ಬೆಂ.ಗ್ರಾಮಾಂತರ | ಮಾ.4ರಂದು ನೆಲಮಂಗಲಕ್ಕೆ ಮುಖ್ಯಮಂತ್ರಿ ಭೇಟಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Date:

ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 4ರಂದು ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಪೂರ್ಣ ಮಾಹಿತಿಯೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

“ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿ 243 ಎಂಎಲ್‌ಡಿ ನೀರನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 70 ಕೆರೆಗಳಿಗೆ ನೀರು ತುಂಬಿಸುವ ಮೊದಲನೇ ಹಂತದ ಕಾಮಗಾರಿಗೆ (1081ಕೋಟಿ) ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನೆಲಮಂಗಲ ತಾಲೂಕಿನಲ್ಲಿ ಕೈಗೊಂಡಿರುವ ಹಲವು ಇಲಾಖೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮವು ನೆಲಮಂಗಲ ತಾಲೂಕಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಷ್ಟಾಚಾರದಂತೆ ನಾಲ್ಕು ಜಿಲ್ಲೆಗಳನ್ನು ಪ್ರತಿನಿಧಿಸುವ ಆಮಂತ್ರಣ ಪತ್ರಿಕೆ ಸಿದ್ದಪಡಿಸಿ, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ‌, ಪಂಚಾಯತ್ ರಾಜ್ ಇಲಾಖೆ, ಕೆಪಿಟಿಸಿಎಲ್‌ನ ಕಾಮಗಾರಿಗಳು
ಶಂಕುಸ್ಥಾಪನೆ ಮತ್ತು ಉದ್ಘಾಟನೆಗೊಳ್ಳಲಿದ್ದು, ಸಂಪೂರ್ಣ ವಿವರ ನೀಡಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...