ಬೀದರ್ | ಭಜನೆ ಗಾಯಕ ಗೋವಿಂದ ಚವ್ಹಾಣಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Date:

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ಭಜನೆ’ ಕ್ಷೇತ್ರದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಖೆರ್ಡಾ(ಬಿ) ಶಂಕ್ರು ತಾಂಡಾ ನಿವಾಸಿ ಗೋವಿಂದ ಚವ್ಹಾಣ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಭಜನೆ ಗಾಯಕರಾದ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಚಿಕ್ಕಂದಿಂದಲೇ ಬಂಜಾರ ಭಜನೆ, ಜಾನಪದ ಕಲೆ ಮೈಗೂಡಿಸಿಕೊಂಡು ವಿವಿಧ ಕಾರ್ಯಕ್ರಮ, ಉತ್ಸವಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ದೂರದರ್ಶನ, ಆಕಾಶವಾಣಿ ಸೇರಿದಂತೆ ವಿವಿಧೆಡೆ ಭಜನಾ ಕಲಾ ತಂಡದೊಂದಿಗೆ ಭಾಗವಹಿಸಿ ಕಲೆ ಪ್ರದರ್ಶಿಸಿದ್ದಾರೆ.

ಇದೀಗ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಗೋವಿಂದ ಅವರು ಈದಿನ.ಕಾಮ್‌ ಜೊತೆ ಮಾತನಾಡಿ, ʼಬಂಜಾರ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದ ಅಕಾಡೆಮಿ ಅಧ್ಯಕ್ಷ ಗೋವಿಂದ ಸ್ವಾಮಿ ಅವರಿಗೆ ಧನ್ಯವಾದ ಸಲ್ಲಿಸುವೆ. ಸುಮಾರು ಐದು ದಶಕಗಳಿಂದ ಜಾನಪದ, ಬಂಜಾರ ಸಂಸ್ಕೃತಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಈಗ ಗುರುತಿಸಿ ಆಯ್ಕೆ ಮಾಡಿದ್ದು ಖುಷಿ ನೀಡಿದೆʼ ಎಂದರು.

ಅರ್ಹತೆ ಇದ್ದರೂ ದಕ್ಕದ ಮಾಸಾಶನ :

ಗಾಯಕ ಗೋವಿಂದ ಚಚ್ಹಾಣ ಅವರಿಗೆ ಈಗ 75 ವರ್ಷ. ಸುಮಾರು ಐದು ದಶಕಗಳಿಂದ ಭಜನೆ ಸೇರಿದಂತೆ ಅನೇಕ ಕಲಾ ಪ್ರಕಾರಗಳಲ್ಲಿ ಸಕ್ರಿಯರಾಗಿ ತಮ್ಮ ಕಲೆ ಪ್ರದರ್ಶನ ಮಾಡುತ್ತಿದ್ದಾರೆ. ಸರ್ಕಾರ ನೀಡುವ ಕಲಾವಿದರ ಮಾಸಾಶನ ಪಡೆಯಲು ಎಲ್ಲ ರೀತಿಯ ಅರ್ಹತೆಯಿದ್ದರೂ ಸಹ ಗೋವಿಂದ ಹಾಗೂ ಅವರ ತಂಡದವರು ಮಾಸಾಶನದಿಂದ ವಂಚಿತರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ʼಕಳೆದ ಹತ್ತು ವರ್ಷಗಳ ಹಿಂದೆ ಕಲಾವಿದರ ಮಾಸಾಶನಕ್ಕಾಗಿ ಅರ್ಜಿ ಹಾಕಿದ್ದೆ, ಆದರೆ ಯಾರೊಬ್ಬರೂ ಸ್ಪಂದಿಸಲಿಲ್ಲ. ತದನಂತರ ಪುನಃ ಅರ್ಜಿ ಹಾಕಲಿಲ್ಲ. ನಮ್ಮಂತಹ ಹಿರಿಯರಿಗೆ ಮಾಸಾಶನಕ್ಕಾಗಿ ಪರಿಗಣಿಸಬೇಕುʼ ಎಂದು ಗೋವಿಂದ ಚವ್ಹಾಣ ಅವರು ಈದಿನ.ಕಾಮ್‌ ಜೊತೆ ಮಾತನಾಡಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...