ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

Date:

ಆತ್ಮರಕ್ಷಣೆಯ ರಿವಾಲ್ವರ್‌ನಿಂದ ‘ಮಿಸ್‌ಫೈರ್’ ಆಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಮುಖಂಡರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡವರು. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ಅಚಾನಕ್ಕಾಗಿ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಗಾಯಗೊಂಡಿದ್ದು, ಮಂಗಳೂರು ನಗರದ ಪಡೀಲ್‌ನಲ್ಲಿರುವ ಜನಪ್ರಿಯ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.

ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಇಂಟಕ್ ಮುಖಂಡರಾಗಿರುವ ಬೊಂಡಾಲ ಚಿತ್ತರಂಜನ್‌ ಶೆಟ್ಟಿಯವರು ಇತ್ತೀಚೆಗಷ್ಟೇ ತನ್ನ ಆತ್ಮರಕ್ಷಣೆಗಾಗಿ ಪರವಾನಗಿ ಪಡೆದು ರಿವಾಲ್ವರ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
janapriya hospital mangalore

ಇಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊಡಾಜೆ ಸಮೀಪದ ಅನಂತಾಡಿ ಬಳಿ ಕಾರಿನಲ್ಲಿದ್ದ ತನ್ನದೇ ರಿವಾಲ್ವರ್‌ನ ಗುಂಡು ಆಕಸ್ಮಿಕವಾಗಿ ಸಿಡಿದು ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸ್ಪಷ್ಟತೆಯ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ. ಶೆಟ್ಟಿಯವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ರಾಜ್ಯ ಮಾಹಿತಿ ಆಯುಕ್ತರ ಆಯ್ಕೆ ಪಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಿಂದ ನೋಟಿಸ್

ಈ ಬಗ್ಗೆ ಗಾಯಾಳು ಶೆಟ್ಟಿಯವರು ದಾಖಲಾಗಿರುವ ಮಂಗಳೂರು ಪಡೀಲ್ ಜನಪ್ರಿಯ ಆಸ್ಪತ್ರೆಯ ವೈದ್ಯಾಧಿಕಾರಿ, ಡೈರೆಕ್ಟರ್ ಡಾ.ಕಿರಾಶ್ ಪರ್ತಿಪ್ಪಾಡಿಯವರನ್ನು ಈದಿನ ಡಾಟ್ ಕಾಮ್ ಸಂಪರ್ಕಿಸಿದಾಗ, “ಮಿಸ್‌ಫೈರ್ ಆಗಿ ಗಾಯಗೊಂಡಿರುವುದಾಗಿ ಪ್ರಾಥಮಿಕವಾಗಿ ನಮಗೂ ಮಾಹಿತಿ ಸಿಕ್ಕಿದೆ. ನಾನು ಬೇರೊಂದು ರೋಗಿಯ ಶಸ್ತ್ರಚಿಕಿತ್ಸೆಯಲ್ಲಿರುವ ವೇಳೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನನಗೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಮಾಹಿತಿ ಸಿಕ್ಕ ಬಳಿಕ ತಿಳಿಸುವೆ” ಎಂದು ಪ್ರತಿಕ್ರಿಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಝೀರ್ ಬಜಾಲ್ ಅವರನ್ನು ಸಂಪರ್ಕಿಸಿದಾಗ, “ಮಿಸ್‌ಫೈರ್ ಆಗಿ ಈ ಘಟನೆ ನಡೆದಿದೆ ಅಂತ ನಮಗೂ ಸಿಕ್ಕಿರುವ ಪ್ರಾಥಮಿಕ ಮಾಹಿತಿ. ಈ ಬಗ್ಗೆ ಕುಟುಂಬದ ಸದಸ್ಯರನ್ನು ಸಂಪರ್ಕಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...