ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆಯಡಿ ಪರಿಹಾರ ಮೊತ್ತ ಬಿಡುಗಡೆ

Date:

ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ಮೊತ್ತದ ಚೆಕ್ ವಿತರಿಸಿ ಮಾತನಾಡಿದರು.

“ಸಾರಿಗೆ ಸಿಬ್ಬಂದಿಗಳು ಹಗಲು, ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 3

“ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು‌. ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಕೆಎಸ್‌ಆರ್‌ಟಿಸಿ ನೌಕರ

“ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ʼಕೆಎಸ್‌ಆರ್‌ಟಿಸಿ ಆರೋಗ್ಯʼ ಯೋಜನೆಯನ್ನೂ ಕೂಡ ಜಾರಿಗೆ ತಂದಿದ್ದು, ರಾಜ್ಯಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದೆ. ಈವರೆಗೂ 56,000ಕ್ಕೂ ಅಧಿಕ ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ” ಎಂದು ತಿಳಿಸಿದರು.

ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗ ಅರಕಲಗೂಡು ಘಟಕದ ಬಿಲ್ಲೆ ಸಂಖ್ಯೆ. 1624, ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ ಡಿ ಅವರಿಗೆ ₹25 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ ಅವರಿಗೆ 2024ರ ಮಾರ್ಚ್‌ 25ರಿಂದ ಡಿಸೆಂಬರ್‌ 09ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ

ಸಂಸ್ಥೆಯಿಂದ ₹4,85,762ರಷ್ಟು ಪೂರ್ಣ ವೈದ್ಯಕೀಯ ವೆಚ್ಚ ಭರಿಸಲಾಗಿದೆ. ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ₹1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈವರೆಗೂ 24 ಮಂದಿ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹1 ಕೋಟಿ ಚೆಕ್ ನೀಡಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ₹26 ಕೋಟಿ ಪರಿಹಾರ ನೀಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 2

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ₹3 ಲಕ್ಷವಿದ್ದ ಪರಿಹಾರದ ಮೊತ್ತವನ್ನು 2023ರ ನವೆಂಬರ್‌ 01ರಿಂದ ₹10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈವರೆಗೂ 94 ಪ್ರಕರಣಗಳಲ್ಲಿ ತಲಾ ₹10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ಇಂದು ತಲಾ ₹10 ಲಕ್ಷಗಳ ಪರಿಹಾರದ ಚೆಕ್ ವಿತರಿಸಲಾಗಿದೆ. ಈವರೆಗೂ 125 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು ₹12.50 ಕೋಟಿ ಪರಿಹಾರ ನೀಡಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ₹25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 1

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ನೇತೃತ್ವದಲ್ಲಿ, ಅಪಘಾತದಲ್ಲಿ‌ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ಇಂದು ತಲಾ ₹1 ಕೋಟಿಯಂತೆ ಇಬ್ಬರಿಗೆ ₹2 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ(31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹10 ಲಕ್ಷದಂತೆ) ₹3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ನೌಕರರ ಕುಟುಂಬಸ್ಥರಿಗೆ ಪರಿಹಾರ 4

ಕರಾರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ವಿ ಮಾತನಾಡಿ, “ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಹಾರದ ಹಣವನ್ನು ಸದುಪಯೋಗಪಡಿಸಿಕೊಳ್ಳಿ ಯಾರನ್ನೂ ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ. ಕರಾರಸಾ ನಿಗಮ ಸಚಿವರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮಾರ್ಗದರ್ಶನದಂತೆ, ನಿಗಮದಲ್ಲಿ ಹತ್ತು- ಹಲವು ಕಾರ್ಮಿಕ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನರೇಗಾ ಯೋಜನೆಯ ಸಮರ್ಪಕ ಜಾರಿಗೆ ಕೆಪಿಆರ್‌ಎಸ್‌ ಆಗ್ರಹ

ವ್ಯವಸ್ಥಾಪಕ ನಿರ್ದೇಶಕ ಆರ್ ರಾಮಚಂದ್ರನ್, ಬಿಎಂಟಿಸಿ ನಿರ್ದೇಶಕಿ ಡಾ. ನಂದಿನಿದೇವಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...