ಬಂಟ್ವಾಳ | ರಾಜಕಾರಣಿಗಳ ಮೇಲಿನ ಭಕ್ತಿ, ಸಂವಿಧಾನಕ್ಕೆ ಅಪಾಯ: ಕ್ಲಿಪ್ಟನ್ ರೊಜಾರಿಯೋ

Date:

ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಕ್ತಿ ತೋರಿಸಬೇಡಿ. ಇದು ಸಂವಿಧಾನಕ್ಕೆ ಸವಾಲು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (ಎಐಎಲ್ಎಜೆ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕ್ಲಿಪ್ಟನ್ ಡಿ’ ರೊಜಾರಿಯೋ ಹೇಳಿದರು.

ಅವರು (ಎಐಎಲ್ಎಜೆ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬಿ ಸಿ ರೋಡಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ‘ಸಂವಿಧಾನದ ಮುಂದಿರುವ ಸವಾಲುಗಳು’ ಎಂಬ ವಿಚಾರವಾಗಿ ಮಾತನಾಡಿದರು.

ಇಂದು ರಾಜಕೀಯ ನಾಯಕರನ್ನು ಹೀರೋಗಳನ್ನಾಗಿ ಭಾರೀ ಭಕ್ತಿಯಿಂದ ನೋಡುತ್ತಿರುವುದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾಗಿದೆ. ಭಕ್ತರಾಗಿಬಿಟ್ಟರೆ ಪ್ರಭುತ್ವವನ್ನು ಪ್ರಶ್ನೆ ಮಾಡೋದು ಸಾಧ್ಯವಿಲ್ಲ. ಅಂಬೇಡ್ಕರ್ ಅವರು ಈ ಅಪಾಯವನ್ನು 1974ರಲ್ಲಿಯೇ ಹೇಳಿದ್ದರು. ಇದನ್ನು ನಾವು ಭಾರತ ಸಂವಿಧಾನದ ಭಾರೀ ಅಪಾಯವಾಗಿ ಕಾಣಬೇಕು ಎಂದು ಹೇಳಿದರು.
ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಪ್ರಜಾಪ್ರಭುತ್ವದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಬಡತನ ಸಂವಿಧಾನದ ಆಶಯಗಳನ್ನು ಸಾಧಿಸಲು ಅಡ್ಡಿಯಾಗುತ್ತಿದೆ. ಬಡವರಿಗೆ ಇಂದು ಒಬ್ಬ ನಾಗರಿಕನಾಗಿ ಚಿಂತಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಂವಿಧಾನದ ಆಶಯವನ್ನು ಮನದಟ್ಟು ಮಾಡಿಕೊಳ್ಳಲು ಕೂಡಾ ಸಾಧ್ಯವಿಲ್ಲ. “ಇಂದು ಯುವಕರು ಧರ್ಮದ ಗೋಡೆಗಳನ್ನು ಸೃಷ್ಠಿ ಮಾಡುತ್ತಿದ್ದಾರೆ. ಇದನ್ನು ಒಡೆಯಬೇಕಾಗಿದೆ. ಈ ಮೂಲಕ ನಾವು ಸಂವಿಧಾನಕ್ಕೆ ಪೂರಕವಾಗಿ ಬದುಕಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನವನ್ನು ಎಲ್ಲರೂ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅದೇ ರೀತಿಯ ಶಿಕ್ಷಣ ನಮ್ಮ ಸಮಾಜದಲ್ಲಿ ಬೇಕಾಗಿದೆ. ಸಮಾಜದಲ್ಲಿ ಬಡವ-ಶ್ರೀಮಂತ ಎಂಬ ಭೇದ-ಭಾವ, ಜಾತಿ ಶೋಷಣೆ, ಧರ್ಮ-ಲಿಂಗ ತಾರತಮ್ಯ ಇಲ್ಲದ ಸಮಾಜ ಇಂದು ನಿರ್ಮಾಣವಾಗಬೇಕಿದೆ. ಇದು ಇಂದಿನ ಹಿರಿಯರು ಮುಂದಿನ ಸಮಾಜಕ್ಕೆ ನೀಡಬಹುದಾದ ಕೊಡುಗೆ” ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: ಬಂಟ್ವಾಳ | ಸರ್ಕಾರಿ ಸೇರಿ ಹಲವು ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ

“ದೇಶದ ಪ್ರಜಾಪ್ರಭುತ್ವ ಇಂದಿರಾ ಗಾಂಧಿ ಆಡಳಿತದಲ್ಲಿ ‘ತುರ್ತು ಪರಿಸ್ಥಿತಿ’ ಎಂಬ ಅತ್ಯಂತ ಕರಾಳ ದಿನಗಳನ್ನು ಎದುರಿಸಿತ್ತು. ಆ ಸಂದರ್ಭ ಸಂವಿಧಾನದಲ್ಲಿ ಬದಲಾವಣೆ ತರಲು ಇಂದಿರಾ ಗಾಂಧಿ ಪ್ರಯತ್ನ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಉಂಟಾಗುವ ತಿದ್ದುಪಡಿ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು. ಹೀಗಾಗಿ ಸಂವಿಧಾನ ಬದುಕಿ ಉಳಿದಿದೆ” ಎಂದರು.

ಹಿರಿಯ ವಕೀಲ ಮನೋರಾಜ್ ಹಾಗೂ ಎಐಎಲ್ಎಜೆ ಕೇಂದ್ರ ಸಮಿತಿಯ ಅವನಿ ಮಾತನಾಡಿದರು. ಜಿಲ್ಲಾಧ್ಯಕ್ಷ ತುಳಸಿದಾಸ್, ಹೈ ಕೋರ್ಟ್ ವಕೀಲೆ ಸಂಧ್ಯಾ ಪ್ರಭು, ಹಾಸನದ ವಕೀಲ ಮಹೇಶ್, ಬಂಟ್ವಾಳದ ವಕೀಲ ಶ್ರೀಧರ್ ಪೈ ಮೊದಲಾದವರು ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...