ಅಧಿವೇಶನ | ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತಗಳ ತಡೆ ಕ್ರಮಕ್ಕೆ ಸುರೇಶ್‌ ಕುಮಾರ್‌ ಆಗ್ರಹ

Date:

  • ಹೆದ್ದಾರಿಯಲ್ಲಿ ಲೋಪದೋಷಗಳು ಸಾಕಷ್ಟಿವೆ: ಪರಮೇಶ್ವರ್
  • ಸರಿಪಡಿಸದಿದ್ದರೆ ತೊಂದರೆ ತಪ್ಪಿದ್ದಲ್ಲ: ಜಿ ಟಿ ದೇವೇಗೌಡ‌

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಯಾದ ಮೇಲೆ ಈವರೆಗೂ 132 ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮವಹಿಸಿ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಎಸ್‌ ಸುರೇಶ್‌ ಕುಮಾರ್‌ ಆಗ್ರಹಿಸಿದರು.

ಏಳನೇ ದಿನದ ಪ್ರಶ್ನೋತ್ತರ ಕಲಾಪದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರಿಗೆ ಪ್ರಶ್ನಿಸಿದ ಅವರು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಏನು ಕ್ರಮಕೈಗೊಂಡಿದ್ದೀರಿ. ಸಾವು ನೋವುಗಳ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಜಿ ಪರಮೇಶ್ವರ್‌ ಉತ್ತರಿಸಿ, “ಒಳ್ಳೆಯ ಉದ್ದೇಶದಿಂದ ಈ ಹೆದ್ದಾರಿಯನ್ನು ರೂಪಿಸಲಾಗಿದೆ. ಆದರೆ, ಲೋಪದೋಷಗಳು ಸಾಕಷ್ಟಿವೆ. ಸರಿಯಾದ ಸೂಚನಾ ಫಲಕಗಳು ಇಲ್ಲ. ತಿರುವು ರಸ್ತೆಗಳಲ್ಲಿ ಈ ಅಪಘಾತಗಳ ಸಂಖ್ಯೆ ಹೆಚ್ಚಿದೆ. ರಸ್ತೆ ಉದ್ಘಾಟನೆಗೂ ಮೊದಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕಿತ್ತು. ಬಹುತೇಕ ಅಪಘಾತಗಳಿಗೆ ವೇಗವೇ ಕಾರಣ” ಎಂದು ತಿಳಿಸಿದರು.

“ಹೆದ್ದಾರಿ ಪ್ರಾರಂಭವಾದ ಮಾರ್ಚ್‌ 20 ತಿಂಗಳಲ್ಲೇ ಜನ ಸಾವನ್ನಪ್ಪಿದ್ದು, 63 ಜನ ಗಾಯಗೊಂಡಿದ್ದಾರೆ, ಏಪ್ರಿಲ್‌ನಲ್ಲಿ 23 ಸಾವನ್ನಪ್ಪಿದ್ದು, 83 ಜನರು ಗಾಯಗೊಂಡಿದ್ದಾರೆ. ಮೇ ತಿಂಗಳಲ್ಲಿ 29 ಜನರು ಸಾವನ್ನಪ್ಪಿದ್ದರೆ, 93 ಜನರು ಗಾಯಗೊಂಡಿದ್ದಾರೆ. ಜೂನ್‌ನಲ್ಲಿ 28 ಜನರು ಸಾವನ್ನಪ್ಪಿದ್ದು, 96 ಜನರು ಗಾಯಗೊಂಡಿದ್ದಾರೆ. ಒಟ್ಟು 100 ಜನ ಈವರೆಗೂ ಮರಣ ಹೊಂದಿದ್ದು, 335 ಜನ ಗಾಯಗೊಂಡಿದ್ದಾರೆ” ಎಂದು ಉತ್ತರಿಸಿದರು.

ಸುರೇಶ್‌ ಕುಮಾರ್‌ ಮಧ್ಯ ಪ್ರವೇಶಿಸಿ, “ನನ್ನ ಅಂಕಿ ಅಂಶಗಳ ಪ್ರಕಾರ ರಾಮನಗರ ಜಿಲ್ಲೆಯಲ್ಲಿ 65, ಮಂಡ್ಯ ಜಿಲ್ಲೆಯಲ್ಲಿ 63 ಹಾಗೂ ಮೈಸೂರು ಜಿಲ್ಲೆಯಲ್ಲಿ 4 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರದಲ್ಲಿ ಹಿಂಸಾಚಾರವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ವೇದಿಕೆಯಲ್ಲ: ಸಿಜೆಐ

ಪರಮೇಶ್ವರ ಮಾತನಾಡಿ, “ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಲೋಕೋಪಯೋಗಿ ಮತ್ತು ಗೃಹ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಆದಷ್ಟು ಬೇಗ ಅಪಘಾತ ತಡೆಗೆ ನಾವು ಕ್ರಮವಹಿಸುತ್ತೇವೆ. ಪತ್ರದಲ್ಲಿ ನಾವು, ವೇಗ ನಿಯಂತ್ರಕ, ಹೈವೇ ಪೆಟ್ರೋಲಿಂಗ್‌, ಅಗತ್ಯ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಕೆ, ಲೈನ್‌ ಡಿಸಿಪ್ಲೇನ್‌, ಅಂಡರ್‌ ಪಾಸ್‌ ವಿದ್ಯುತ್‌ ದೀಪ ಅಳವಡಿಕೆ ಬಗ್ಗೆ ವಿವರಿಸಿದ್ದೇವೆ” ಎಂದರು.

ಜಿ ಟಿ ದೇವೇಗೌಡ ಮಧ್ಯ ಪ್ರವೇಶಿಸಿ, “ಮಹತ್ತರ ಉದ್ದೇಶದಿಂದ ಈ ಹೆದ್ದಾರಿ ಮಾಡಿದ್ದಾರೆ. ಆದರೆ ಏನಾಗಿದೆ ಎಂದರೆ, ಗುತ್ತಿಗೆದಾರ ರಸ್ತೆ ನಿರ್ಮಿಸುವಲ್ಲಿ ವಿಫಲನಾಗಿದ್ದಾನೆ. ಮಳೆಯಾದರೆ ನೀರು ಹೊರಗೆ ಹೋಗುತ್ತಿಲ್ಲ. ಇದರಿಂದ ವಾಹನಗಳು ಸ್ಕಿಡ್ ಆಗುತ್ತಿವೆ. ನಿತಿನ್‌ ಗಡ್ಕರಿ ಬಂದು ಪರಿಶೀಲಿಸಿ ಹೋದರೂ ಈ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸರಿಯಾದ ಮೆಂಟೆನೆನ್ಸ್ ಇಲ್ಲ. ಬಹಳಷ್ಟು ಕಡೆ ನ್ಯೂನತೆಗಳು ಇವೆ. ಎಲ್ಲವನ್ನು ಸರಿಪಡಿಸದೇ ಇದ್ದರೆ ಬಹಳ ತೊಂದರೆ ಅನುಭವಿಸಬೇಕಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...