ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ; ಸ್ಪೀಡ್‌ ಲಿಮಿಟ್‌ ಜಾರಿ

Date:

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 117 ಕಿ.ಮೀ ಉದ್ದದ ಮಾರ್ಗದಲ್ಲಿ ಸ್ಪೀಡ್ ಲಿಮಿಟ್‌ಗಳನ್ನು ಜಾರಿ ಮಾಡಲಾಗಿದ್ದು, ಅತಿ ವೇಗದ ವಾಹನ ಸವಾರರಿಗೆ ದಂಡ ವಿಧಿಸುವುದು ಸೇರಿದಂತೆ ಹಲವು ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು ರಾಮನಗರ ಮತ್ತು ಮಂಡ್ಯದ ಪೊಲೀಸ್‌ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದು, ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚೆಗೆ ಹೆಚ್ಚು ಮಾರಣಾಂತಿಕ ಅಪಘಾತಗಳು ವರದಿಯಾಗಿರುವ ಕುರಿತು ಚರ್ಚಿಸಿದರು.

ಅತಿಯಾದ ವೇಗ ಮತ್ತು ಅಜಾಗರೂಕ ಚಾಲನೆ ದುರಂತ ಸಾವಿಗೆ ಮುಖ್ಯ ಕಾರಣವಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದು, ಅತಿ ವೇಗವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ನಾವು ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳುತ್ತೇವೆ. ಮೊದಲನೆಯದಾಗಿ, ನಾವು ಎರಡೂ ದಿಕ್ಕುಗಳಲ್ಲಿ ಸ್ಪೀಡ್ ಲಿಮಿಟ್‌ ಸ್ಥಾಪಿಸುತ್ತೇವೆ. ರಾಡಾರ್‌ ಗನ್‌ಗಳು ಮುಖ್ಯವಾಗಿ ರಾಮನಗರ ಮತ್ತು ಮಂಡ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗುವುದು. ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸುವ ವಾಹನಗಳ ಚಿತ್ರಗಳನ್ನು ಅವರು ಸೆರೆಹಿಡಿಯುತ್ತಾರೆ. ಅಂತಹ ವಾಹನಗಳನ್ನು ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸಲಾಗುವುದು ಮತ್ತು ಚಾಲಕನಿಗೆ ದಂಡ ವಿಧಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

“ಮುಂದಿನ ಹಂತಗಳಲ್ಲಿ, ʼಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾʼ(ಎಎನ್‌ಪಿಆರ್)ಗಳನ್ನು ಹಲವು ಸ್ಥಳಗಳಲ್ಲಿ ಸ್ಥಾಪಿಸಲಾಗುವುದು. ಇದರಿಂದ ಅತಿ ವೇಗದ ವಾಹನಗಳನ್ನು ಗುರುತಿಸಬಹುದು. ನಾವು ಈ ವಿಷಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು” ಎಂದು ಹೇಳಿದ್ದಾರೆ.

ರಾಮನಗರ ಮತ್ತು ಮಂಡ್ಯ ನಡುವಿನ 18 ಸ್ಥಳಗಳಲ್ಲಿ ಮಾರಣಾಂತಿಕ ಅಪಘಾತಗಳು ಸಂಭವಿಸಿರುವ ಸ್ಥಳಗಳನ್ನು ಪರಿಶೀಲಿಸಿದ್ದು, “ವೇಗದ ಮಿತಿಯನ್ನು ಉಲ್ಲಂಘಿಸಿ 100 ಕಿಮೀಗಿಂತ ಅಧಿಕ ವೇಗದಲ್ಲಿ ವಾಹನ ಚಲಾಯಿಸುವ ಜನರ ಪರವಾನಗಿಗಳನ್ನು ಅಮಾನತುಗೊಳಿಸಲಾಗುವುದು” ಎಂದು ಕುಮಾರ್ ಸುಳಿವು ನೀಡಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...