ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ

Date:

ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್‌ ಫೋನ್‌ ಸುಲಿಗೆ ಮಾಡುತ್ತಿದ್ದ ಮೂವರು ದರೋಡೆಕೋರರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಆಕಾಶ್ (19), ಪ್ರವೀಣ (18), ಹನುಮಂತ (22) ಬಂಧಿತ ಆರೋಪಿಗಳು. ಇವರಿಂದ ₹4.2 ಲಕ್ಷ ಮೌಲ್ಯದ 20 ಸ್ಮಾರ್ಟ್ ಫೋನ್‌ ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್‌ 14ರ ರಾತ್ರಿ 11.30ಕ್ಕೆ ಆಲೂರು-ದುದ್ದನಹಳ್ಳಿಯ ಅಮರ್ ತಮ್ಮ ಸ್ನೇಹಿತ ಕೋಡಿಹಳ್ಳಿಯ ನಿವಾಸಿ ಕುಮಾರ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ತೆರಳತ್ತಿದ್ದರು. ಈ ವೇಳೆ ದಾರಿ ಮಧ್ಯೆ ಬೈಕ್ ತಡೆದ ಮೂವರು ಅಪರಿಚಿತರು ಮಾರಕಾಸ್ತ್ರ ತೋರಿಸಿ, ಇಬ್ಬರಿಂದ ಮೊಬೈಲ್ ಮತ್ತು ಹಣ ಕಸಿಯಲು ಯತ್ನಿಸಿದ್ದರು. ಈ ವೇಳೆ ಸಮೀಪದ ಗ್ರಾಮಸ್ಥರು ದುಷ್ಕರ್ಮಿಗಳನ್ನು ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದ ಇವರು ಗಾರೆ ಕೆಲಸ ಮಾಡುತ್ತಿದ್ದರು. ಚಿಕ್ಕಜಾಲದಲ್ಲಿ ವಾಸವಿದ್ದ ಇವರಲ್ಲಿ ಒಬ್ಬಾತ ವಿದ್ಯಾರ್ಥಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

“ಉತ್ತರ ಭಾರತದ ಕಾರ್ಮಿಕರನ್ನು ಗುರಿಯಾಗಿಸಿಕೊಂಡ ಇವರು, ಕಾರ್ಮಿಕರಿಗೆ ಸಂಬಳ ಆದ ದಿನ, ರಾತ್ರಿ ವೇಳೆ ಹೊಂಚು ಹಾಕಿ ಮಾರಾಕಾಸ್ತ್ರ ತೋರಿಸಿ ಹೆದರಿಸುತ್ತಿದ್ದರು. ಅವರಿಂದ ಹಣ ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದರು. ಸುಲಿಗೆ ಮಾಡಿದ ಹಣದಲ್ಲಿ ಮೋಜು–ಮಸ್ತಿ ಮಾಡುತ್ತಿದ್ದರು” ಎಂದು ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...