಗರ ವಿಶ್ವರೂಪ ಮಹಾ ಸಮಾವೇಶದ ವೇದಿಕೆಗೆ ಆಗಮಿಸಿ ಮಾದಿಗರ ಹೋರಾಟಕ್ಕೆ ನ್ಯಾಯ ದೊರಕಿಸಲು ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಕೊಟ್ಟ ಮಾತಿನಂತೆ ನಡೆದು ಸ್ವತಃ ಭಾರತದ ಅಟಾರ್ನಿ ಜನರಲ್‌ರನ್ನು ನೇಮಿಸಿ ಸರ್ವೋಚ್ಛ ನ್ಯಾಯಾಲಯದ ಎದುರಿಗೆ ಒಳಮೀಸಲಾತಿಪರ ವಾದ ಮಂಡಿಸಿದ್ದಕ್ಕೆ ಅನಂತ ಧನ್ಯವಾದದಳು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಕಾರ್ಯಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ರಾಜ್ಯ ವಕ್ತಾರ ವೆಂಕಟೇಶ್ ಕತ್ತಿ, ಉಪಾಧ್ಯಕ್ಷ ರಾಮಕೃಷ್ಣ ಎಸ್, ಗಣೇಶ ದುಪ್ಪಲ್, ಬೆಂಗಳೂರು ಜಿಲ್ಲಾಧ್ಯಕ್ಷ ತ್ರಿಲೋಕ ಚಂದ್ರ ಸೇರಿದಂತೆ ರಾಜ್ಯ ಸಮಿತಿ ನಾಯಕರು ಮತ್ತು ಮಹಿಳಾ ಘಟಕದ ನಾಯಕಿಯರು, ಮಂದಕೃಷ್ಣ ಮಾದಿಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...