ಬಂಗಾರಪೇಟೆ | ತಹಶೀಲ್ದಾರ್‌ ವರ್ಗಾವಣೆಗೆ ಕೆಎಸ್ಎಟಿ ತಡೆಯಾಜ್ಞೆ; ಸೀಟಿಗಾಗಿ ತಹಶೀಲ್ದಾರ್‌ಗಳಿಬ್ಬರ ಜಟಾಪಟಿ

Date:

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ.

ವರ್ಗಾವಣೆಯಾಗಿದ್ದ ತಹಶೀಲ್ದಾರ್‌ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ ಅಧಿಕಾರವಹಿಸಿಕೊಂಡಿದ್ದ ತಹಶೀಲ್ದಾರ್‌ ಸುಜಾತ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಇಬ್ಬರ ನಡುವಿನ ವಾಗ್ವಾದ ನಡೆಯಿತು.

ಆಡಳಿತರೂಡ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ತಹಶೀಲ್ದಾರ್ ವೆಂಕಟೇಶಪ್ಪ 5 ತಿಂಗಳಲ್ಲೇ ವರ್ಗಾವಣೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಸ್. ಎನ್ ನಾರಾಯಣಸ್ವಾಮಿ ಮತ್ತು ತಹಶೀಲ್ದಾರ್ ವೆಂಕಟೇಶಪ್ಪನವರ ನಡುವೆ ಹೊಂದಾಣಿಕೆ ಇರಲಿಲ್ಲ. ಇದರಿಂದಾಗಿ ಶಾಸಕರು ವೆಂಕಟೇಶಪ್ಪನವರ ವಿರುದ್ದ ಅಸಮದಾನವನ್ನು ಹೊರಹಾಕಿದ್ದರು. ಅವರ ಕಾರ್ಯವೈಖರಿ ಸರಿಯಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಡಿಸೆಂಬರ್ 31 ರಂದು ವರ್ಗಾವಣೆ ಮಾಡಿಸಲಾಗಿತ್ತು. ಅವರ ಸ್ಥಾನಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮುಜರಾಯಿ ತಹಶೀಲ್ದಾರ್ ಆಗಿದ್ದ ಸುಜಾತ ಅವರನ್ನು ವರ್ಗಾವಣೆ ಮಾಡಿ ನೇಮಕ ಮಾಡಲಾಗಿತ್ತು. ಅದರಂತೆ ಸುಜಾತ ಅವರು ಬಂಗಾರಪೇಟೆಯಲ್ಲಿ ಅಧಿಕಾರವಹಿಸಿಕೊಂಡು ಕರ್ತವ್ಯನಿರ್ವಹಿಸುತ್ತಿದ್ದರು.

ಇದರ ನಡುವೆ ಕಾನೂನು ಸಮರಕ್ಕೆ ಮುಂದಾಗಿದ್ದ ವೆಂಕಟೇಶಪ್ಪ, ʼಸಕಾರಣವಿಲ್ಲದೆ ನನ್ನನ್ನು ಅವಧಿಗೆ ಮುನ್ನ ವರ್ಗಾವಣೆ ಮಾಡಲಾಗಿದೆ. ಗೆಜೆಟೆಡ್ ಎ ಮತ್ತು ಗ್ರೂಪ್ ಬಿ ಅಧಿಕಾರಿಗಳು ವರ್ಗಾವಣೆಯ ನಂತರ ಒಂದು ಸ್ಥಾನದಲ್ಲಿ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಶಿಫಾರಸ್ಸು ಮಾಡಿದೆ. ಈ ಬಗ್ಗೆ ಕರ್ನಾಟಕ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಸಹ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದರೆ ತಮ್ಮನ್ನು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ, ಬಂಗಾರಪೇಟೆಯಲ್ಲಿ ಕರ್ತವ್ಯ ಮುಂದುವರಿಸಿʼ ಎಂದು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಅಂಗೀಕರಿಸಿದ ಕೆಎಸ್‌ಎಟಿ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಕರ್ತವ್ಯ ಮುಂದುವರೆಸುವಂತೆ ಮಧ್ಯಂತರ ಆದೇಶ ಹೊರಡಿಸಿದೆ.

ತಹಶೀಲ್ದಾರ್ ವೆಂಕಟೇಶಪ್ಪರಿಗೆ ಜನವರಿ 3 ರಂದು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ನೀಡಿದೆ. ವೆಂಕಟೇಶಪ್ಪ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಆದೇಶದ ಪ್ರತಿಯೊಂದಿಗೆ ಆಗಮಿಸಿ ಅಧಿಕಾರವಹಿಸಿಕೊಂಡರು.

ಆದರೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್ ಸುಜಾತ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವೆಂಕಟೇಶಪ್ಪನವರು ಅಧಿಕಾರವಹಿಸಿಕೊಳ್ಳಲು ಸಕ್ಷಮ ಪ್ರಾದಿಕಾರದಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ತಹಶೀಲ್ದಾರ್ ಸುಜಾತ ಪೋಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಸುಜಾತ, ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳು ಮೂಮೆಂಟ್ ಆದೇಶವನ್ನು ನೀಡಿದ್ದಾರೆ. ಅದರಂತೆ ಡಿ.31 ರಂದು ತಹಶೀಲ್ದಾರ್ ಆಗಿ ಅಧಿಕಾರವಹಿಸಿಕೊಂಡಿದ್ಧೇನೆ. ಹಿಂದಿನ ತಹಶೀಲ್ದಾರ್ ಕರ್ನಾಟಕ ರಾಜ್ಯ ಅಡಳಿತ ನ್ಯಾಯಮಂಡಳಿಯಿಂದ ತಡೆಯಾಜ್ಞೆ ಪಡೆದಿರುವ ಆದೇಶದ ಪ್ರತಿ ನನಗೆ ದೊರೆತಿಲ್ಲ. ಜಿಲ್ಲಾಧಿಕಾರಿಗಳ ಸೂಚನೆಯಂತೆ ನಾನು ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೋಲಾರ | ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯ

ಅವಧಿ ಪೂರ್ವ ವರ್ಗಾವಣೆಯಿಂದ ವೈಯುಕ್ತಿಕವಾಗಿ ಅನ್ಯಾಯವಾಗಿತ್ತು. ವರ್ಗಾವಣೆ ಆದೇಶದ ವಿರುದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಿದ್ದೆ, ಸರ್ಕಾರದ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಆಡಳಿತ ನ್ಯಾಯಮಂಡಳಿ ಆದೇಶದಂತೆ ಕಛೇರಿಗೆ ಆಗಮಿಸಿ ವರದಿ ಮಾಡಿಕೊಂಡಿದ್ದೇನೆ ಎಂದು ತಹಶೀಲ್ದಾರ್ ವೆಂಕಟೇಶಪ್ಪ ತಿಳಿಸಿದ್ದಾರೆ.

ದುರಾಡಳಿತ, ಲಂಚದ ಆರೋಪದಲ್ಲಿ ವರ್ಗಾವಣೆ :

ದುರಾಡಳಿತ, ಲಂಚಗುಳಿತನ, ಜನಸಾಮಾನ್ಯರಿಗೆ ನೀಡುತ್ತಿದ್ದ ಕಿರುಕುಳ ಕುರಿತು ಸಾರ್ವಜನರಿಕರ ದೂರಿನ ಮೇರೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆ ಸ್ಥಳಕ್ಕೆ ಸುಜಾತ ಅವರನ್ನು ನೇಮಕ ಮಾಡಲಾಗಿದೆ. ಯಾವುದೇ ಗೊಂದಲವಿಲ್ಲದೆ ಸುಜಾತ ಅವರೇ ಮುಂದುವರೆಯುತ್ತಾರೆ. ತಹಶೀಲ್ದಾರ್ ವೆಂಕಟೇಶಪ್ಪ ಈ ಹಿಂದೆ ಪೋಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪೋಲೀಸ್ ಬುದ್ದಿಯನ್ನು ತೋರಿಸುತ್ತಿದ್ದಾರೆ. ತಾಲ್ಲೂಕಿನಲ್ಲಿ ಇದ್ಯಾವುದು ನಡೆಯುವುದಿಲ್ಲ ಎಂದು ಶಾಸಕ ಎಸ್.ಎನ್ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...