ಬೆಂಗಳೂರು | ಆರು ತಿಂಗಳಲ್ಲಿ ಸುಮಾರು 27,000 ಪ್ರಕರಣಗಳಿಂದ ಮೆಟ್ರೋ ರೈಲು ನಿಯಮ ಉಲ್ಲಂಘನೆ

Date:

ಸೆಪ್ಟೆಂಬರ್ 2024ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000ಕ್ಕೂ ಅಧಿಕ ಘಟನೆಗಳು ಬಹಿರಂಗವಾಗಿವೆ.

ಪ್ರಯಾಣಿಕರು ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿಕೊಂಡು ಕೇಳುತ್ತಿದ್ದ ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು(ಪಿಡಬ್ಲ್ಯೂಡಿ), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವಂತಹ 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆ ಮಾಡಿರುವ 554 ಪ್ರಕರಣಗಳು ಕಂಡುಬಂದಿವೆ. ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್ ಸಾಗಿಸುವ ಪ್ರಯಾಣಿಕರನ್ನೂ ಒಳಗೊಂಡಿವೆ.

ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ | ಮೂರುಗೋಳಿಯ ಪ್ರವೀಣ್ ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ.

ಸಾರ್ವಜನಿಕರಿಗೆ ಮೇಲಿನ ಮಾಹಿತಿಯ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಮುದ್ರಣ ಮತ್ತು ಡಿಜಿಟಲ್ ಮಾಧ್ಯಮಗಳನ್ನು ವಿನಂತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...