ಬೆಂಗಳೂರು ಗ್ರಾಮಾಂತರ | ಸಂತೆ ಮೈದಾನದಲ್ಲಿ ಮೂಲಸೌಕರ್ಯ ಮರೀಚಿಕೆ; ವ್ಯಾಪಾರಿಗಳ ಅಳಲು

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ (ದೇವನಹಳ್ಳಿ) ಪಟ್ಟಣದಲ್ಲಿ ಪ್ರತಿ ಶುಕ್ರವಾರ ಸಂತೆ ನಡೆಯುತ್ತಿದೆ. ಆದರೆ, ಸಂತೆ ನಡೆಯುವ ಮೈದಾನದಲ್ಲಿ ಅಗತ್ಯ ಮೂಲ ಸೌಕರ್ಯ ಇಲ್ಲದೆ ವ್ಯಾಪಾರಿಗಳು ಹಾಗೂ ಗ್ರಾಹಕರು ನಲುಗುತ್ತಿದ್ದು, ಸಂತೆ ನಡೆಯಲು ಬೇಕಾದ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ವಿದ್ಯುತ್ ದೀಪ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ವಿಜಯಪುರ ಪಟ್ಟಣದ ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

“ವಾರಕ್ಕೊಮ್ಮೆ ಇಲ್ಲಿ ಸಂತೆ ನಡೆಯುತ್ತದೆ. ಸಂಜೆ ಸಮಯ ಹೆಚ್ಚು ವ್ಯಾಪಾರ ಆಗುತ್ತದೆ. ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಸಂಜೆಯ ಹೊತ್ತಿನಲ್ಲಿ ಬರುತ್ತಾರೆ. ಇಲ್ಲಿ ಎಪಿಎಂಸಿಯಿಂದ ಸಂತೆ ಮಳಿಗೆ ನಿರ್ಮಾಣ ಮಾಡಿದ್ದಾರೆ. ಆದರೆ, ವಿದ್ಯುತ್ ಸಂಪರ್ಕವಿಲ್ಲ. ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ಸಂಜೆಯಾದರೆ ಕತ್ತಲಲ್ಲಿ ವ್ಯಾಪಾರ ಮಾಡಬೇಕಾದ ದುಃಸ್ಥಿತಿ ನಿರ್ಮಾಣವಾಗಿದೆ” ಎಂದು ವ್ಯಾಪಾರಿಯೊಬ್ಬರು ಅವಲತ್ತುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳಾ ವ್ಯಾಪಾರಿಗಳು ಬೆಳಗಿನಿಂದ ರಾತ್ರಿಯವರೆಗೂ ಇಲ್ಲೇ ಇರುತ್ತೇವೆ. ಶೌಚಾಲಯದ ವ್ಯವಸ್ಥೆ ಇಲ್ಲ. ಒಂದೊಂದು ಅಂಗಡಿಗೆ ₹120 ಸುಂಕ ಕಟ್ಟುತ್ತೇವೆ. ಮಳೆ ಬಂದರೆ, ಮಳೆ ನೀರು ನಿಂತುಕೊಳ್ಳುತ್ತೆ. ಇದರಿಂದ ಗ್ರಾಹಕರು ಅಂಗಡಿಗಳ ಕಡೆಗೆ ಬರುವುದಿಲ್ಲ. ವಾಹನದಲ್ಲಿ ತರಕಾರಿ ತರುವುದಕ್ಕೂ ಸಾಧ್ಯವಾಗುತ್ತಿಲ್ಲ” ಎಂದು ಮಹಿಳಾ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಬಗ್ಗೆ ಸುಂಕ ಕಟ್ಟಿಸಿಕೊಳ್ಳುವವರನ್ನು ಕೇಳಿದರೆ, ನಾವು ₹5 ಲಕ್ಷ ಬಂಡವಾಳ ಹಾಕಿದ್ದೇವೆ. ಅದಕ್ಕಾಗಿ ಸುಂಕ ವಸೂಲಿ ಮಾಡಿಕೊಳ್ಳುತ್ತಿದ್ದೇವೆ. ನೀವು ಪುರಸಭೆಯವರನ್ನು ಕೇಳಿ ಎನ್ನುತ್ತಾರೆ. ಪುರಸಭೆಯವರು ನಮಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿ ಕೂಡಲೇ  ಶೌಚಾಲಯ ವ್ಯವಸ್ಥೆ ಒದಗಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

“ಸಂಜೆ ವೇಳೆ ಕತ್ತಲಿರುವ ಕಾರಣ, ನಾವು ಚಾರ್ಜಿಂಗ್ ಲೈಟ್‌ ಇಟ್ಟುಕೊಳ್ಳುತ್ತಿದ್ದೇವೆ. ಆದರೆ, ನಮ್ಮ ಅಂಗಡಿಗಳ ಕಡೆಗೆ ಬರಲು ಸಾಧ್ಯವಾಗದ ಕಾರಣ ಗ್ರಾಹಕರು, ಬೆಳಕಿರುವ ಕಡೆಯಲ್ಲೆ ತರಕಾರಿ ಖರೀದಿಸಿ ಹೋಗುತ್ತಾರೆ. ಇದರಿಂದ  ನಿತ್ಯ ನಷ್ಟ ಉಂಟಾಗುತ್ತಿದೆ” ಎಂದು ನೋವು ತೋಡಿಕೊಂಡಿದ್ದಾರೆ.

“ಸಂತೆ ಮೈದಾನದಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳು ಯಾರೂ ಈವರೆಗೂ ದೂರು ನೀಡಿರಲಿಲ್ಲ. 6 ತಿಂಗಳ ಹಿಂದೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿತ್ತು. ಕೆಲವರು ರಾತ್ರಿಯ ವೇಳೆ ಬಂದು ವಿದ್ಯುತ್ ದೀಪಗಳನ್ನು ಹೊಡೆದು ಹಾಕಿದ್ದಾರೆ. ಚುನಾವಣೆ ಮುಗಿದ ಕೂಡಲೇ ಸಂತೆ ಮೈದಾನಕ್ಕೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲಾಗವುದು” ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ತಿಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...