ಬೆಂಗಳೂರು | ದೇವನೂರ ಮಹಾದೇವರ ಪಾಠ ಸೇರಿಸಲು ಎಸ್‌ಎಫ್‌ಐ ಆಗ್ರಹ

Date:

ಸಾಹಿತಿ ದೇವನೂರ ಮಹಾದೇವ ಅವರ ʼಎದೆಗೆ ಬಿದ್ದ ಅಕ್ಷರʼ ಪಾಠವನ್ನು ಪಠ್ಯಪುಸ್ತಕಕ್ಕೆ ಸೇರಿಸಬೇಕು ಎಂದು ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ಆಗ್ರಹಿಸಿದೆ.

“ರಾಜ್ಯ ಸರ್ಕಾರ ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ಸಮಿತಿ ರಚಿಸಿರುವುದನ್ನು ಎಸ್‌ಎಫ್‌ಐ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ” ಎಂದು ತಿಳಿಸಿದೆ.

“ಕಳೆದ ವರ್ಷ ಬಿಜೆಪಿ ಸರ್ಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಕಾಂಗ್ರೆಸ್ ಸರ್ಕಾರ ಮರುಸೇರ್ಪಡೆ ಮಾಡುತ್ತಿದೆ. ಆದರೆ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರ ಮಹಾದೇವರ ʼಎದೆಗೆ ಬಿದ್ದ ಅಕ್ಷರʼ ಎಂಬ ಪಾಠವು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ತಿದ್ದುಪಡಿ ಅಥವಾ ಸೇರ್ಪಡೆ ಪಟ್ಟಿಯಲ್ಲಿ ಇಲ್ಲದಿರುವುದು ನೋವಿನ ವಿಷಯವಾಗಿದೆ” ಎಂದು ಎಸ್‌ಎಫ್‌ಐ ಬೇಸರ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

“ಎದೆಗೆ ಬಿದ್ದ ಅಕ್ಷರ ಪಾಠವು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಹಿಂದೆ ಬಿಜೆಪಿ ಸರ್ಕಾರದ ಕೋಮುವಾದದ ವಿರುದ್ಧ ದೇವನೂರ ಮಹಾದೇವ ಅವರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದರು. ಹಾಗೂ ಎದೆಗೆ ಬಿದ್ದ ಅಕ್ಷರದ ಭಾಗವನ್ನು ಗದ್ಯಭಾಗದಲ್ಲಿ ಪ್ರಕಟಿಸಲು ನೀಡಿದ್ದ ಅನುಮತಿ ಹಿಂಪಡೆದಿದ್ದರು. ಆದರೆ, ಈಗ ಮುಖ್ಯಮಂತ್ರಿ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಇದರ ಬಗ್ಗೆ ಗಮನಹರಿಸಿ 10ನೇ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಅವರ ಪಾಠ ಸೇರಿಸಬೇಕು” ಎಂದು ಆಗ್ರಹಿಸಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...