ಬೆಂಗಳೂರು ವಿವಿ | ಹಾಸ್ಟೆಲ್‌ಗಳ ಹಾಸಿಗೆ-ದಿಂಬು ಖರೀದಿ ಅಕ್ರಮ; ತನಿಖೆಗೆ ವಿದ್ಯಾರ್ಥಿಗಳ ಆಗ್ರಹ

Date:

  • ಬೆಂಗಳೂರು ವಿವಿಯ ಕುಲಪತಿ, ಕುಲಸಚಿವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು
  • ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಲ್ಲಿ ಅಕ್ರಮ ನಡೆದಿರುವ ಆರೋಪ

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯಗಳ ಹಾಸಿಗೆ, ದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಎಲ್ಲ ವಿದ್ಯಾರ್ಥಿನಿಲಯಗಳ ಸ್ನಾಥಕೋತ್ತರ ಪದವಿ ಮತ್ತು ಪಿ.ಎಚ್‌ಡಿ ವಿದ್ಯಾರ್ಥಿಗಳು, ಕುಲಪತಿ ಮತ್ತು ಕುಲಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಬೆಂಗಳೂರು ವಿಶ್ವ ವಿದ್ಯಾನಿಲಯದ ಒಂಬತ್ತು ವಿದ್ಯಾರ್ಥಿನಿಲಯಗಳಿಗೆ ಅಗತ್ಯವಿದ್ದ ಹಾಸಿಗೆ, ದಿಂಬುಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದಾಗಿ ವರದಿಯಾಗಿದೆ. ಪೂರೈಕೆಗೆಂದು ಕರೆಯಲಾಗಿದ್ದ ಟೆಂಡರಲ್ಲಿ ಉಲ್ಲೇಖಿಸಲಾಗಿದ್ದ ಗುಣಮಟ್ಟವೂ ಇಲ್ಲವಾಗಿದ್ದು, ಪೂರೈಸುವುದಾಗಿ ತೋರಿಸಲಾಗಿದ್ದ ಹಾಸಿಗೆ ದಿಂಬುಗಳ ಬದಲು ಕಳಪೆ ಹಾಗೂ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಲಭ್ಯವಿರುವ ಹಾಸಿಗೆ- ದಿಂಬುಗಳನ್ನು ಪೂರೈಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

2021-22ನೆ ಸಾಲಿನಲ್ಲಿ ಟೆಂಡರ್ ಕರೆಯಲಾಗಿದ್ದು, ಪ್ರತಿ ಹಾಸಿಗೆಗೆ ₹5,900 ಮತ್ತು ಪ್ರತಿ ದಿಂಬಿಗೆ ₹650 ನಿಗದಿಪಡಿಸಲಾಗಿತ್ತು. ಆದರೆ, ಮಾರುಕಟ್ಟೆಯಲ್ಲಿ ₹3,000 ಸಿಗುವ ಹಾಸಿಗೆ ಮತ್ತು ₹150 ಕ್ಕೆ ಸಿಗುವ ದಿಂಬುಗಳನ್ನು ಹೆಚ್ಚಿನ ದರದಲ್ಲಿ ಖರೀದಿಸಲಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೆಂಗಳೂರು ವಿವಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತದಲ್ಲಿ ಬೆಂಗಳೂರು ವಿವಿಯ ಒಂಬತ್ತು ವಿದ್ಯಾರ್ಥಿನಿಲಯಗಳಿಗೆ ಹಾಸಿಗೆ ಮತ್ತು ದಿಂಬು ಸರಬರಾಜು ಮಾಡುವ ಬಗ್ಗೆ ಟೆಂಡರ್ ಅನ್ನು ಪ್ರಕಟ ಮಾಡಿ, 2022ರ ಫೆ. 3ರಂದು ಎಸ್.ಎಲ್.ವಿ ಟ್ರೇಡಿಂಗ್ ಕಾರ್ಪೋರೇಶನ್‌ಗೆ ವಸ್ತುಗಳನ್ನು ಪೂರೈಕೆ ಮಾಡಲು ಆದೇಶ ನೀಡಲಾಗಿತ್ತು.

₹1,23,80,650 ಕೋಟಿ ಟೆಂಡರ್ ಇದಾಗಿದ್ದು, ಒಂಬತ್ತು ಹಾಸ್ಟೆಲ್‌ಗಳಿಗೆ 1,848 ಹಾಸಿಗೆ ಮತ್ತು 2,273 ದಿಂಬುಗಳನ್ನು ಪೂರೈಕೆ ಮಾಡುವಂತೆ ಆದೇಶ ನೀಡಲಾಗಿತ್ತು. ₹3,000 ಗಳಿಗಿಂತಲು ಕಡಿಮೆ ಬೆಲೆಯ ಪ್ರತಿ ಹಾಸಿಗೆಗೆ ₹5,900 ಬಿಲ್ ಮತ್ತು ₹150 ಪ್ರತಿ ದಿಂಬಿಗೆ ₹650 ಬಿಲ್ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ಹಗರಣವು ಒಂದು ವರ್ಷದ ಹಿಂದೆ ನಡೆದಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಬಹಿರಂಗವಾಗಿದೆ. ಟೆಂಡರ್‌ ನೀಡಿದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕ ಮತ್ತು ವಸ್ತುಗಳ ಗುಣಮಟ್ಟ ಪರೀಕ್ಷಿಸುವಲ್ಲಿ ಲೋಪವ ಎಸಗಿದ ಟೆಕ್ಟ್‌ಟೈಲ್ಸ್‌ ವಿಭಾಗದ ಪ್ರಾಧ್ಯಾಪಕ ಡಾ. ಹನುಮಂತ ನಾಯ್ಕ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...