ಬೆಂಗಳೂರು | ಮೆಟ್ರೋ ಫೀಡರ್ ಬಸ್ ಆರಂಭ; ವಾರಕ್ಕೆ ಎರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಪ್ರತಿಜ್ಞೆ ಮಾಡಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಟ್ರಾಫಿಕ್ ನಿಯಂತ್ರಣಕ್ಕೆ ತರಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಅಕ್ಟೋಬರ್ 9ರಿಂದ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು ಚಲಘಟ್ಟ-ಕೆಂಗೇರಿ ನಡುವೆ ಮೆಟ್ರೋ ರೈಲುಗಳ ಸಂಚಾರ ಆರಂಭಿಸಲಾಗಿದೆ. ಈ ಬೆನ್ನಲ್ಲೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೊಸ ಮೆಟ್ರೋ ಫೀಡರ್ ಬಸ್‌ ಸೇವೆ ಆರಂಭಿಸಿದೆ.

ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆ ಸಮಸ್ಯೆಯು ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡಿದೆ. ನಿತ್ಯ ಕೆಲಸಕ್ಕೆ ತೆರಳುವವರು, ಶಾಲಾ-ಕಾಲೇಜುಗಳಿಗೆ ತೆರಳುವವರು ಈ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ.

ಬೆಂಗಳೂರಿನಲ್ಲಿ ಕೇವಲ 10 ಕಿಲೋ ಮೀಟರ್ ಪ್ರಯಾಣ ಮಾಡುವುದಕ್ಕೆ ಗಂಟೆಗಟ್ಟಲೆ ಸಮಯ ತೆಗೆದುಕ್ಕೊಳ್ಳುತ್ತಿದೆ. ಇತ್ತೀಚೆಗೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ, ಲಕ್ಷಾಂತರ ಜನ ತಮ್ಮ ಊರುಗಳಿಗೆ ತೆರಳಲು ಒಮ್ಮೆಲೆ ರಸ್ತೆಗೆ ಇಳಿದಿದ್ದರು. ಈ ವೇಳೆ 8 ಕಿ.ಮೀ ಕ್ರಮಿಸಲು ಬರೋಬ್ಬರಿ 3 ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಪ್ರತಿನಿತ್ಯ ಹೊಸ ವಾಹನಗಳು ರಸ್ತೆಗಿಳಿಯುತ್ತಿವೆ. ಮೆಟ್ರೊ, ಬಿಡಿಎ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿವೆ ಹಾಗೂ ಕೊವೀಡ್ ಸಮಯದಲ್ಲಿ ಲಾಕಡೌನ್‌ನಿಂದ ಹಲವು ಜನ ವರ್ಕ್‌ ಫ್ರಂ ಹೋಮ್‌ ಕೆಲಸ ಮಾಡುತ್ತಿದ್ದರು. ಇದೀಗ ಎಲ್ಲ ಐಟಿ ಉದ್ಯೋಗಿಗಳು ಕಚೇರಿಗಳ ಕಡೆಗೆ ಆಗಮಿಸುತ್ತಿದ್ದಾರೆ. ಅಲ್ಲದೆ, ನಗರದಲ್ಲಿರುವ ಬಹುತೇಕರು ಸ್ವಂತ ವಾಹನ ತೆಗೆದುಕೊಂಡು ರಸ್ತೆಗೆ ಇಳಿಯುತ್ತಿದ್ದಾರೆ. ಇದು ಸಂಚಾರ ದಟ್ಟಣೆಗೆ ಪ್ರಮುಖ ಕಾರಣವಾಗಿದೆ.

ಈ ಹಿನ್ನೆಲೆ, ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದೀಗ ನೇರಳೆ ಮಾರ್ಗದ ಮೆಟ್ರೋ ಆರಂಭವಾದ ಬೆನ್ನಲ್ಲೇ, ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಎಂಟಿಸಿ ನೂತನ ಮೆಟ್ರೋ ಫೀಡರ್ ಸೇವೆ ಆರಂಭಿಸಿದೆ.

ನೂತನ ಮೆಟ್ರೋ ಫೀಡರ್ ಮಾರ್ಗಕ್ಕೆ ಬಿಎಂಟಿಸಿ 38 ಹೆಚ್ಚುವರಿ ಬಸ್ ಸೇವೆಯನ್ನು ಆರಂಭಿಸಿದೆ. ಕೆ.ಆರ್.ಪುರ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ ಮತ್ತು ಕಾಡುಗೋಡಿಯಿಂದ ಮಾರತ್ತಳ್ಳಿಯವರೆಗೆ ಎಸಿ, ನಾನ್ ಎಸಿ, ಬಿಎಂಟಿಸಿ ಬಸ್ ಸೇವೆ ಆರಂಭಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆ ಖಾಸಗಿ ಫೋಟೋ ಹರಿಬಿಟ್ಟು, ಪೊಲೀಸರಿಗೆ ದೂರು ಕೊಟ್ಟಿದ್ದ ದುರುಳನ ಬಂಧನ

  • ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಿಂದ ಮಹದೇವಪುರ, ಮಾರತ್ ಹಳ್ಳಿ ಬಿಡ್ಜ್‌, ಕಾಡು ಬೀಸನಹಳ್ಳಿ, ಅಗರ ಮಾರ್ಗವಾಗಿ ಸೆಂಟ್ರಲ್‌ ಸಿಲ್ಕ್‌ ಬೊರ್ಡ್‌ಗೆ ತೆರಳಲಿದೆ. (ಮಾರ್ಗ ಸಂಖ್ಯೆ-ವಿ-ಎಂಎಫ್-1ಸಿ)
  • ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಿಂದ ಮಹದೇವಪುರ, ಕುಂದಲಹಳ್ಳಿ ಗೇಟ್, ಗ್ರಾಫೈಟ್ ಇಂಡಿಯಾ, ಗರುಡಾಚಾರ್‌ಪಾಳ್ಯ ಮಾರ್ಗವಾಗಿ ಮತ್ತೆ ಕೆ.ಆರ್.ಪುರಂ ಮೆಟ್ರೋ ನಿಲ್ದಾಣ ತಲುಪಲಿದೆ. (ಮಾರ್ಗ ಸಂಖ್ಯೆ- ವಿ-ಎಂಎಫ್-2)
  • ಕಾಡುಗೋಡಿಯಿಂದ ಹೋಫ್‌ಫಾರಂ, ಐಟಿಪಿಎಲ್, ಗ್ರಾಫೈಟ್ ಇಂಡಿಯಾ, ಎಇಸಿಎಸ್ ಲೇಔಟ್, ಕುಂದಲಹಳ್ಳಿ ಗೇಟ್ ಮಾರ್ಗವಾಗಿ ಮಾರತ್ ಹಳ್ಳಿ ತಲುಪಲಿದೆ. (ಮಾರ್ಗ ಸಂಖ್ಯೆ-ವಿ-ಎಂಎಫ್-3)
  • ಕಾಡುಗೋಡಿಯಿಂದ ಹೋಫ್‌ಫಾರಂ, ಸಿದ್ದಾಪುರ, ವರ್ತೂರ್ ಮಾರ್ಗವಾಗಿ ಮರಳಿ ಮಾರತ್ ಹಳ್ಳಿ ತಲುಪಲಿದೆ. (ಮಾರ್ಗ ಸಂಖ್ಯೆ- ವಿ-ಎಂಎಫ್-4)

ಸಾರ್ವಜನಿಕ ಸಾರಿಗೆ ಬಳಸುವಂತೆ ಮನವಿ

ಸಂಚಾರ ದಟ್ಟಣೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ವಾರಕ್ಕೆ ಎರಡು ಬಾರಿಯಾದರೂ ಸಾರ್ವಜನಿಕರ ಸಾರಿಗೆಯನ್ನು ಬಳಸುವಂತೆ ಬಿಎಂಟಿಸಿ ತಿಳಿಸಿದೆ.

ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ಚಲ್ಲಘಟ್ಟದವರೆಗಿನ ನೇರಳೆ ಮಾರ್ಗವು ಒಟ್ಟು 43.49 ಕಿಮೀ ಉದ್ದ ಮತ್ತು 37 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...