ಬೆಂಗಳೂರು | ಚಲನಚಿತ್ರೋತ್ಸವ ಮುಂದೂಡುವಂತೆ ನಾವು ದ್ರಾವಿಡ ಕನ್ನಡಿಗರು ಚಳವಳಿ ಮನವಿ

Date:

ಕರ್ನಾಟಕ ಚಲನಚಿತ್ರ ಅಕಾಡೆಮಿಯು ಮಾರ್ಚ್‌ 01ರಿಂದ 08ರವರೆಗೂ ಹಮ್ಮಿಕೊಂಡಿರುವ 16ನೇ ಅಂತಾರಾಷ್ಟ್ರೀಯ ಬೆಂಗಳೂರು ಚಲನಚಿತ್ರೋತ್ಸವವನ್ನು ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಆಯೋಜಿಸಬೇಕು ಎಂದು ಒತ್ತಾಯಿಸಿ ನಾವು ದ್ರಾವಿಡ ಕನ್ನಡಿಗರು ಚಳವಳಿಯಿಂದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಕನ್ನಡ ಚಲನಚಿತ್ರ ಅಮೃತೋತ್ಸವ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

“ಈಗ ಹಮ್ಮಿಕೊಂಡಿರುವ ಚಲನಚಿತ್ರೋತ್ಸವದ ಸಮಯದಲ್ಲಿ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳೂ ಕೂಡ ಆರಂಭವಾಗುತ್ತಿವೆ. ಚಲನಚಿತ್ರೋತ್ಸವ ಮತ್ತು ಆಕಾಡೆಮಿಯ ಉದ್ದೇಶವೇ ಯುವ ಜನತೆ ಈ ಉತ್ಸವದಿಂದ ವಿಭಿನ್ನ ರೀತಿಯಾ ಸಿನಿಮಾಗಳನ್ನು ನೋಡಲಿ, ಅದರಿಂದ ಸ್ಪೂರ್ತಿಗೊಂಡು ಸಿನಿಮಾ ಶಿಕ್ಷಣ ಪಡೆದು ಸ್ಥಳಿಯವಾಗಿ ಮತ್ತು ಜಾಗತಿಕ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸುವಂತಹ ಕನ್ನಡ ಸಿನಿಮಾ ತೆಗೆಯಲಿ ಎಂಬುದಾಗಿದೆಯಲ್ಲವೇ?” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಫೈನಾನ್ಸ್ ಕಂಪನಿಯಿಂದ ಸಂಕಷ್ಟಕೀಡಾಗಿದ್ದ ಕುಟುಂಬ: ಲಕ್ಷ್ಮೀ ಹೆಬ್ಬಾಳ್ಕರ್ ಸಹಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಜನರು ದ್ವಿತೀಯ ಪಿಯುಸಿ ಮುಗಿಸಿ ಸಿನಿಮಾ ಶಿಕ್ಷಣದಲ್ಲಿ ಪದವಿ ಓದಬೇಕು ಅಂದುಕೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ದಿನವೇ ಚಲನಚಿತ್ರೋತ್ಸವ ಇರುವುದರಿಂದ ಭಾಗವಹಿಸುವುದಾದರು ಹೇಗೆ? ಇಲ್ಲಿ ಮತ್ತೊಂದು ಅಪಾಯವಿದ್ದು, ಸಿನಿಮಾ ಮೇಲಿರುವ ಸೆಳೆತದಿಂದ ಮುಂದಿನ ದಿನಗಳಲ್ಲಿ ಸಿನಿಮಾದಲ್ಲಿ ಕೆಲಸ ಮಾಡಬೇಕೆಂದು ಆಸಕ್ತಿಯಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ತಪ್ಪಿಸಿ ಚಲನಚಿತ್ರೋತ್ಸವಕ್ಕೆ ಹಾಜರಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಚಲನಚಿತ್ರೋತ್ಸವವು ಪರೀಕ್ಷೆಯ ನಂತರ ನಡೆದರೆ, ಸಿನಿಮಾ ಶಿಕ್ಷಣದಲ್ಲಿ ಪದವಿ ಓದಲು ಆಸಕ್ತಿಯಿರುವ ವಿದ್ಯಾರ್ಥಿಗಳೂ ಕೂಡ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುತ್ತಾರೆ. ಹಾಗಾಗಿ ಚಲನಚಿತ್ರೋತ್ಸವವನ್ನು ಮುಂದೂಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...