ಬೆಂಗಳೂರು | ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್ ಹರಿದು ಬಿಸಾಕಿದ್ದ ಕಂಡಕ್ಟರ್ ಅಮಾನತು

Date:

ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು ‘ಶಕ್ತಿ ಯೋಜನೆ’ಯನ್ನು ಜಾರಿಗೆ ತಂದಿದೆ. ಆದರೆ, ಹೆಚ್ಚಿನ ಇನ್ಸೆಂಟಿವ್ ಆಸೆಗೆ ಬಿದ್ದ ಬಸ್‌ ನಿರ್ವಾಹಕರೊಬ್ಬರು ಮಹಿಳೆಯರಿಗಾಗಿ ಮೀಸಲಿರುವ ಉಚಿತ ಟಿಕೆಟ್‌ಗಳನ್ನು ಬೇಕಾಬಿಟ್ಟಿಯಾಗಿ ಹರಿದು ಬಿಸಾಕುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ನಿರ್ವಾಹಕರನ್ನು ಅಮಾನತು ಮಾಡಿದ್ದಾರೆ.

ಬೇಕಾಬಿಟ್ಟಿಯಾಗಿ ಟಿಕೆಟ್ ಹರಿದು ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಬಸ್‌ ನಿರ್ವಾಹಕ ಪ್ರಕಾಶ್ ಅರ್ಜುನ್ ಕೊಟ್ಯಾಳ ಅಮಾನತುಗೊಂಡವರು.

ಇವರು ಡಿಪೋ-17 ಮಾರ್ಗದ ಸಂಖ್ಯೆ-242B ಮೆಜೆಸ್ಟಿಕ್​​​​ನಿಂದ ತಾವರಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಉಚಿತ ಪ್ರಯಾಣ ಕಲ್ಪಿಸುವ ದೃಷ್ಟಿಯಿಂದ ಶಕ್ತಿ ಯೋಜನೆ ಜಾರಿಗೆ ತಂದಿದೆ. ಇದನ್ನೇ ದುರ್ಬಳಕೆ ಮಾಡಿಕೊಂಡ ಬಸ್‌ ನಿರ್ವಾಹಕರು ಇನ್ಸೆಂಟಿವ್ ಆಸೆಗೋಸ್ಕರ ಬೇಕಾಬಿಟ್ಟಿಯಾಗಿ ಟಿಕೆಟ್ ಹರಿದು ಬೀಸಾಕಿದ್ದಾರೆ. ಇದನ್ನು ಕಂಡ ಮಹಿಳಾ ಪ್ರಯಾಣಕಿಯೊಬ್ಬರು ‘ಯಾಕೆ ಈ ರೀತಿ ಟಿಕೆಟ್ ಹರಿದು ಬೀಸಾಕುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರಿಗೆ ಮೀಸಲಾಗಿರುವ ಉಚಿತ ಟಿಕೆಟ್‌ಗಳನ್ನು ಹರಿದು, ನಿಗಮಗಳಿಗೆ ನಿರ್ವಾಹಕರು ಹೆಚ್ಚಿನ ಲೆಕ್ಕ ತೋರಿಸುತ್ತಾರೆ. ಇದರಿಂದ ಹೆಚ್ಚಿನ ಫ್ರೀ ಟಿಕೆಟ್ ತೋರಿಸಿದರೆ ಹೆಚ್ಚು ಇನ್ಸೆಂಟಿವ್ ಬರಬಹುದು ಎಂಬ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ ಎಂಬ ಆರೋಪವಿದೆ.

ಈ ಸಂಬಂಧ ಅಧಿಕಾರಿಗಳು ಬಸ್‌ ನಿರ್ವಾಹಕ ಅರ್ಜುನ್ ಅವರನ್ನು ಬಿಎಂಟಿಸಿ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ಬಸ್‌ ನಿರ್ವಾಹಕ ಅರ್ಜುನ್ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ಈ ಘಟನೆ ಬೆನ್ನಲ್ಲೇ, ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ, ನಿಗಮ ಇತರ ಬಸ್‌ ನಿರ್ವಾಹಕರಿಗೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ಬೇಕಾಬಿಟ್ಟಿಯಾಗಿ ಉಚಿತ ಟಿಕೆಟ್ ಹರಿದು ಬೀಸಾಕಿದ ಬಿಎಂಟಿಸಿ ನಿರ್ವಾಹಕ

ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 18,08,45,54,754 ಆಗಿದೆ. ಪ್ರತಿನಿತ್ಯ ಅಂದಾಜು 60 ಸಾವಿರಕ್ಕೂ ಹೆಚ್ಚು ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಮಹಿಳಾ ಪ್ರಯಾಣಿಕರ ಸಾರಿಗೆ ವೆಚ್ಚವನ್ನು ಸರ್ಕಾರ ನಿಗಮಗಳಿಗೆ ನೀಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...