ಬೆಂಗಳೂರು ಗ್ರಾಮಾಂತರ | ವಿಮಾನ ನಿಲ್ದಾಣದ ಕಂಬಕ್ಕೆ ಶಟಲ್‌ ಬಸ್‌ ಡಿಕ್ಕಿ; ಹತ್ತು ಮಂದಿಗೆ ಗಾಯ

Date:

ಕಂಬಕ್ಕೆ ಎಲೆಕ್ಟ್ರಿಕ್ ಶಟಲ್‌ ಬಸ್‌ ಡಿಕ್ಕಿ ಹೊಡೆದಿದ್ದು, ಹತ್ತು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ. 

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳ ನಡುವೆ ಸಂಚರಿಸುವ ಎಲೆಕ್ಟ್ರಿಕ್‌ ಶಟಲ್‌ ಬಸ್‌ ಭಾನುವಾರ ಬೆಳಗಿನ ಜಾವ ವಿಮಾನ ನಿಲ್ದಾಣದ ಕಂಬಕ್ಕೆ ಡಿಕ್ಕಿ ಹೊಡೆದಿದೆ. 5.15ರ ಸುಮಾರು ಟರ್ಮಿನಲ್‌–2ರಿಂದ ಟರ್ಮಿನಲ್‌ 1ಕ್ಕೆ ಪ್ರಯಾಣಿಕರನ್ನು ಕರೆ ತರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇಬ್ಬರು ಸಿಬ್ಬಂದಿ ಸೇರಿದಂತೆ ಒಟ್ಟು 17 ಮಂದಿ ಬಸ್‌ನಲ್ಲಿದ್ದರು. ಗಾಯಾಳುಗಳನ್ನು ವಿಮಾನ ನಿಲ್ದಾಣದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹತ್ತಾರು ತಾಸು ವಿಶ್ರಾಂತಿ ಇಲ್ಲದೆ ಕೆಲಸ ಮಾಡಿದ್ದ ಚಾಲಕ ದಣಿದಿದ್ದ ಎಂದು ತಿಳಿದು ಬಂದಿದೆ. ಬೆಳಗಿನ ಜಾವ ಚಾಲಕನಿಗೆ ನಿದ್ದೆಯ ಮಂಪರು ಕವಿದ ಕಾರಣ ಅಪಘಾತವಾಗಿರುವ ಸಾಧ್ಯತೆ ಇದೆ. ತನಿಖೆ ನಂತರವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಟಲ್‌ ಬಸ್‌ ಸೇವೆ ಗುತ್ತಿಗೆ ಪಡೆದಿರುವ ‘ಏರ್‌ ಇಂಡಿಯಾ ಸಾಟ್ಸ್‌’ ಸಂಸ್ಥೆಯ ಮ್ಯಾನೇಜರ್ ವಿಚಾರಣೆ ನಡೆದಿದೆ.

ಟರ್ಮಿನಲ್‌ಗಳ ನಡುವೆ ತಾರತಮ್ಯದ ಆರೋಪ

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌–1 ಮತ್ತು 2ರ ನಡುವಿನ ಸೇವೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

“ಟರ್ಮಿನಲ್‌ -2 ಕಾಮಗಾರಿಯೂ ಇನ್ನೂ ಪೂರ್ಣ ಪ್ರಯಾಣದಲ್ಲಿ ಮುಗಿದಿಲ್ಲ, ಹೀಗಾಗಿ ಅಲ್ಲಿಂದ ಕ್ಯಾಬ್‌, ಬಿಎಂಟಿಸಿಯ ವಾಯು ವಜ್ರ ಸೇವೆಯೂ ಲಭ್ಯವಿಲ್ಲ. ಈಗಾಗಲೇ ಏರ್‌ ಏಷ್ಯಾ, ಸ್ಟಾರ್‌ ಏರ್‌, ವಿಸ್ತಾರ ಏರ್‌ಲೈನ್ಸ್‌ಗಳು ಟರ್ಮಿನಲ್‌-2ರಿಂದ ಸೇವೆ ನೀಡುತ್ತಿವೆ. ಅದಕ್ಕಾಗಿ ಅಲ್ಲಿಗೆ ಬಂದಿಳಿದ ಪ್ರಯಾಣಿಕರನ್ನು ಟರ್ಮಿನಲ್‌-1ಕ್ಕೆ ಕರೆದುಕೊಂಡು ಹೋಗುವ, ಹೊಸ ಟರ್ಮಿನಲ್‌ ಬಗ್ಗೆ ಮಾಹಿತಿ ಇಲ್ಲದೇ ವಿಮಾನ ನಿಲ್ದಾಣದಿಂದ ವಿಮಾನಯಾನ ಮಾಡಲು ಬಂದ ಪ್ರಯಾಣಿಕರಿಗೆ ಮಾಹಿತಿ ನೀಡಿ, ಬೆಂಗಳೂರಿನಿಂದ ನಿರ್ಗಮಿಸಲು ಟರ್ಮಿನಲ್‌-2ಗೆ ಕರೆದೊಯ್ಯಲು ಶೆಟಲ್‌ ಬಸ್‌ ಸೇವೆಯ ವ್ಯವಸ್ಥೆ ಮಾಡಲಾಗಿದೆ” ಎಂದು ಪ್ರಯಾಣಿಕರು ತಿಳಿಸಿದ್ದಾರೆ..

“ಟರ್ಮಿನಲ್‌-2ರಲ್ಲಿಯೇ ಎಲ್ಲ ರೀತಿಯ ಕ್ಯಾಬ್‌, ವಾಯು ವಜ್ರ ಬಸ್‌ ಸೇವೆ ಸೇರಿದಂತೆ ಟರ್ಮಿನಲ್‌-1ರಲ್ಲಿ ಲಭ್ಯವಿರುವ ಸವಲತ್ತು ನೀಡಿದರೆ ಶೆಟಲ್‌ ಬಸ್‌ ಅಗತ್ಯ ಇರುವುದಿಲ್ಲ. ವಿಮಾನ ನಿಲ್ದಾಣದ ಬಳಕೆಗಾಗಿ ಪ್ರತಿಯೊಬ್ಬ ಪ್ರಯಾಣಿಕರಿಂದ ಟಿಕೆಟ್‌ನಲ್ಲಿ ವಸೂಲಿ ಮಾಡುವ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸೇವೆ ನೀಡುವಲ್ಲಿ ಟಿ-1 ಹಾಗೂ ಟಿ-2 ನಡುವೆ ತಾರತಮ್ಯ ಮಾಡಿದೆ” ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

“ಟರ್ಮಿನಲ್ 2 ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ 17 ಜನರನ್ನು ರಕ್ಷಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ಅದರಲ್ಲಿ ಹತ್ತು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆ ಪೈಕಿ ಐವರಿಗೆ ಚಿಕಿತ್ಸೆ ನೀಡಿ  ಮನೆಗೆ ಕಳಿಸಲಾಗಿದೆ. ಇಂಥ ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ” ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಕಾಂಪೌಂಡ್‌ ಕುಸಿದು ಆಟೋ, ಬೈಕ್‌ಗಳಿಗೆ ಹಾನಿ

“ವಿಮಾನ ನಿಲ್ದಾಣದ ಒಳಗೆ ಬಸ್‌ ಮೇಲೆ ನಿಗಾ ಇಡಲಾಗುತ್ತದೆ. ನಿಲ್ದಾಣದ ಹೊರಗೆ ಸಂಚರಿಸುವ ಶಟಲ್‌ ಬಸ್‌ಗಳ ಬಗ್ಗೆ ಯಾರೂ ಅಷ್ಟಾಗಿ ಗಮನ ಹರಿಸುವುದಿಲ್ಲ. ನಿರ್ಲಕ್ಷದಿಂದಾಗಿ ಅಪಘಾತವಾಗಿದೆ” ಎಂದು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

“ಸಿಬ್ಬಂದಿಯ ಕೊರತೆಯಿಂದಾಗಿ ಲಭ್ಯವಿರುವ ಚಾಲಕರಿಗೆ ಹೆಚ್ಚಿನ ಅವಧಿಯ ಕೆಲಸ (ಓವರ್‌ ಟೈಮ್‌ ಡ್ಯೂಟಿ) ನೀಡಲಾಗುತ್ತಿದೆ. ಹಾಗಾಗಿ ಹೆಚ್ಚಿನ ಚಾಲಕರು ವಿಶ್ರಾಂತಿ ನಿದ್ದೆ ಇಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಕೆಲವು ಚಾಲಕರು ಆರೋಪಿಸಿದ್ದಾರೆ. 

“ಏರ್‌ ಇಂಡಿಯಾ ಸಾಟ್ಸ್‌’ ಸಂಸ್ಥೆಗೆ ಶಟಲ್‌ ಬಸ್‌ ಸೇವೆ ಒದಗಿಸುವ ಗುತ್ತಿಗೆ ನೀಡಲಾಗಿದೆ. ವೋಲ್ವೊ ಹಾಗೂ ಜೆಬಿಎಂ ಕಂಪನಿಯ ಹವಾನಿಯಂತ್ರಿತ ಬಸ್‌ಗಳನ್ನು ಇದಕ್ಕೆ ನಿಯೋಜಿಸಲಾಗಿದೆ. 24 ತಾಸು ಎರಡೂ ಟರ್ಮಿನಲ್‌ ನಡುವೆ ಉಚಿತ ರೌಂಡ್‌ ಟ್ರಿಪ್‌ ಸೇವೆ ಒದಗಿಸಲಾಗುತ್ತಿದೆ.  ವಿದ್ಯುತ್‌ ಚಾಲಿತ ಬಸ್‌ಗಳಲ್ಲಿ ಹಿಂಬದಿಯಲ್ಲಿ ಬ್ಯಾಟರಿ ಇರುತ್ತದೆ. ಒಂದು ವೇಳೆ ಬಸ್‌ ಮುಂಭಾಗ ಬ್ಯಾಟರಿ ಇದ್ದರೆ ಕಂಬಕ್ಕೆ ಗುದ್ದಿದ ರಭಸಕ್ಕೆ ಬಸ್‌ ಸುಟ್ಟು ಭಸ್ಮವಾಗುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...