ಬೆಂಗಳೂರು | ಕೊಲೆ ಆರೋಪ; ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳು 5 ದಿನ ಪೋಲೀಸ್ ವಶಕ್ಕೆ

Date:

ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಸುರಿಯುತ್ತಿರುವ ಮಳೆಯ ನಡುವೆಯೇ ಎಲ್ಲ 13 ಮಂದಿ ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ʼಕಾನೂನು ಪ್ರಕ್ರಿಯೆಯಂತೆ, ಬಂಧನದ ನಂತರ ನಿಮ್ಮ ಮನೆಯವರಿಗೆ ಮಾಹಿತಿ ನೀಡಲಾಯಿತೇʼ ಎಂದು ದರ್ಶನ್ ಮತ್ತು ಇತರ ಆರೋಪಿಗಳನ್ನು ನ್ಯಾಯಾಧೀಶರು ಪ್ರಶ್ನಿಸಿದರು. ಮಾಹಿತಿ ನೀಡಲಾಗಿದೆ ಎಂದು ಆರೋಪಿಗಳು ಉತ್ತರ ನೀಡಿದರು. ಅದೇ ರೀತಿ ಪೊಲೀಸರು ನಿಮಗೆ ಏನಾದರೂ ದೈಹಿಕ ಹಿಂಸೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದಾಗ ಆರೋಪಿಗಳು ʻಇಲ್ಲʼ ಎಂದು ಉತ್ತರ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಲೆಯಾಗಿರುವುದು ಗಂಭೀರ ಪ್ರಕರಣ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿಯಲ್ಲಿ ವಿನಂತಿಸಿದರು. ನಮ್ಮ ಕಕ್ಷಿದಾರರ ತೇಜೋವಧೆಗಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಪೊಲೀಸರು ಕೇಸ್ ಡೈರಿಯನ್ನೂ ನೀಡಿಲ್ಲ. 14 ದಿನಗಳ ಕಸ್ಟಡಿ ನೀಡುವ ಅಗತ್ಯವಿಲ್ಲ, ಕೊಲೆಯಲ್ಲಿ ನಮ್ಮ ಕಕ್ಷಿದಾರರ ಪಾತ್ರವಿಲ್ಲ, ಇದು ರಾಜಕೀಯ ದುರುದ್ದೇಶದ ಪ್ರಕರಣ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ(ಜೆಸಿ) ನೀಡಿ” ಎಂದು ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಮತ್ತು ಅನಿಲ್ ವಿನಂತಿಸಿದರು.

“ಪ್ರಕರಣ ಅತ್ಯಂತ ಸೂಕ್ಷ್ಮವಾಗಿದೆ. ಕೊಲೆಯ ಸಾಕ್ಷ್ಯನಾಶದ ಯತ್ನ ನಡೆಸಲಾಗಿದೆ. ಆರೋಪಿಗಳು ಪ್ರಭಾವಿಗಳಾಗಿದ್ದಾರೆ. ಇನ್ನಷ್ಟು ಸಾಕ್ಷ್ಯನಾಶ ಮಾಡುವ ಸಾಧ್ಯತೆ ಇದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆ ಮಾಡಬೇಕಿದೆ. ಕೊಲೆಗೆ ಬಳಸಿದ ಆಯುಧಗಳನ್ನು, ವಸ್ತುಗಳನ್ನು ಸೀಜ಼್ ಮಾಡಬೇಕಿದೆ. ಆರೋಪಿಗಳ ಮೊಬೈಲ್‌ಗಳನ್ನು ಸೀಜ಼್ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು” ಎಂದು ತನಿಖಾಧಿಕಾರಿ ವಿನಂತಿಸಿದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಎಲ್ಲ ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ನಟ ದರ್ಶನ್ ಪದೇಪದೆ ಕಣ್ಣೀರು ಹಾಕುತ್ತ ನಿಂತಿದ್ದರು. ಇನ್ನೊಂದೆಡೆ ನಟಿ ಪವಿತ್ರಗೌಡ ಕೂಡ ಕಣ್ಣೀರು ಹಾಕುತ್ತಿದ್ದುದು ಕಂಡುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...