ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

Date:

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ ಉಳಿದಿದೆ. ಸದ್ಯ, ಎಕ್ಸ್‌ಪ್ರೆಸ್‌-ವೇ ಉದ್ಘಾಟನೆಗೊಂಡು ವರ್ಷ ಕಳೆದಿದೆ. ಆದರೆ, ಈಗಾಗಲೇ ದುಪ್ಪಟ್ಟು ಟೋಲ್ ಶುಲ್ಕ ಮತ್ತು ಎರಡು ಬಾರಿ ಶುಲ್ಕ ಹೆಚ್ಚಳದಿಂದ ಜನಾಕ್ರೋಶಕ್ಕೆ ಕಾರಣವಾಗಿತ್ತು. ಇದೀಗ, ಮತ್ತೆ ಟೋಲ್ ಶುಲ್ಕ ಹೆಚ್ಚಳವಾಗುತ್ತಿದ್ದು, ಮತ್ತೊಮ್ಮೆ ಜನಕ್ರೋಶಕ್ಕೆ ತುತ್ತಾಗುತ್ತಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಐಎನ್‌ಎಚ್‌ಎ) ಶುಲ್ಕವನ್ನು ಹೆಚ್ಚಿಸಿದೆ. ಸಗಟು ಬೆಲೆ ಸೂಚ್ಯಂಕದ ಪ್ರಕಾರ, ಟೋಲ್ ಶುಲ್ಕವನ್ನು 3% ಹೆಚ್ಚಿಸಲಾಗಿದೆ. ಪರಿಷ್ಕೃತ ಶುಲ್ಕವು 2024ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.

ಈ ಹಿಂದೆ 2023ರ ಏಪ್ರಿಲ್‌ನಲ್ಲಿ ಮೊದಲ ಬಾರಿಗೆ ಶುಲ್ಕ ಹೆಚ್ಚಿಸಲಾಗಿತ್ತು. ಟೋಲ್ ದರ ಹೆಚ್ಚಳದ ವಿರುದ್ಧ ವಾಹನ ಸವಾರರು ಕಿಡಿಕಾರಿದ್ದರು. ಆದರೂ, ಜೂನ್‌ನಲ್ಲಿ ಮತ್ತೆ 22% ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ, ಹೊಸ ಆರ್ಥಿಕ ವ‍ರ್ಷಕ್ಕೆ ಮತ್ತೊಮ್ಮೆ ಶುಲ್ಕ ಹೆಚ್ಚಳ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ದರದಂತೆ ಬೆಂಗಳೂರು-ನಿಡಘಟ್ಟ ನಡುವಿನ ಎಕ್ಸ್‌ಪ್ರೆಸ್‌-ವೇ ಬಳಕೆಗೆ ಕಾರುಗಳು/ವ್ಯಾನ್‌ಗಳು/ಜೀಪ್‌ಗಳ ಸವಾರರು ಏಕಮುಖ ಪ್ರಯಾಣಕ್ಕೆ 170 ರೂ. ಮತ್ತು 24 ಗಂಟೆಗಳ ಒಳಗೆ ಹಿಂದಿರುಗುವ ದ್ವಿಮುಖ ಪ್ರಯಾಣಕ್ಕೆ 255 ನಿಗದಿಯಾಗಿದೆ. ಶುಲ್ಕ ಪರಿಷ್ಕರಣೆಗೂ ಮುನ್ನ ಟೋಲ್‌ ದರವು ಏಕಮುಖ ಪ್ರಯಾಣಕ್ಕೆ 165 ರೂ. ಮತ್ತು ದ್ವಿಮುಖ ಪ್ರಯಾಣಕ್ಕೆ 250 ರೂ. ಇತ್ತು.

ಇನ್ನು, ಲಘು ವಾಣಿಜ್ಯ ವಾಹನಗಳು, ಸರಕು ವಾಹನಗಳು ಹಾಗೂ ಮಿನಿ ಬಸ್‌ಗಳಿಗೆ ಏಕಮುಖ ಪ್ರಯಾಣ 275 ರೂ.ಮತ್ತು ದ್ವಿಮುಖ ಪ್ರಯಾಣ 425 ನಿಗದಿಯಾಗಿದೆ. ಇದು 270 ರೂ. ಮತ್ತು 405 ರೂ. ಇತ್ತು.

ಭಾರೀ ಟ್ರಕ್‌ಗಳು ಮತ್ತು ಬಸ್‌ಗಳಿಗೆ ಏಕಮುಖ ಪ್ರಯಾಣ 580 ರೂ. ಮತ್ತು ದ್ವಿಮುಖ ಪ್ರಯಾಣ 870 ರೂ. ನಿಗದಿಯಾಗಿದೆ.

ಅದೇ ರೀತಿ ನಿಡಘಟ್ಟ ಮತ್ತು ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಬಳಕೆಗೆ ಕಾರುಗಳು/ವ್ಯಾನ್‌ಗಳು/ಜೀಪ್‌ಗಳಿಗೆ ಏಕಮುಖ ಪ್ರಯಾಣ 160 ರೂ. ಮತ್ತು ದ್ವಿಮುಖ ಪ್ರಯಾಣ 240 ರೂ. ನಿಗದಿಯಾಗಿದೆ.

ಒಟ್ಟಾರೆಯಾಗಿ ಬೆಂಗಳೂರು-ಮೈಸೂರು ನಡುವಿನ ಏಕಮುಖ ಪ್ರಯಾಣಕ್ಕೆ ಕಾರುಗಳು 330 ರೂ. ಭರಿಸಬೇಕಾಗಿದೆ.

ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (ಎಸ್‌ಟಿಆರ್‌ಆರ್‌)

ಎಕ್ಸ್‌ಪ್ರೆಸ್‌ ವೇ ಮಾತ್ರವಲ್ಲದೆ, ಬೆಂಗಳೂರಿನ ‘ಸ್ಯಾಟಲೈಟ್ ಟೌನ್ ರಿಂಗ್ ರೋಡ್’ನ ಟೋಲ್‌ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಈ ರಸ್ತೆಯ ದೊಡ್ಡಬಳ್ಳಾಪುರ-ಹೊಸಕೋಟೆ ನಡುವಿನ 39.6-ಕಿಮೀ ಪ್ರಯಾಣಕ್ಕೆ ಆರು ತಿಂಗಳ ಹಿಂದೆಯಷ್ಟೇ ಟೋಲ್‌ ಶುಲ್ಕ ನಿಗದಿ ಮಾಡಲಾಗಿತ್ತು. ಇದೀಗ, ಮತ್ತೆ ಶುಲ್ಕವನ್ನು ಹೆಚ್ಚಿಸಲಾಗಿದೆ.

ಈ ರಸ್ತೆಯಲ್ಲಿ ಕಾರುಗಳು/ವ್ಯಾನ್‌ಗಳು/ಜೀಪ್‌ಗಳಿಗೆ ಏಕಮುಖ ಪ್ರಯಾಣ 80 ರೂ. ಮತ್ತು ದ್ವಿಮುಖ ಪ್ರಯಾಣಕ್ಕೆ 120 ರೂ., ಲಘು ವಾಣಿಜ್ಯ ವಾಹನಗಳು, ಸರಕು ವಾಹನಗಳು ಮತ್ತು ಮಿನಿಬಸ್‌ಗಳಿಗೆ ಏಕಮುಖ ಪ್ರಯಾಣ 130 ರೂ. ದ್ವಿಮುಖ ಪ್ರಯಾಣ 200 ರೂ., ಹಾಗೂ ಭಾರೀ ವಾಹನಗಳಿಗೆ ಏಕಮುಖ 275 ರೂ. ಮತ್ತು ದ್ವಿಮುಖ ಪ್ರಯಾಣ 415 ರೂ. ನಿಗದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...