ಬೆಂಗಳೂರು | ಪರಿಸರ ಜಾಗೃತಿ: ಮಂದಿರ, ‌ಮಸೀದಿ, ಚರ್ಚ್, ಪೊಲೀಸ್ ಠಾಣೆಗೆ ತೆರಳಿ ಸಸಿ ನೆಟ್ಟ ಸಿಐಒ ಚಿಣ್ಣರು

Date:

“ಮಣ್ಣಲ್ಲಿ ಕೈಗಳು-ಮನಸ್ಸಲ್ಲಿ ಭಾರತ” ಧ್ಯೇಯ ವಾಕ್ಯದೊಂದಿಗೆ ದೇಶಾದ್ಯಂತ 10 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿರುವ ಅಭಿಯಾನದ ಅಂಗವಾಗಿ ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಸೇಶನ್ (ಸಿಐಒ) ಜಯನಗರ ಘಟಕದ ವತಿಯಿಂದ ಮಕ್ಕಳು ತಿಲಕನಗರ ವ್ಯಾಪ್ತಿಯಲ್ಲಿ ಶಾಲೆ, ದೇವಸ್ಥಾನ, ಚರ್ಚ್, ಮಸೀದಿ, ಪೊಲೀಸ್ ಠಾಣೆ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು.

ತಿಲಕ್ ನಗರ್ ಪೊಲೀಸ್ ಠಾಣೆಗೆ ಭೇಟಿ ಕೊಟ್ಟ ಸಿಐಒ ಮಕ್ಕಳ ತಂಡ ಪೊಲೀಸ್ ಇನ್ಸ್‌ಪೆಕ್ಟರ್ ಕೆ. ವಿಶ್ವನಾಥ್, ಎಎಸ್ಐ ಸದ್ದಾಂ ಹುಸೇನ್, ಇತರ ಅಧಿಕಾರಿಗಳನ್ನು ಭೇಟಿ ಮಾಡಿ‌ ಸಸಿಗಳನ್ನು ಕೊಟ್ಟು ಪರಿಸರ ಉಳಿಸುವ ಸಂದೇಶ ನೀಡಿದರು. ಮಕ್ಕಳ ಪರಿಸರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪೊಲೀಸ್ ಅಧಿಕಾರಿಗಳು ಮಕ್ಕಳಿಗೆ ಸಿಹಿ ನೀಡಿ ಅಭಿನಂದಿಸಿದರು.

1001327627

ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಮಕ್ಕಳು ದೇವಸ್ಥಾನದ ಬಿ. ಪಳಿನಿ, ವೈ. ರಾಧಾಕೃಷ್ಣ ಅವರನ್ನು ಭೇಟಿ ಮಾಡಿ ಸಸಿಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಟನ್ ಮೆಮೋರಿಯಲ್ ಚರ್ಚ್‌ಗೆ ತೆರಳಿ ಚರ್ಚ್‌ನ ಫಾದರ್ ಅವರಿಗೆ ಸಸಿಗಳನ್ನು ನೀಡಲಾಯಿತು. ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ಸಿಸ್ಟರ್ ರೆನ್ನಿ‌ ಡಿಸೋಜಾ, ಶಿಕ್ಷಕಿ ವಿಮಲಾ ಅವರನ್ನು ಭೇಟಿ ಮಾಡಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

1001327626

ರೇನ್ ಟ್ರೀ ಶಾಲೆಯಲ್ಲಿ ಶಿಕ್ಷಕಿಯರಾದ ನಾಜಿಯಾ, ಸುಹಾಸಿನಿ, ಅಂಜುಮ್ ಅವರನ್ನು ಭೇಟಿ ನೀಡಿ ಸಸಿಗಳನ್ನು ನೀಡಲಾಯಿತು. ಇದೇ ವೇಳೆ ಹುಸ್ನಾ ಮಸೀದಿಯ ಮೌಲ್ವಿ ಅಬ್ದುಲ್ ರಹೀಮ್ ಸಂಜಾರ್ ಅವರನ್ನು ಭೇಟಿ ಮಾಡಿದ ಮಕ್ಕಳು ಸಸಿಗಳನ್ನು ನೀಡಿ ಪರಿಸರ ಉಳಿಸುವ ಸಂದೇಶ ನೀಡಿದರು.

ಈ ವೇಳೆ ಸಿಐಒ ಮಾರ್ಗದರ್ಶಕಿ ಇಶ್ರತುನ್ನಿಸಾ, ಜೆಐಎಚ್ ಮಹಿಳಾ ಘಟಕದ ಸಂಚಾಲಕಿ ಮುಸದ್ದಿಖಾ ಸೇರಿದಂತೆ ಹೊಣೆಗಾರರು, ಮಕ್ಕಳ ಪೋಷಕರು ಇದ್ದರು.

1001327621 1
1001327622
1001327628
1001327629
1001327625
1001327621
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...