ಬೆಂಗಳೂರು | ರೈಲ್ವೆ ಇಲಾಖೆಯಲ್ಲಿ 9,144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಏ.8 ಕೊನೆಯ ದಿನ

Date:

ರೈಲ್ವೆ ಇಲಾಖೆಯಲ್ಲಿ ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದೇ ಮಾರ್ಚ್ 9ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಏಪ್ರಿಲ್ 8 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಈ ಕುರಿತು ರೈಲ್ವೆ ಇಲಾಖೆ ಇತ್ತೀಚೆಗೆ ಕೇಂದ್ರಿಕೃತ ಅಧಿಸೂಚನೆ ಹೊರಡಿಸಿದೆ.

‘ಟೆಕ್ನಿಷಿಯನ್ ಗ್ರೇಡ್–1’ (ಸಿಗ್ನಲ್) 1092 ಹಾಗೂ ‘ಟೆಕ್ನಿಷಿಯನ್ ಗ್ರೇಡ್–3’ 8052 ಹುದ್ದೆಗಳಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು, ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.

ಟೆಕ್ನಿಷಿಯನ್ ಗ್ರೇಡ್–1 ಹುದ್ದೆಗಳಿಗೆ ವಯೋಮಿತಿ ಕನಿಷ್ಠ 18ರಿಂದ 36, ಟೆಕ್ನಿಷಿಯನ್ ಗ್ರೇಡ್–3 ಹುದ್ದೆಗಳಿಗೆ ವಯೋಮಿತಿ ಕನಿಷ್ಠ 18ರಿಂದ 33 ಇದೆ. ಮೀಸಲು ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ, ಇತರೆ ವರ್ಗದವರಿಗೆ ₹250 ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಕ್ನಿಷಿಯನ್ ಗ್ರೇಡ್–1 ಹುದ್ದೆಗಳಿಗೆ ನಿಗದಿತ ವಿಷಯದೊಂದಿಗೆ ಬಿಎಸ್‌ಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಅಥವಾ ನಿಗದಿತ ವಿಷಯದಲ್ಲಿ ಎಂಜನಿಯರಿಂಗ್ ಪದವಿ ಹೊಂದಿರಬೇಕು.

ಟೆಕ್ನಿಷಿಯನ್ ಗ್ರೇಡ್–3 (ಬ್ಲ್ಯಾಕ್‌ಸ್ಮಿತ್, ಬ್ರಿಡ್ಜ್, ಕ್ಯಾರೇಜ್ ಆ್ಯಂಡ್ ವ್ಯಾಗನ್, ಕ್ರೇನ್ ಡ್ರೈವರ್, ಎಲೆಕ್ಟ್ರಿಷಿಯನ್‌) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ನಿಗದಿತ ವಿಷಯಗಳೊಂದಿಗೆ ಐಟಿಐ ಪಾಸಾಗಿರಬೇಕು. ಕೋರ್ಸ್‌ನ ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ನೇಮಕಾತಿ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ), ನಂತರ ದಾಖಲೆಗಳ ತಪಾಸಣೆ ಹಾಗೂ ಕೊನೆಯದಾಗಿ ಮೆಡಿಕಲ್ ಟೆಸ್ಟ್ ಇರಲಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ ಲೋಕಸಭಾ ಕ್ಷೇತ್ರ | ಬಿಜೆಪಿ ಕೈಯಲ್ಲಿರುವ ಕ್ಷೇತ್ರವನ್ನು ಕಾಂಗ್ರೆಸ್ ಕಸಿಯಬಲ್ಲದೇ?

ರೈಲ್ವೆ ನೇಮಕಾತಿ ಮಂಡಳಿಗಳಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಯಾ ರಾಜ್ಯಗಳ ಅಭ್ಯರ್ಥಿಗಳು ಸಂಬಂಧಿಸಿದ ರೈಲ್ವೆ ನೇಮಕಾತಿ ಮಂಡಳಿಯ ವೆಬ್‌ಸೈಟಿಗೆ ಹೋಗಿ (ಬೆಂಗಳೂರು–www.rrbbnc.gov.in) ಹುದ್ದೆಗಳ ವರ್ಗೀಕರಣ, ಪರೀಕ್ಷೆ ವಿಧಾನ, ಪರೀಕ್ಷೆ ಪಠ್ಯಕ್ರಮ, ಅರ್ಜಿ ಸಲ್ಲಿಕೆಗಾಗಿ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವಿವರವಾದ ಅಧಿಸೂಚನೆ (ಸಿಇಎನ್) ನೋಡಿಕೊಂಡು ಅರ್ಜಿ ಸಲ್ಲಿಸಬೇಕೆಂದು ರೈಲ್ವೆ ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...