ಬಾಂಗ್ಲಾದಲ್ಲಿ ಹಿಂಸಾಚಾರ; ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

Date:

ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ ಪರಿಣಾಮ ಬೀರಿದ್ದು, ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಬೆಲೆ ಕೂಡ ಕುಸಿತಕಂಡಿದೆ.

ಭಾರತದ ಪೂರ್ವ ರಾಜ್ಯ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಕೋಲಾರದಿಂದಲೇ ಅತೀ ಹೆಚ್ಚು ಟೊಮೆಟೊ ಪೂರೈಕೆಯಾಗುತ್ತದೆ. ಆದರೆ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಬಂಗಾಳದ ವ್ಯಾಪಾರಿಗಳು ಬಾಂಗ್ಲಾಗೆ ಟೊಮೆಟೊ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪೂರೈಕೆ ಕಡಿಮೆಯಾಗಿದ್ದು, ಬೆಲೆಯೂ ಕುಸಿದಿದೆ.

ಕಳೆದ ತಿಂಗಳು, ಕೋಲಾರದ ಮಾರುಕಟ್ಟೆಯಲ್ಲಿ ಬಾಕ್ಸ್‌ ಟೊಮೆಟೊ ಬೆಲೆ ಸುಮಾರು 1,100 ಇತ್ತು. ಇದೀಗ, 350 ರಿಂದ 500 ರೂ.ಗೆ ಕುಸಿದಿದೆ. ಕೆ.ಜಿ ಟೊಮೆಟೊ ಬೆಲೆ 40 ರೂ.ನಿಂದ 12 ರೂ. ಇಳಿಕೆಯಾಗಿದೆ. ಬೆಲೆ ಕುಸಿತವು ಟೊಮೆಟೊ ಬೆಳೆದಿದ್ದ ರೈತರನ್ನು ಕಂಗಾಲಾಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು ಮಾಡುವ ಪಶ್ಚಿಮ ಬಂಗಾಳದ ವ್ಯಾಪಾರಿಗಳು ಟೊಮೆಟೊ ಖರೀದಿಯಲ್ಲಿ ಶೇ.50ರಷ್ಟನ್ನು ಕಡಿತಗೊಳಿಸಿದ್ದಾರೆ. ದಿನನಿತ್ಯ ಕೋಲಾರದಿಂದ ಬಂಗಾಳಕ್ಕೆ 40 ರಿಂದ 50 ಟ್ರಕ್‌ ಟೊಮೆಟೊ ಸಾಗಣೆಯಾಗುತ್ತಿತ್ತು. ಪ್ರಸ್ತುತ, ಕೇವಲ 20 ಟ್ರಕ್‌ಗಳು ಮಾತ್ರವೇ ಟೊಮೆಟೊ ಸಾಗಾಟವಾಗುತ್ತಿದೆ ಎಂದು ಕೋಲಾರ ಎಪಿಎಂಸಿ ಕಾರ್ಯದರ್ಶಿ ಕಿರಣ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 4,000 ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬೆಳಯಲಾಗುತ್ತಿದೆ. ಪಶ್ಚಿಮ ಬಂಗಾಳ ಮಾತ್ರವಲ್ಲದೆ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೂ ಕೋಲಾರದಿಂದ ಟೊಮೆಟೊ ಪೂರೈಕೆಯಾಗುತ್ತದೆ. ಕೋಲಾರ ಜಿಲ್ಲೆಯಲ್ಲಿ ಈ ವರ್ಷ ಸಾಧಾರಣ ಮಳೆಯಾಗಿದ್ದು, ಟೊಮೆಟೊ ಇಳುವರಿ ಉತ್ತಮವಾಗಿತ್ತು. ಆದರೆ, ಪೂರೈಕೆ ಕೊರತೆಯಿಂದಾಗಿ ಬೆಲೆ ಕುಸಿತವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದೆ, ನಷ್ಟದ ಸುಳಿಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗಿರುವ ಮೀಸಲಾತಿಯ ವಿರುದ್ಧ ಕಳೆದೊಂದು ತಿಂಗಳಿನಿಂದ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟವು ಹಿಂಸಾಚಾರಕ್ಕೆ ತಿರುಗಿದ್ದು, ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರಿ ಕಟ್ಟಡಗಳಿಗೆ ನುಗ್ಗಿ ರಾಷ್ಟ್ರೀಯ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದಾರೆ.

ಬ್ಲಾಂಗ್ಲಾ ತೊರೆದಿರುವ ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿದೆ. ತಮಗೆ ಆಶ್ರಯ ನೀಡುವಂತೆ ಅವರು ಬ್ರಿಟನ್ ಮತ್ತು ಅಮೆರಿಕಗಳಲ್ಲಿ ಮನವಿ ಮಾಡಿದ್ದರು. ಅವರ ಮನವಿಯನ್ನು ಎರಡೂ ದೇಶಗಳು ತಿರಸ್ಕರಿಸಿವೆ. ಬಾಂಗ್ಲಾ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರು ಕೂಡ ರಾಜೀನಾಮೆ ನೀಡಿದ್ದಾರೆ.

ಬಾಂಗ್ಲಾ ಸೇನೆಯು ಮಧ್ಯಂತರ ಸರ್ಕಾರ ರಚಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಡಾ. ಮುಹಮ್ಮದ್ ಯೂನಸ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಿದೆ. ಬಾಂಗ್ಲಾದಲ್ಲಿ ಹಿಂಸಾಚಾರವನ್ನು ನಿಯಂತ್ರಿಸಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ತಹಬದಿಗೆ ತರುವುದಾಗಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...