ಬಿಜೆಪಿ ಪರ ತುತ್ತೂರಿ ಊದುವ ಪತ್ರಕರ್ತರ ಬಹಿಷ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಲ್ಲ: ಸಿದ್ದರಾಮಯ್ಯ ತಿರುಗೇಟು

Date:

  • ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧಿಸಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ
  • ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುವುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲವು ಟಿವಿ ನಿರೂಪಕರನ್ನು ಇಂಡಿಯಾ ಒಕ್ಕೂಟ ಬಹಿಷ್ಕರಿಸಿರುವ ಬಗ್ಗೆ ಸಮರ್ಥಿಸಿಕೊಂಡು ಟ್ವೀಟ್‌ ಮಾಡಿರುವ ಅವರು, “ಜೆ ಪಿ ನಡ್ಡಾ ಅವರೇ, ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ” ಎಂದು ಕುಟುಕಿದ್ದಾರೆ.

ದೇಶದ ಪ್ರಧಾನಮಂತ್ರಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸದೇ ದೇಶದ ಎಲ್ಲ ಪತ್ರಕರ್ತರನ್ನು ಬಹಿಷ್ಕರಿಸಿರುವಾಗ ಒಂದು ಪಕ್ಷದ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಾ, ಮಾಧ್ಯಮ ಧರ್ಮಕ್ಕೆ ದ್ರೋಹ ಬಗೆಯುತ್ತಿರುವ ಕೆಲವು ಪತ್ರಕರ್ತರ ಮೇಲೆ ಬಹಿಷ್ಕಾರ ಹೇರಿದ್ದನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಹೇಳಿ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು, ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು ಹಾಗೂ ಪತ್ರಿಕಾ ಸ್ವಾತಂತ್ರ್ಯ, ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ ಬಗ್ಗೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು:

• ಸಿದ್ದಿಕ್‌ ಕಪ್ಪನ್‌
• ಮೊಹಮ್ಮದ್‌ ಝುಬೇರ್
• ಅಜಿತ್‌ ಓಝಾ
• ಜಸ್ಪಾಲ್‌ ಸಿಂಘ್‌
• ಸಜದ್‌ ಗುಲ್‌

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು:

• ರಾಕೇಶ್‌ ಸಿಂಗ್‌ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
• ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ
• ಜಿ ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
• ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌ಐ ನೇಮಕಾತಿ ಹಗರಣ ಕುರಿತು ವರದಿ
• ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!!
2015 – 136ನೇ ಸ್ಥಾನ
2019 – 140ನೇ ಸ್ಥಾನ
2022 – 150ನೇ ಸ್ಥಾನ
2023 – 161ನೇ ಸ್ಥಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...