ಬೆಂಗಳೂರು | ದುಬಾರಿ ಫೋನ್ ಕದಿಯೋದಕ್ಕೆ ತಂಡವನ್ನೇ ಕಟ್ಟಿದ್ದ ಕಳ್ಳ; ಮೊಬೈಲ್ ಬೆಲೆ ಆಧರಿಸಿ ಕಮಿಷನ್ ನೀಡುತ್ತಿದ್ದ!

Date:

ದುಬಾರಿ ಮೌಲ್ಯದ ಮೊಬೈಲ್‌ಗಳನ್ನು ಕಳ್ಳತನ ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2 ಕೋಟಿ ಮೌಲ್ಯದ 1,037 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೊಹಮ್ಮದ್ ಪಾಷಾ ಅಲಿಯಾಸ್ ಆರೀಫ್ ಪಾಷಾ ಹಾಗೂ ಆತನ ಸಹಚರರಾದ ಮೊಹಮದ್ ಉಮರ್, ಐಯಾನ್‌ ಅಲಿಯಾಸ್ ಅಲೀಂ ಪಾಷ ಹಾಗೂ ಮೊಹಮದ್‌ ಸಲೀಂ ಬಂಧಿತರು.

ಆರೋಪಿ ಮೊಹಮ್ಮದ್ ಪಾಷಾ ಅಲಿಯಾಸ್ ಆರೀಫ್ ಪಾಷಾ ಎಂಬಾತ ನಗರದಾದ್ಯಂತ ಮೊಬೈಲ್ ಕಳ್ಳತನ ಮಾಡಲು ತನ್ನದೇ ಸಹಚರರನ್ನು ಒಳಗೊಂಡ ಒಂದು ತಂಡವನ್ನು ನೇಮಿಸಿಕೊಂಡಿದ್ದ. ಕದ್ದ ಫೋನ್‌ಗಳ ಮೌಲ್ಯದ ಆಧಾರದ ಮೇಲೆ ತನ್ನ ಸಹಚರರಿಗೆ ₹2,000ದಿಂದ ₹6,000 ವರೆಗೆ ಕಮಿಷನ್ ನೀಡುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಗೋರಿಪಾಳ್ಯ ನಿವಾಸಿ ಪಾಷಾ ಒಂದು ವರ್ಷದಿಂದ ಮೊಬೈಲ್ ಕಳ್ಳತನ ಮಾಡುತ್ತಿದ್ದ. ₹10,000 ದಿಂದ ₹1 ಲಕ್ಷದವರೆಗಿನ ಫೋನ್‌ಗಳನ್ನು ಕದಿಯಲು ನಗರದಾದ್ಯಂತ ತನ್ನ ಪರವಾಗಿ ಸಹಚರರನ್ನು ನೇಮಿಸಿಕೊಂಡಿದ್ದ” ಎಂದು ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಲದಂಡಿ ಹೇಳಿದರು.

“ಆರೋಪಿಗಳು ಮೊಬೈಲ್ ಫೋನ್‌ಗಳನ್ನು ದಾಸ್ತಾನು ಮಾಡಿ ಬೆಂಗಳೂರು, ತಮಿಳುನಾಡು ಹಾಗೂ ಕೇರಳದಲ್ಲಿ ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಲ್ಲದೇ, ಕೇರಳ ಮತ್ತು ತಮಿಳುನಾಡಿನ ಮೊಬೈಲ್ ಮಾರಾಟ ದಂಧೆಕೋರರಿಗೆ ₹6 ರಿಂದ ₹8 ಸಾವಿರಕ್ಕೆ ವಿಲೇವಾರಿ ಮಾಡುತ್ತಿದ್ದರು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಎಎಂಸಿ ಕಾಲೇಜಿನ ಸಮೀಪ ಕದ್ದ ಮೊಬೈಲ್ ಮಾರಾಟಕ್ಕೆ ಆರೀಫ್‌ ಪಾಷ ಹಾಗೂ ಆತನ ಸಹಚರರು ಯತ್ನಿಸಿದ್ದಾಗ ಖಚಿತ ಮಾಹಿತಿ ಪಡೆದು ಇನ್‌ಸ್ಪೆಕ್ಟರ್‌ ಸಿ.ಕೃಷ್ಣಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿದೆ. ಆರೋಪಿಗಳನ್ನು ಬಂಧಿಸಿ ನಾನಾ ಬ್ರ್ಯಾಂಡ್‌ಗಳ 100ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಒಳಗೊಂಡ ಪೆಟ್ಟಿಗೆಯೊಂದನ್ನು ವಶಪಡಿಸಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 8 ವರ್ಷಗಳ ನಂತರ ಓಆರ್‌ಆರ್‌ ಅಂಡರ್‌ಪಾಸ್ ಕಾಮಗಾರಿ ಆರಂಭ

“ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟಕ್ಕೆ ಇಟ್ಟಿದ್ದ ಫೋನ್‌ಗಳು ಕದ್ದಿರುವುದಾಗಿ ಇಬ್ಬರೂ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅವರ ಮಾಹಿತಿಯ ಆಧಾರದ ಮೇಲೆ ಮತ್ತಿಬ್ಬರು ಆರೋಪಿಗಳಾದ ಮೊಹಮ್ಮದ್ ಅಯಾನ್ ಅಲಿಯಾಸ್ ಅಲೀಮ್ ಮತ್ತು ಮೊಹಮ್ಮದ್ ಸಲೀಂ ಅವರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...