ಪ್ರಧಾನಿ ನಮ್ಮ ಉಡುಗೆ ತೊಟ್ಟು, ನಮ್ಮನ್ನೇ ದಮನಿಸುತ್ತಿದ್ದಾರೆ: ಏಂಜೆಲಾ ಅಂಗದ್

Date:

ನಾನು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವಳು. ನಾನು ದನ ತಿನ್ನುತ್ತೇನೆ, ಹಂದಿ ತಿನ್ನುತ್ತೇನೆ. ನಾನು ನನ್ನ ಜಾತಿ, ನನ್ನ ಧರ್ಮವನ್ನ ಉಡುಗೆಯ ಮೂಲಕ ತೋರಿಸುವುದಿಲ್ಲ. ನಾನು ನನ್ನಿಷ್ಟವಾದುದ್ದನ್ನು ತಿನ್ನುತ್ತೇನೆ, ಉಡುತ್ತೇನೆ, ನನ್ನ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗದು ಎಂದು ಮಣಿಪುರದ ಸಾಮಾಜಿಕ ಹೋರಾಟಗಾರ್ತಿ ಏಂಜೆಲಾ ಅಂಗದ್ ಹೇಳಿದರು.

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮುಸ್ಲಿಂ ಸಹೋದರ, ಸಹೋದರಿಯರ ಮೇಲೆ ದಮನ ನಡೆದಾಗ ಸುಮ್ಮನೆ ನೋಡಲಾಗುವುದಿಲ್ಲ. ಈಶಾನ್ಯ ಭಾರತದಲ್ಲಿ ಶೋಷಿತರನ್ನು ಮತ್ತಷ್ಟು ದಮನ ಮಾಡಲಾಗುತ್ತಿದೆ. ಅಲ್ಲಿನ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ತಮ್ಮ ತನವನ್ನು ಕಳೆದುಕೊಂಡಿರುವ ಜನರು ಬಿಜೆಪಿಯನ್ನು ವಿರೋಧಿಸಿದಾಗಲೂ, ಬಿಜೆಪಿಯವರೇ ಜನರನ್ನು ಆಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿ ನಮ್ಮ ಸಮುದಾಯಗಳ ಕೆಲವು ಸಂಕೇತಗಳನ್ನು ತಮ್ಮ‌ ಉಡುಗೆಯಲ್ಲಿ ಬಳಸುತ್ತಾರೆ. ಕತ್ತಿಗೆ, ತಲೆಗೆ ನಮ್ಮ ಬಟ್ಟೆ ಕಟ್ಟಿಕೊಂಡೇ ನಮ್ಮ ಮೇಲಿನ ದಮನದ ನೀತಿ ಮುಂದುವರೆಸುತ್ತಿದ್ದಾರೆ. ಕೆಲವು ನಕಲಿ ಆದರ್ಶಗಳನ್ನು ತೋರಿಸಿಕೊಂಡು ನಮ್ಮನ್ನು ತುಳಿಯುತ್ತಿದ್ದಾರೆ” ಎಂದು ಕಿಡಿಕಾರಿದರು.

“ದೇಶದಲ್ಲಿ ಮಾನವೀಯತೆಯನ್ನು ಒಡೆದು ಹಾಕಲಾಗುತ್ತಿರುವಾಗ, ಅದನ್ನು ಮರುಜೋಡಿಸುವುದು ನಮ್ಮ ಕೆಲಸವಾಗುತ್ತದೆ. ನಮ್ಮ ಆತ್ಮಸಾಕ್ಷಿಗಿಂತ ಕರುಣೆ ಮತ್ತು ಸಹನೆಗಿಂತ ದೊಡ್ಡ ಗುರುವಿರಲು ಸಾಧ್ಯವಿಲ್ಲ. ಖಾಸಗಿ ಬಂಡವಾಳ, ಭ್ರಷ್ಟಾಚಾರಗಳೇ ಆಡಳಿತವಾಗಿರುವಾಗ ಈ ಮಾರ್ಗದರ್ಶಿ ಸೂತ್ರಗಳು ನಮ್ಮನ್ನು ಮುನ್ನಡೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

“ಇವತ್ತಿನ ಭಾರತ ನಮ್ಮ ಹಣೆಬರಹವಲ್ಲ. ನಾವು ನಮ್ಮ ಹೆಗಲುಗಳನ್ನು ನೋಡಿಕೊಳ್ಳಬೇಕು. ನಾವು ಹೇಗೆ ಎಲ್ಲರೂ ಕೂಡಿಕೊಂಡಿದ್ದೇವೆಂಬುದನ್ನು, ನಮ್ಮ ಆಹಾರಗಳನ್ನು ಹಂಚಿಕೊಂಡು ತಿಂದು ಬದುಕಿದ್ದೆವು ಎಂಬುದನ್ನು ನೆನಪಿಸಿಕೊಳ್ಳಬೇಕು. ರೈತರು ದೆಹಲಿಯ ಗಡಿಗಳಲ್ಲಿ ಸಾಧಿಸಿದ್ದನ್ನು, ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ತಮ್ಮತನವನ್ನು ಉಳಿಸಿಕೊಂಡಿರುವುದನ್ನು ನೋಡಬೇಕು. ಕಾಶ್ಮೀರದ ಜನರಿಂದ ಧೈರ್ಯವನ್ನು ಕಲಿಯಬೇಕು. ನದಿಯ ಹರಿಯುವಿಕೆಯನ್ನು ನೆನಪಿಟ್ಟುಕೊಳ್ಳಬೇಕು, ಅದೇ ಸಮಯದಲ್ಲಿ ನಾವು ಸೇರಬೇಕಿರುವ ಮಹಾಸಾಗರದ ಕಾಣ್ಕೆಯನ್ನೂ ಕಾಪಾಡಿಕೊಳ್ಳಬೇಕು” ಎಂದು ಕರೆಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...