ಬೆಂಗಳೂರು | ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದ ಸಂಘಟನೆಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.

ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ಆಚರಣೆಗೆ ಪರ ವಿರೋಧ ಮುಗಿದ ಬಳಿಕ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಕೂಗು ಕೇಳಿಬರುತ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೆ ಪಟ್ಟು ಹಿಡಿದಿದ್ದು, ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ ಎಂದು ತಿಳಿದುಬಂದಿದೆ.

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮನವಿ ಮಾಡಿಕೊಂಡಿದೆ. ಆದರೆ, ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಅನುಮತಿ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ​ ಮೊರೆ ಹೋಗಲು ಸಿದ್ಧತೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈಟ್‌ಫೀಲ್ಡ್‌ನ ಒಂದು ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡ ಪತ್ತೆ

ರಾಜ್ಯ ಸರ್ಕಾರ ಕನ್ನಡ ನಾಡಿನಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಪಡಿಸುತ್ತಿದೆ. ಕೂಡಲೇ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಬೇಕು. ಒಂದು ವೇಳೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಈ ಕುರಿತಂತೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಖಜಾಂಚಿ ಯಶವಂತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...