ಬೆಂಗಳೂರು | ಕಾರು ಮುಳುಗಿ ಯುವತಿ ಸಾವು ಪ್ರಕರಣ: ಅಂಡರ್‌ಪಾಸ್‌ಗೆ ಲೋಕಾಯುಕ್ತರ ಭೇಟಿ

Date:

ಬೆಂಗಳೂರು ನಗರದಲ್ಲಿ ಮೇ 21ರಂದು ಭಾರೀ ಮಳೆ ಸುರಿದ ಸಂದರ್ಭದಲ್ಲಿ ಕಾರು ಮುಳುಗಿ ಭಾನುರೇಖಾ ಎಂಬ ಯುವತಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುರ್ಘಟನೆಗೆ ಕಾರಣವಾದ ಕೆ ಆರ್‌ ವೃತ್ತದ ಅಂಡರ್‌‍ಪಾಸ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ, ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಆದೇಶಿಸಿದ್ದರು. ಲೋಕಾಯುಕ್ತದ ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್‌ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ಬುಧವಾರ ಕೆ ಆರ್‌ ವೃತ್ತದ ಅಂಡರ್‌ಪಾಸ್‌ಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿತು.

ಲೋಕಾಯುಕ್ತದ ತಾಂತ್ರಿಕ ವಿಭಾಗದ ಎಂಜಿನಿಯರ್‌ಗಳೊಂದಿಗೆ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮಳೆನೀರು ಕಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರಿಂದ ವಿವರಣೆ ಪಡೆಯಲಾಯಿತು. ಟ್ಯಾಂಕರ್‌ನಲ್ಲಿ ನೀರು ತರಿಸಿ ಅಂಡರ್‌ಪಾಸ್‌ನ ಕಾಲುವೆಯಲ್ಲಿ ಹರಿಸಿ, ಪರೀಕ್ಷಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರ್ಘಟನೆ ಸಂಭವಿಸಿದ ದಿನ ಅಂಡರ್‌ಪಾಸ್‌ನಲ್ಲಿ ಬೃಹತ್‌ ಪ್ರಮಾಣದ ನೀರು ಸಂಗ್ರಹ ಆಗಲು ಕಾರಣ, ಮಳೆನೀರು ಅಂಡರ್‌ಪಾಸ್‌ನಲ್ಲಿ ನಿಲ್ಲದಂತೆ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಕೆ ಆರ್‌ ವೃತ್ತದ ಅಂಡರ್‌ಪಾಸ್‌ ಮಾತ್ರವಲ್ಲ ನಗರದ ಯಾವುದೇ ಅಂಡರ್‌ಪಾಸ್‌ನಲ್ಲೂ ಸರಿಯಾದ ನಿರ್ವಹಣೆ ಇಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಅಂಡರ್‌ಪಾಸ್‌ಗಳಲ್ಲಿ ಮಳೆನೀರು ನಿಲ್ಲುವುದನ್ನು ತಡೆಯಲು ಕಾಲುವೆಗಳಲ್ಲಿ ಹೂಳು ತೆಗೆಯಬೇಕಿತ್ತು. ಅಂಡರ್‌ಪಾಸ್‌ ಮತ್ತು ಅವುಗಳಿಗೆ ಹೊಂದಿಕೊಂಡ ಕಾಲುವೆಗಳಲ್ಲಿ ಹೂಳು ತೆಗೆದಿಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿದೆ. ಮಳೆಗಾಲಕ್ಕೂ ಮೊದಲು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಪರಿಶೀಲನೆ ವೇಳೆ ಗೊತ್ತಾಗಿದೆ.

“ಕೆ ಆರ್‌ ವೃತ್ತದ ಅಂಡರ್‌ಪಾಸ್‌ನಲ್ಲಿ ದುರ್ಘಟನೆ ಸಂಭವಿಸಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅದರ ಜತೆಯಲ್ಲೇ ಇತರ ಅಂಡರ್‌ಪಾಸ್‌ಗಳ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಕರ್ತವ್ಯಲೋಪದ ಕುರಿತು ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು” ಎಂದು ತನಿಖಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...