ಬೆಂಗಳೂರು ಗ್ರಾಮಾಂತರ | ಮೀನು ಸಾಕಾಣಿಕೆ; ನೆಲಮಂಗಲ ಕೆರೆಗಳಿಂದ ಸರ್ಕಾರಕ್ಕೆ 39.29 ಲಕ್ಷ ರೂ. ಆದಾಯ

Date:

  • 19 ಕೆರೆಗಳಲ್ಲಿ ಸುಮಾರು 39 ಲಕ್ಷ ಮೀನು ಮರಿಗಳನ್ನು ಬಿಡಲಾಗಿದೆ
  • ಮೀನುಗಾರಿಕಾ ಇಲಾಖೆಗೆ ಅಧಿಕ ಆದಾಯ ಬಂದಿದೆ ಎಂದ ಸಹಾಯಕ ನಿರ್ದೇಶಕಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆರೆಗಳಲ್ಲಿ ಮೀನು ಸಾಕಣೆಯಿಂದ 2022-23ನೇ ಸಾಲಿನಲ್ಲಿ ಸರ್ಕಾರಕ್ಕೆ ₹39,29,215 ಆದಾಯ ಬಂದಿದೆ. 

ತಾಲೂಕಿನಲ್ಲಿ ಒಟ್ಟು 21 ಕೆರೆಗಳನ್ನು ಮೀನು ಸಾಕಣೆಗೆ ಗುರುತಿಸಲಾಗಿದ್ದು, ಈ ಪೈಕಿ 19 ಕೆರೆಗಳಲ್ಲಿ ಮೀನು ಸಾಕಾಣಿಕೆ ನಡೆಯುತ್ತಿದೆ. ಈ ಕೆರೆಗಳಲ್ಲಿ ಸುಮಾರು 39 ಲಕ್ಷ ಮೀನು ಮರಿಗಳನ್ನು ಬಿಡಲಾಗಿದೆ ಎಂದು ಮೀನುಗಾರಿಕೆ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಅಮೃತಾ ತಿಳಿಸಿದ್ದಾರೆ.

“ನೆಲಮಂಗಲ ಪಟ್ಟಣದ ಕೆರೆಯಲ್ಲಿನ ನೀರು ಮೀನು ಸಾಕಾಣಿಕೆಗೆ ಯೋಗ್ಯವಿಲ್ಲವೆಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023-24ನೇ ಸಾಲಿನಲ್ಲಿ ಮೀನು ಸಾಕಾಣಿಕೆಯ ಕೆರೆಗಳ ನವೀಕರಣ ಏ.30ರೊಳಗೆ ಮಾಡಬೇಕಾಗಿದೆ. ನವೀಕರಣ ಮಾಡಲು ಈಗಾಗಲೇ ಮೀನುಗಾರರಿಗೆ ನೋಟಿಸ್ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕುಸ್ತಿಪಟುಗಳ ಹೋರಾಟಕ್ಕೆ ಎಐಡಿವೈಒ ಬೆಂಬಲ

2022-23ನೇ ಸಾಲಿನಲ್ಲಿ 19 ಕೆರೆಗಳ ಪೈಕಿ ದೇವರಹೊಸಹಳ್ಳಿ, ಹಳೇನಿಜಗಲ್, ಕುಲುವನಹಳ್ಳಿ, ಬಿದಲೂರು ಗಂಗಮ್ಮನ ಗುಡಿ, ಗೊಲ್ಲಹಳ್ಳಿ, ಟಿ.ಬೇಗೂರು, ಬರಧಿ, ಓಬಳಾಪುರ, ಶ್ರೀನಿವಾಸಪುರ, ದೊಡ್ದಬೆಲೆ ಕೋಣನಕೆ ಹಾಗೂ ಮರಳಕುಂಟೆ ಕೆರೆಗಳು ಈ ಟೆಂಡರ್‌ನಲ್ಲಿ ವಿಲೇವಾರಿ ಆಗಿದ್ದವು. ಬಿಲ್ಲಿನಕೋಟೆ, ಮದಗ, ನಿಡವಂದ, ತ್ಯಾಮಗೊಂಡ್ಲು ಹಿರೆಕೆರೆ, ಮಣ್ಣೇ ಅಮಾನಿಕೆರೆ ಮತ್ತು ಕಂಬಾಳು ಕೆರೆಗಳು ನವೀಕರಣದ ಮೂಲಕ ವಿಲೇವಾರಿಯಾಗಿವೆ ಎನ್ನಲಾಗಿದೆ.

ಕಳೆದ ಸಾಲಿನಲ್ಲಿ ಕುಲುವನಹಳ್ಳಿ ಕೆರೆ ಅತಿ ಹೆಚ್ಚು ₹13.50 ಲಕ್ಷಕ್ಕೆ ಹರಾಜಾಗಿದ್ದರೆ, ಹೊನ್ನರಾಯನಹಳ್ಳಿ ಕೆರೆ ₹9,480 ಕಡಿಮೆ ಮೊತ್ತಕ್ಕೆ ಹರಾಜಾಗಿತ್ತು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...