ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್‌ನ 5 ಪಂದ್ಯಗಳು ನಡೆಯಲಿವೆ. ಈ ಪೈಕಿ ನಾಲ್ಕು ಪಂದ್ಯಗಳಿಗೆ ಅ.19ರವರೆಗೆ ಟಿಕೆಟ್ ಮಾರಾಟ ಇರಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುವ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಜೋಷ್ ಹ್ಯಾಜಲ್‌ವುಡ್ ಅವರು ಈ ವಿಶ್ವಕಪ್ ಟೂರ್ನಿಯಲ್ಲಿ ಆಡಲಿದ್ದು, ಇದು ಪಂದ್ಯ ವೀಕ್ಷಣೆಗೆ ಬೆಂಗಳೂರಿಗರ ವಿಶೇಷ ಆಕರ್ಷಣೆಯಾಗಿದೆ.

ಸದ್ಯ ಆಸ್ಟ್ರೇಲಿಯಾ–ಪಾಕಿಸ್ತಾನ (ಅ.20), ಇಂಗ್ಲೆಂಡ್–ಶ್ರೀಲಂಕಾ (ಅ.26), ನ್ಯೂಜಿಲೆಂಡ್–ಪಾಕಿಸ್ತಾನ (ನ.4) ಹಾಗೂ ನ್ಯೂಜಿಲೆಂಡ್–ಶ್ರೀಲಂಕಾ(ನ.9) ಪಂದ್ಯಗಳ ಟಿಕೆಟ್ ಮಾರಾಟ ಆರಂಭವಾಗಿದೆ. ಇನ್ನು ಭಾರತ–ನೆದರ್ಲೆಂಡ್ಸ್‌ (ನ.12) ಪಂದ್ಯದ ಟಿಕೆಟ್‌ಗಳ ಮಾರಾಟ ಆರಂಭವಾಗಿಲ್ಲ.

ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯ ಅ.20ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನೆಲೆ, ಮಂಗಳವಾರದಿಂದ ಕ್ರಿಕೆಟ್‌ ಪ್ರೇಮಿಗಳಿಗಾಗಿ ಟಿಕೆಟ್‌ ಮಾರಾಟ ಆರಂಭವಾಗಿತ್ತು. ಹಲವು ಜನ ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿ ಮಾಡಲು ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಬುಧವಾರ ಮತ್ತು ಗುರುವಾರ ಕ್ರೀಡಾಂಗಣದ ಗೇಟ್ ಸಂಖ್ಯೆ 2 ಮತ್ತು 4 (ಕಬ್ಬನ್ ರಸ್ತೆ) ಹಾಗೂ ಗೇಟ್ ಸಂಖ್ಯೆ 16, 18ರಲ್ಲಿ (ಕ್ವೀನ್ಸ್ ರಸ್ತೆ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಟಿಕೆಟ್ ಖರೀದಿಗೆ ಅವಕಾಶವಿರಲಿದೆ.

ಸೀಮಿತ ಸಂಖ್ಯೆಯ ಟಿಕೆಟ್‌ಗಳು ಮಾತ್ರ ಲಭ್ಯವಿರಲಿದ್ದು, ಒಬ್ಬರಿಗೆ ಗರಿಷ್ಠ 2 ಟಿಕೆಟ್ ಮಾತ್ರ ನೀಡಲಾಗುತ್ತಿದೆ. ಕನಿಷ್ಠ ₹750 ರಿಂದ ಗರಿಷ್ಠ ₹25 ಸಾವಿರದವರೆಗೆ ಟಿಕೆಟ್ ದರ ನಿಗದಿಯಾಗಿದೆ.

ಮಂಗಳವಾರದಿಂದ ನಾಲ್ಕು ಪಂದ್ಯಗಳಿಗೆ ಟಿಕೆಟ್‌ ಮಾರಾಟ ಆರಂಭವಾದ ಹಿನ್ನೆಲೆ, ಹಲವು ಜನ ರಜೆ ಹಾಕಿ ಟಿಕೆಟ್ ಖರೀದಿಗೆ ಬಂದಿದ್ದರು. ಸರತಿ ಸಾಲಿನಲ್ಲಿ ನಿಂತು ಜನ ಟಿಕೆಟ್ ಖರೀದಿ ಮಾಡುತ್ತಿದ್ದರು. ಇದೇ ವೇಳೆ, ಸರ್ವರ್ ನಿಧಾನಗತಿಯಲ್ಲಿ ಇದ್ದ ಕಾರಣ ಜನರು ಸಾಲಿನಲ್ಲಿ ನಿಂತು ಬಹಳ ಹೊತ್ತು ಕಾಯಬೇಕಾಯಿತು. ಇನ್ನು ಕಡಿಮೆ ಮೊತ್ತದ ಟಿಕೆಟ್‌ಗಳು ಬಹು ಬೇಗನೆ ಖಾಲಿಯಾದವು. ಹಾಗಾಗಿ, ಹಲವು ಅಭಿಮಾನಿಗಳು ಬರಿಗೈಯಲ್ಲಿ ವಾಪಸ್ ಮರಳಬೇಕಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೋರಮಂಗಲದ ಪಬ್‌ವೊಂದರಲ್ಲಿ ಬೆಂಕಿ ಅವಘಡ

ನವೆಂಬರ್ 12ರಂದು ನಡೆಯಲಿರುವ ಭಾರತ ಮತ್ತು ನೆದರ್ಲೆಂಡ್ಸ್ ನಡುವಣ ಪಂದ್ಯದ ಟಿಕೆಟ್‌ ಮಾರಾಟವಾಗುತ್ತಿದೆಯೆಂಬ ವದಂತಿ ನಂಬಿ ಹಲವು ಜನ ಕಚೇರಿಗಳಿಗೆ ರಜೆ ಹಾಕಿ ಟಿಕೆಟ್ ಖರೀದಿ ಮಾಡಲು ಬಂದಿದ್ದರು. ಈ ವೇಳೆ, ಭಾರತ-ನೆದರ್ಲೆಂಡ್ಸ್ ಪಂದ್ಯ ಟಿಕೆಟ್ ನೀಡುವ ಪ್ರಕ್ರಿಯೆ ಇನ್ನು ಆರಂಭವಾಗಿಲ್ಲ ಎಂಬುದನ್ನು ಅರಿತು ಪೆಚ್ಚು ಮೊರೆ ಹಾಕಿ ಮನೆ ಕಡೆ ನಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...