ಬೆಂಗಳೂರು | ಮೈದಾನದೊಳಗೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಯಾರು? ದೂರು ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಮವಾರ ಆರ್‌ಸಿಬಿ ಮತ್ತು ಪಂಬಾಬ್‌ ಕಿಂಗ್ಸ್‌ ನಡುವೆ ಐಪಿಎಲ್‌ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಬಿಗಿದ್ದು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಪಂದ್ಯ ನಡೆಯುವ ವೇಳೆ, ಅಭಿಮಾನಿಯೊಬ್ಬ ಮೈದಾನದೊಳಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದಿದ್ದಾನೆ. ಇದು ಭದ್ರತಾ ಲೋಪವಾಗಿದೆ. ಸದ್ಯ ಅಭಿಮಾನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಚಕ ಐಪಿಎಲ್ ಪಂದ್ಯ ನಡೆಯುತ್ತಿತ್ತು. ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯ ನಡೆಯುವ ವೇಳೆ, ಮೈದಾನಕ್ಕೆ ನುಗ್ಗಿದ ವ್ಯಕ್ತಿ ಯಾರು? ಆತನ ಉದ್ದೇಶ ಏನು? ಎಂದು ಸೇರಿದಂತೆ ಪೊಲೀಸರು ಸಾಕಷ್ಟು ವಿವರ ಕಲೆ ಹಾಕುತ್ತಿದ್ದಾರೆ.

ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದ ಅಭಿಮಾನಿ ವಿಚಾರಣೆ ನಡೆಸಲಾಗಿದೆ. ಈತ ಮೂಲತಃ ರಾಯಚೂರಿನವನಾಗಿದ್ದು, ಅಪ್ರಾಪ್ತ ಯುವಕ ಎಂದು ತಿಳಿದುಬಂದಿದೆ. ಪಂದ್ಯ ವೀಕ್ಷಣೆ ಮಾಡಲು ಈತ ರೈಲಿನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಬಂದಿದ್ದನು.

ಈ ಸುದ್ದಿ ಓದಿದ್ದೀರಾ? ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

17 ವರ್ಷದ ಅಪ್ರಾಪ್ತ ₹3,000 ನೀಡಿ ‘ಡಿ ಬ್ಲಾಕ್’ ಟಿಕೆಟ್ ಖರೀದಿ ಮಾಡಿದ್ದನು. ಆತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದಾನೆ. ವಿರಾಟ್ ಕೊಹ್ಲಿಯನ್ನು ಹಿಡಿದುಕೋ ಎಂದು ಹಿಂದೆ ಕುಳಿತವರು ಕೂಗುತ್ತಿದ್ದರು. ಈ ವೇಳೆ ಗ್ರಿಲ್ ಹಾರಿ ಮೈದಾನದ ಒಳಗೆ ನುಗ್ಗಿದ್ದಾಗಿ ಅಪ್ರಾಪ್ತ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ಹೇಳಿದ್ದಾನೆ ಎನ್ನಲಾಗಿದೆ.

ಮೈದಾನಕ್ಕೆ ಅತಿಕ್ರಮ ಪ್ರವೇಶ, ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡ 4 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಐಪಿಎಲ್‌ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿರುವ ಆರ್​ಸಿಬಿ ಒಂದರಲ್ಲಿ ಸೋಲನುಭವಿಸಿದ್ದು, ಇನ್ನೊಂದರಲ್ಲಿ ಗೆಲುವು ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...