ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

Date:

  • ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು
  • ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ ಉದ್ಯಾನನಗರಿ ರಸ್ತೆಗಳ ತುಂಬೆಲ್ಲ ನೀರು ನಿಂತಿದೆ. ಇನ್ನೂ ಕೆಲವು ಬಡಾವಣೆಯ ನೂರಾರು ಮನೆಗಳಿಗೆ ಒಳಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಹಿನ್ನೆಲೆ, ಚರಂಡಿಗೆ ಕಟ್ಟಿದ ಗೋಡೆಯನ್ನು ಕೆಡವಲಾಗಿದೆ. ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಮಂಗಳವಾರ ಸುರಿದ ಮಳೆಗೆ ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಇದರಿಂದ ರಾತ್ರಿಯಿಡಿ ಜನರು ನಿದ್ದೆ ಇಲ್ಲದೇ ಗಬ್ಬು ವಾಸನೆಯಲ್ಲಿ ಇಡೀ ರಾತ್ರಿ ಕಳೆಯುವಂತಾಯಿತು.

“ಚರಂಡಿ ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಇದರಿಂದ ಚರಂಡಿ ನೀರು ಮನೆಗಳಿಗೆ ನುಗ್ಗಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಚರಂಡಿ ನೀರಿನಲ್ಲಿ ಮುಳುಗಿ ಹೋಗಿವೆ. ಮನೆಗಳಿಗೆ ನೀರು ನುಗ್ಗಿದರಿಂದ ಜನ ಇಷ್ಟೇಲ್ಲಾ ಕಷ್ಟಗಳನ್ನು ಅನುಭವಿಸುತ್ತಿದ್ದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ದೇವರಚಿಕ್ಕನಹಳ್ಳಿಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೆಗೆ ಚರಂಡಿ ನೀರು ನುಗ್ಗಿ ತುಂಬಾ ಅವಾಂತರ ಸೃಷ್ಟಿಯಾಗಿದೆ. ಗಬ್ಬು ವಾಸನೆಯಲ್ಲಿಯೇ ದಿನ ಕಳೆಯುವಂತಾಗಿದೆ. ರಾತ್ರಿಯೆಲ್ಲಾ ಮಳೆಯ ನೀರನ್ನು ಹೊರಹಾಕುವುದೇ ಕೆಲಸವಾಗಿತ್ತು. ಇದೆಲ್ಲಾ ಸಂಪೂರ್ಣವಾಗಿ ಸರಿ ಹೋಗಬೇಕೆಂದರೆ ಇನ್ನೂ ಎರಡು ದಿನ ಬೇಕಾಗುತ್ತಿದೆ. ಚರಂಡಿಗೆ ಮಳೆಗಾಲಕ್ಕೂ ಮುನ್ನವೇ ಮೊದಲೇ ಗೋಡೆ ಕಟ್ಟಿದರೇ ಇಷ್ಟೇಲ್ಲ ಸಮಸ್ಯೆ ಇರುತ್ತಿರಲಿಲ್ಲ” ಎಂದರು.

“ಚರಂಡಿ ನೀರು ನುಗ್ಗಿರುವದರಿಂದ ಮನೆಯಲ್ಲಾ ವಾಸನೆಯಿದೆ. ಮನೆಯಲ್ಲಿ ಮಲಗಿಕೊಳ್ಳುವುದು ಕಷ್ಟಕರವಾಗಿದೆ. ಬೇರೆಯವರ ಮನೆಗೆ ಹೋಗಿ ಮಲಗಿಕೊಳ್ಳುತ್ತಿದ್ದೇವೆ. ನಾವು ಬಾಡಿಗೆ ಮನೆಯಲ್ಲಿರುವವರು ಮನೆ ಖಾಲಿ ಮಾಡಬೇಕೆಂದರೆ ಅವಧಿ ಮುಗಿಯುವವರಿಗೆ ನೀಡಿದ ಡೌನ್ ಪೆಮೇಂಟ್‌ ಕೊಡುವುದಿಲ್ಲ ಎಂದು ಮನೆ ಮಾಲೀಕರು ಹೇಳುತ್ತಾರೆ. ಇತ್ತ ಕಡೆ ಬಿಬಿಎಂಪಿ ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುತ್ತಿಲ್ಲ” ಎಂದು ನೋವು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಅನುಗ್ರಹ ಬಡಾವಣೆ ಜನರ ಗೋಳು

ಅನುಗ್ರಹ ಬಡಾವಣೆಯ ರಸ್ತೆಗಳಲ್ಲಿ ಮಂಡಿಯುದ್ದಕ್ಕೂ ಕೊಳಚೆ ನೀರು ನಿಂತಿತ್ತು. ಬಡಾವಣೆಯಲ್ಲಿರುವ ಹಲವಾರು ಮನೆಗಳಿಗೆ ನೀರು ನುಗ್ಗಿತ್ತು. ಮನೆಯವರು ನೀರನ್ನು ಹೊರಹಾಕಲು ರಾತ್ರಿಯೆಲ್ಲಾ ಹರಸಾಹಸ ಪಡುವಂತಾಯಿತು.

ಬೊಮ್ಮನಹಳ್ಳಿ ವಲಯ ಬಿಬಿಎಂಪಿ ಜಂಟಿ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, “ಅನುಗ್ರಹ ಬಡಾವಣೆ ತಗ್ಗು ಪ್ರದೇಶದಲ್ಲಿದೆ. ಪ್ರತಿ ವರ್ಷ ಇಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹವಾಗುತ್ತದೆ. ಈ ಹಿಂದೆ ನೀರು ಹರಿವಿಕೆ ಕಡಿಮೆ ಪ್ರಮಾಣದಲ್ಲಿ ಇತ್ತು. ಇದೀಗ ಕಟ್ಟಡ ನಿರ್ಮಾಣ ಹೆಚ್ಚಾಗಿದೆ. ಕಾಂಕ್ರೀಟ್ ರಸ್ತೆಗಳಾಗಿವೆ. ಇದರಿಂದ ನೀರು ಹರಿಯುವ ಪ್ರಮಾಣ ಹೆಚ್ಚಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...