ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ; ಶೇ.32ರಷ್ಟು ಪ್ರಯಾಣಿಕರ ಹೆಚ್ಚಳ

Date:

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಹಣಕಾಸು ವರ್ಷದ ಮೊದಲರ್ಧದಲ್ಲಿ ಶೇ.32ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವರದಿ ತಿಳಿಸಿದೆ. ಇದೇ ಅವಧಿಯಲ್ಲಿ ರಾಷ್ಟ್ರೀಯ ಸರಾಸರಿ ಶೇ.22.1 (18.31 ಕೋಟಿ) ಕ್ಕಿಂತ ಹೆಚ್ಚಾಗಿದೆ ಎಂದು ಅದರ ವಾಯು ಸಂಚಾರ(ಏರ್‌ ಟ್ರಾಫಿಕ್) ವರದಿ ಬಹಿರಂಗಪಡಿಸಿದೆ.

ಬೆಂಗಳೂರು ವಿಮಾನ ನಿಲ್ದಾಣವು ಈ ವರ್ಷ ಏಪ್ರಿಲ್ ಮತ್ತು ಸಪ್ಟೆಂಬರ್ ನಡುವೆ 1,84,74,104 ಪ್ರಯಾಣಿಕರಿಗೆ ಸಾಕ್ಷಿಯಾಗಿದೆ. ಕಳೆದ ವರ್ಷ 1,39,93,742 ಪ್ರಯಾಣಿಕರು ಪ್ರಯಾಣಿಸಿದ್ದರು. ಅಂತರರಾಷ್ಟ್ರೀಯ ಪ್ರಯಾಣಿಕರು 16,77,541 ಕ್ಕೆ ಹೋಲಿಸಿದರೆ ಸುಮಾರು 22,29,524 ರಷ್ಟಿದ್ದು, ಶೇ. 32.9 ರಷ್ಟು ಹೆಚ್ಚಳವನ್ನು ಕಂಡಿದೆ. ಇದು ಅಂತಾರಾಷ್ಟ್ರೀಯ ಸಂಚಾರವನ್ನು ದೇಶೀಯ ದಟ್ಟಣೆಗಿಂತ (31.9 ಶೇಕಡಾ) ಶೇ.1 ರಷ್ಟು ಹೆಚ್ಚಿಸಿದೆ.

ಕೆಲವು ಮಾರ್ಗಗಳ ಸ್ಥಗಿತದಿಂದ ಬೆಳಗಾವಿ, ಮೈಸೂರು ಮತ್ತು ಕಲಬುರಗಿಯಂತಹ ವಿಮಾನ ನಿಲ್ದಾಣಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಬೆಂಗಳೂರು ವಿಮಾನ ನಿಲ್ದಾಣದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರಾಜ್ಯದ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೊಂದಿರುವ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಶೇ.0.9ರಷ್ಟು ಕುಸಿದಿದೆ. ಆದರೂ ದೇಶೀಯ ಸಂಚಾರವು ಶೇಕಡಾ 9.5 ರಷ್ಟು ಹೆಚ್ಚಳವನ್ನು ತೋರಿಸಿದ್ದು, 6,86,726 ಪ್ರಯಾಣಿಕರನ್ನು ದಾಖಲಿಸಿದೆ. ಹುಬ್ಬಳ್ಳಿಯಲ್ಲೂ ಶೇ.30.1ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಮತ್ತು ಬೆಳಗಾವಿಯಲ್ಲಿ ಕ್ರಮವಾಗಿ ಶೇ.35.8 ಮತ್ತು ಶೇಕಡಾ 28.4 ರಷ್ಟು ಸಂಚಾರ ದಟ್ಟಣೆಯಲ್ಲಿ ಭಾರೀ ಕುಸಿತ ಕಂಡುಬಂದಿದೆ. ಕಳೆದ ವರ್ಷ 1,04,330 ರಷ್ಟಿದ್ದ ಮೈಸೂರು ಈ ವರ್ಷ ಕೇವಲ 76,475 ಕ್ಕೆ ತಲುಪಿದೆ.

“ಹಲವು ವಿಮಾನಯಾನ ಸಂಸ್ಥೆಗಳು ವಿವಿಧ ಮಾರ್ಗಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಿರುವುದರಿಂದ ನಮಗೆ ತೀವ್ರ ಹೊಡೆತ ಉಂಟಾಗಿದೆ.  ಪ್ರೋತ್ಸಾಹದಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ. ದೆಹಲಿ, ಮುಂಬೈ ಮತ್ತು ಹೈದರಾಬಾದ್‌ಗೆ ಸ್ಪೈಸ್ ಜೆಟ್ ವಿಮಾನಗಳು, ಪುಣೆಗೆ ಅಲಯನ್ಸ್ ಏರ್ ಮತ್ತು ನಾಸಿಕ್‌ಗೆ ಸ್ಟಾರ್ ಏರ್ ವಿಮಾನಗಳು ಈಗ ಕಾರ್ಯನಿರ್ವಹಿಸುತ್ತಿಲ್ಲ” ಎಂದು ಬೆಳಗಾವಿ ವಿಮಾನ ನಿಲ್ದಾಣದ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

ಮೈಸೂರಿನಿಂದ ಬೆಳಗಾವಿಗೆ ಟ್ರೂಜೆಟ್ ವಿಮಾನಗಳು ಭರ್ತಿಯಾಗುತ್ತಿದ್ದವು. ಆದರೂ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ನಿಲ್ಲಿಸಿವೆ ಎಂದು ಮೈಸೂರು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಮೈಸೂರಿನಿಂದ ಹುಬ್ಬಳ್ಳಿಗೆ ಇದ್ದ ಇಂಡಿಗೊ ಕಾರ್ಯಾಚರಣೆಯೂ ಸ್ಥಗಿತಗೊಂಡಿದೆ. ಮೈಸೂರಿನಿಂದ ಮಂಗಳೂರಿಗೆ ಕಾರ್ಯನಿರ್ವಹಿಸುತ್ತಿರುವ ಅಲಯನ್ಸ್ ಏರ್‌ಗೆ ಉತ್ತಮ ಪ್ರೋತ್ಸಾಹವಿರಲಿಲ್ಲ. ಪ್ರಸ್ತುತ ರನ್ ವೇ ಎಟಿಆರ್ – 72 ವಿಮಾನಗಳಿಗೆ ಮಾತ್ರ ಸ್ಥಳಾವಕಾಶ ಕಲ್ಪಿಸುತ್ತದೆ. ರನ್‌ ವೇ ವಿಸ್ತರಿಸಿದಾಗ, ಇತರ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆಯನ್ನು ಪರಿಗಣಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...