ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

Date:

ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್‌ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ ಟೋಲ್‌ ಸಂಗ್ರಹವನ್ನು ಆರಂಭವಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮಂಡ್ಯ ಜಿಲ್ಲೆಯ ಗಣಂಗೂರು ಬಳಿ ನಿರ್ಮಾಣವಾಗಿರುವ ಟೋಲ್‌ ಪ್ಲಾಜಾದಲ್ಲಿ ಜುಲೈ 1ರಿಂದ ಸುಂಕ ವಸೂಲಿ ಆರಂಭವಾಗಲಿದೆ.

ಮೊದಲ ಹಂತದಲ್ಲಿ ಬೆಂಗಳೂರು ಮತ್ತು ಮದ್ದೂರು ತಾಲೂಕಿನ ನಿಡಘಟ್ಟವರೆಗೆ ಟೋಲ್‌ ಸಂಗ್ರಹ ಮಾಡಲಾಗುತ್ತಿದೆ. ಇದೀಗ, ಎರಡನೇ ಹಂತದಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ಟೋಲ್‌ ಸಂಗ್ರಹಕ್ಕೆ ಮುಂದಾಗಿದ್ದು, ಶ್ರೀರಂಗಪಟ್ಟಣದ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಶನಿವಾರದಿಂದ ಪ್ರಾರಂಭವಾಗಲಿದೆ ಎಂದು ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಒಂದನೇ ಹಂತದಲ್ಲಿ ಬಿಡದಿ ಬಳಿಕ ಕಣಮಿಣಕಿ ಟೋಲ್‌ನಲ್ಲಿ ಸುಂಕ ವಸೂಲಿ ಮಾಡಲಾಗುತ್ತಿತ್ತು. ಈ ಸುಂಕವು ಬೆಂಗಳೂರಿನಿಂದ ನಿಡಘಟ್ಟದವರೆಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ, ಎರಡನೇ ಹಂತದಲ್ಲಿ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಆರಂಭವಾಗಲಿದೆ. ಇದು ನಿಡಘಟ್ಟದಿಂದ ಮೈಸೂರಿನವರೆಗೆ ಅನ್ವಯವಾಗಲಿದೆ. ಅಂತಯೇ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವವರು ಎರಡು ಕಡೆ ಟೋಲ್‌ ಪಾವತಿ ಮಾಡಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನಿಡಘಟ್ಟ ಮತ್ತು ಮೈಸೂರು ನಡುವಿನ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಮುಗಿದಿಲ್ಲ. ಆರು ಪಥದ ರಸ್ತೆಯ ಕಾಮಗಾರಿಯಷ್ಟೇ ಮುಗಿದಿದೆ. ಇನ್ನೂ ಎರಡೂ ಬದಿಯ ನಾಲ್ಕು ಪಥದ ಸರ್ವೀಸ್‌ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ರಸ್ತೆ ಬದಿಯಲ್ಲಿ ಚರಂಡಿಗಳ ನಿರ್ಮಾಣವಾಗಿಲ್ಲ. ಹಲವೆಡೆ ಕೆಳ ಸೇತುವೆಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿಲ್ಲ. ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡಬಾರದು ಎಂದು ಆಗ್ರಹಗಳು ಕೇಳಿಬಂದಿವೆ.

“ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್‌ ವಸೂಲಿ ಆರಂಭಿಸಬಾರದು” ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೂಡ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ, ಟೋಲ್‌ ಸುಂಕ ಆರಂಭಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...